ಕೃಷಿ ಉತ್ಪನ್ನಗಳ ಮಾರಾಟ ಸಂಸ್ಥೆಗಳಿಗೆ ಟಿ.ಡಿ.ಎಸ್‍ ವಿನಾಯಿತಿ : ಕ್ಯಾಂಪ್ಕೊಅಭಿನಂದನೆ

September 23, 2019
5:00 PM
Advertisement

ಮಂಗಳೂರು: ಕೇಂದ್ರ ಸರಕಾರವು ಇತ್ತೀಚೆಗೆ ತಂದಿದ್ದ, ಬ್ಯಾಂಕ್ ಖಾತೆಗಳಿಂದ ಹಿಂಪಡೆಯುವ ರೂ.1 ಕೋಟಿ ಮೇಲ್ಪಟ್ಟ ಹಣದ ಮೇಲಿನ 2% ಮೂಲತೆರಿಗೆ ಕಡಿತ (ಟಿ.ಡಿ.ಎಸ್.) ನಿಯಮವನ್ನು, ನೂತನವಾಗಿ ಹೊರಡಿಸಿರುವ ಸುತ್ತೋಲೆಯ ಅನುಸಾರ ಸೆ.1 ರಿಂದ ಅನ್ವಯವಾಗುವಂತೆ, ಸಡಿಲಗೊಳಿಸಿ ಆದೇಶ ಹೊರಡಿಸಿದೆ. ಕೃಷಿಕರ ಹಣಕಾಸು ಸಮಸ್ಯೆಗಳನ್ನು ಮನಗಂಡು ಕೇಂದ್ರ ಸರಕಾರವು ಈ ಆದೇಶವನ್ನು ಹೊರಡಿಸಿದ್ದು, ಎ.ಪಿ.ಎಮ್.ಸಿ. ಸದಸ್ಯತ್ವ ಹೊಂದಿ ಕಾರ್ಯಾಚರಿಸುವ ಎಲ್ಲಾ ವ್ಯಾಪಾರಿಗಳು ಮತ್ತು ಕೃಷಿ ಉತ್ಪನ್ನಗಳ ಮಾರಾಟ ಸಂಸ್ಥೆಗಳಿಗೆ ಈ ವಿನಾಯಿತಿ ಅನ್ವಯಿಸುತ್ತದೆ. ಈ ಮೂಲಕ ಸಂಸ್ಥೆಗಳ ಮೇಲಿನ ಟಿ.ಡಿ.ಎಸ್‍ ಭಾರವನ್ನು ಇಳಿಸಿ ಕೃಷಿಕ ಸಮುದಾಯದ ಸಂಕಷ್ಟಕ್ಕೆ ಸ್ಪಂದಿಸಿದ ಕೇಂದ್ರ ಸರಕಾರದ ಈ ಕ್ರಮಕ್ಕೆ ಕೃಷಿಕ ಸಮುದಾಯದ ಪರವಾಗಿ ಕ್ಯಾಂಪ್ಕೊ ಸಂಸ್ಥೆಯು ಅಭಿನಂದನೆಯನ್ನು ಸಲ್ಲಿಸುತ್ತದೆ ಎಂದು ಪ್ರಕಟಣೆ ತಿಳಿಸಿದೆ.

Advertisement
Advertisement
Advertisement

ಈ ಹಿಂದೆ, 2% ಮೂಲತೆರಿಗೆ ನಿಯಮವನ್ನುಜಾರಿಗೆ ತಂದಿದ್ದ ಸಂದರ್ಭದಲ್ಲಿ, ಸಂಸ್ಥೆಯ ವತಿಯಿಂದ ದ.ಕ.ಸಂಸದ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಕೇಂದ್ರ ಹಣಕಾಸು ಸಚಿವೆ  ನಿರ್ಮಲಾ ಸೀತಾರಾಮನ್ ಮತ್ತು ಹಣಕಾಸು ಖಾತೆರಾಜ್ಯ ಸಚಿವರಾದ ಅನುರಾಗ್‍ ಠಾಕೂರ್‍ ಅವರಿಗೆ, ಈ ನಿಯಮದಿಂದ ಕೃಷಿಕರಿಗೆ ತಲೆದೋರಬಹುದಾದ ಸಮಸ್ಯೆಗಳನ್ನು ಮನವರಿಕೆ ಮಾಡಿಕೊಟ್ಟು, ನಿಯಮದ ಸಡಿಲಿಕೆಗಾಗಿ ಮನವಿ ಮಾಡಲಾಗಿತ್ತು. ಇದೀಗ, ಮನವಿಯನ್ನು ಪುರಸ್ಕರಿಸಿ ನಿಯಮದಲ್ಲಿ ಸಡಿಲಿಕೆತಂದಿರುವುದು ಕೃಷಿಕ ಸಮುದಾಯದಲ್ಲಿ ಸಂತಸವನ್ನುಂಟುಮಾಡಿದೆ ಎಂದು ಪ್ರಕಟಣೆ ತಿಳಿಸಿದೆ.

Advertisement

 

Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಪರಿಸರ ಸ್ನೇಹಿ ಕೈಚೀಲಗಳ ಕುರಿತು ಒಂದಿಷ್ಟು ಮಾಹಿತಿ ನಿಮಗಾಗಿ : ನಮ್ಮ ದೇಶದ ಡಿಫೆನ್ಸ್ ರೀಸರ್ಚ ಡೆವಲಪ್ಮೆಂಟ್ ಸೆಂಟರ್‌ನಿಂದ ತಯಾರಿ
April 20, 2024
5:07 PM
by: The Rural Mirror ಸುದ್ದಿಜಾಲ
ಭೂ ಅಂತರ್ಗತ ನೀರಿನ ಒರತೆಗಳು.. ಮೇಲ್ಮೈ ಒರತೆ ಮತ್ತುಶಿಲಾಸ್ತರದ ನಡುವಣ… : ಸಮುದ್ರ ಸೇರುವ ನೀರು ವ್ಯರ್ಥವೇ ? ಖಂಡಿತ ಅಲ್ಲ.
April 20, 2024
4:46 PM
by: The Rural Mirror ಸುದ್ದಿಜಾಲ
ರಕ್ಷಣಾ ವಲಯದಲ್ಲಿ ಭಾರದ ಸಾಧನೆ : ಫಿಲಿಪೈನ್ಸ್‌ಗೆ ಭಾರತದ ಬ್ರಹ್ಮೋಸ್ ರಫ್ತು : ಬೇರೆ ರಾಷ್ಟ್ರಗಳಿಂದ ಹೆಚ್ಚಿದ ಬೇಡಿಕೆ
April 20, 2024
3:14 PM
by: The Rural Mirror ಸುದ್ದಿಜಾಲ
ವೆದರ್‌ ಮಿರರ್‌ | 20.04.2024 | ರಾಜ್ಯದ ಹಲವೆಡೆ ಇಂದು ಮಳೆಯ ಮುನ್ಸೂಚನೆ
April 20, 2024
11:35 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror