Advertisement
ಸುದ್ದಿಗಳು

ಕೃಷಿ ಉತ್ಪನ್ನಗಳ ಮಾರಾಟ ಸಂಸ್ಥೆಗಳಿಗೆ ಟಿ.ಡಿ.ಎಸ್‍ ವಿನಾಯಿತಿ : ಕ್ಯಾಂಪ್ಕೊಅಭಿನಂದನೆ

Share

ಮಂಗಳೂರು: ಕೇಂದ್ರ ಸರಕಾರವು ಇತ್ತೀಚೆಗೆ ತಂದಿದ್ದ, ಬ್ಯಾಂಕ್ ಖಾತೆಗಳಿಂದ ಹಿಂಪಡೆಯುವ ರೂ.1 ಕೋಟಿ ಮೇಲ್ಪಟ್ಟ ಹಣದ ಮೇಲಿನ 2% ಮೂಲತೆರಿಗೆ ಕಡಿತ (ಟಿ.ಡಿ.ಎಸ್.) ನಿಯಮವನ್ನು, ನೂತನವಾಗಿ ಹೊರಡಿಸಿರುವ ಸುತ್ತೋಲೆಯ ಅನುಸಾರ ಸೆ.1 ರಿಂದ ಅನ್ವಯವಾಗುವಂತೆ, ಸಡಿಲಗೊಳಿಸಿ ಆದೇಶ ಹೊರಡಿಸಿದೆ. ಕೃಷಿಕರ ಹಣಕಾಸು ಸಮಸ್ಯೆಗಳನ್ನು ಮನಗಂಡು ಕೇಂದ್ರ ಸರಕಾರವು ಈ ಆದೇಶವನ್ನು ಹೊರಡಿಸಿದ್ದು, ಎ.ಪಿ.ಎಮ್.ಸಿ. ಸದಸ್ಯತ್ವ ಹೊಂದಿ ಕಾರ್ಯಾಚರಿಸುವ ಎಲ್ಲಾ ವ್ಯಾಪಾರಿಗಳು ಮತ್ತು ಕೃಷಿ ಉತ್ಪನ್ನಗಳ ಮಾರಾಟ ಸಂಸ್ಥೆಗಳಿಗೆ ಈ ವಿನಾಯಿತಿ ಅನ್ವಯಿಸುತ್ತದೆ. ಈ ಮೂಲಕ ಸಂಸ್ಥೆಗಳ ಮೇಲಿನ ಟಿ.ಡಿ.ಎಸ್‍ ಭಾರವನ್ನು ಇಳಿಸಿ ಕೃಷಿಕ ಸಮುದಾಯದ ಸಂಕಷ್ಟಕ್ಕೆ ಸ್ಪಂದಿಸಿದ ಕೇಂದ್ರ ಸರಕಾರದ ಈ ಕ್ರಮಕ್ಕೆ ಕೃಷಿಕ ಸಮುದಾಯದ ಪರವಾಗಿ ಕ್ಯಾಂಪ್ಕೊ ಸಂಸ್ಥೆಯು ಅಭಿನಂದನೆಯನ್ನು ಸಲ್ಲಿಸುತ್ತದೆ ಎಂದು ಪ್ರಕಟಣೆ ತಿಳಿಸಿದೆ.

ಈ ಹಿಂದೆ, 2% ಮೂಲತೆರಿಗೆ ನಿಯಮವನ್ನುಜಾರಿಗೆ ತಂದಿದ್ದ ಸಂದರ್ಭದಲ್ಲಿ, ಸಂಸ್ಥೆಯ ವತಿಯಿಂದ ದ.ಕ.ಸಂಸದ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಕೇಂದ್ರ ಹಣಕಾಸು ಸಚಿವೆ  ನಿರ್ಮಲಾ ಸೀತಾರಾಮನ್ ಮತ್ತು ಹಣಕಾಸು ಖಾತೆರಾಜ್ಯ ಸಚಿವರಾದ ಅನುರಾಗ್‍ ಠಾಕೂರ್‍ ಅವರಿಗೆ, ಈ ನಿಯಮದಿಂದ ಕೃಷಿಕರಿಗೆ ತಲೆದೋರಬಹುದಾದ ಸಮಸ್ಯೆಗಳನ್ನು ಮನವರಿಕೆ ಮಾಡಿಕೊಟ್ಟು, ನಿಯಮದ ಸಡಿಲಿಕೆಗಾಗಿ ಮನವಿ ಮಾಡಲಾಗಿತ್ತು. ಇದೀಗ, ಮನವಿಯನ್ನು ಪುರಸ್ಕರಿಸಿ ನಿಯಮದಲ್ಲಿ ಸಡಿಲಿಕೆತಂದಿರುವುದು ಕೃಷಿಕ ಸಮುದಾಯದಲ್ಲಿ ಸಂತಸವನ್ನುಂಟುಮಾಡಿದೆ ಎಂದು ಪ್ರಕಟಣೆ ತಿಳಿಸಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಮಾರುಕಟ್ಟೆಯಲ್ಲಿ ಬೆಲೆ ಇಳಿಕೆ | ಮಾರ್ಚ್‌ ತಿಂಗಳ ಇಳಿಕೆಗೆ ಹಲವು ಕಾರಣ…

ಇತ್ತೀಚೆಗೆ ಅಡಿಕೆ ಮಾರುಕಟ್ಟೆಯಲ್ಲಿ ಬೆಲೆಯಲ್ಲಿ ಸ್ವಲ್ಪ ಕುಸಿತ ಕಂಡುಬರುತ್ತಿದೆ. ವ್ಯಾಪಾರಿಗಳ ನಿಧಾನ ಖರೀದಿ,…

5 hours ago

ಪೂರ್ವ ಮುಂಗಾರು ಸಿಡಿಲು, ಗಾಳಿ ಮಳೆಗೆ ಮುನ್ನೆಚ್ಚರಿಕೆ ವಹಿಸಿ : ವಿಜಯನಗರ ಜಿಲ್ಲಾಧಿಕಾರಿ ಸೂಚನೆ

ಪೂರ್ವ ಮುಂಗಾರು ಅವಧಿಯಲ್ಲಿ ಗುಡುಗು-ಸಿಡಿಲು ಹಾಗೂ ಗಾಳಿ ಮಳೆಯ ಅಪಾಯ ಇರುವ ಹಿನ್ನೆಲೆಯಲ್ಲಿ…

11 hours ago

ರಾಜ್ಯದಲ್ಲಿ ಟ್ರಾನ್ಸ್ಫಾರ್ಮರ್ ಕೊರತೆ: ಕೇರಳದಿಂದ ಖರೀದಿಗೆ ಸರ್ಕಾರ ನಿರ್ಧಾರ

ರಾಜ್ಯದಲ್ಲಿ ಟ್ರಾನ್ಸ್ಫಾರ್ಮರ್ ಕೊರತೆ ಉಂಟಾದ ಹಿನ್ನೆಲೆಯಲ್ಲಿ ಕೇರಳದಿಂದ ಖರೀದಿ ಮಾಡಲು ಸರ್ಕಾರ ನಿರ್ಧರಿಸಿದೆ.…

11 hours ago

ಭತ್ತದ ಗದ್ದೆಯಿಂದ ಅಡಿಕೆ ತೋಟ | ಮಣ್ಣಿನ ಆರೋಗ್ಯದ ಮೇಲೆ ಪರಿಣಾಮ ಬಿಚ್ಚಿಟ್ಟ ಸಂಶೋಧನೆ

ಅಕ್ಕಿ ಗದ್ದೆಗಳನ್ನು ಅಡಿಕೆ ತೋಟಗಳಾಗಿ ಪರಿವರ್ತಿಸಿದಾಗ ಮಣ್ಣಿನ ನೈಟ್ರೋಜನ್‌ ಲಭ್ಯತೆ ಕಡಿಮೆಯಾಗುತ್ತದೆ ಎಂದು…

20 hours ago

ಹವಾಮಾನ ವರದಿ | 09-03-2026 | ಕರಾವಳಿ–ಮಲೆನಾಡಿನಲ್ಲಿ ಇಂದು ಸಂಜೆ ಗುಡುಗು ಮಳೆಯ ಸಾಧ್ಯತೆ | ಮಾರ್ಚ್ ಮಧ್ಯಭಾಗದಲ್ಲಿ ಮಳೆ ಚಟುವಟಿಕೆ ಹೆಚ್ಚಳ..?

ರ್ನಾಟಕದ ಹಲವು ಜಿಲ್ಲೆಗಳಲ್ಲಿ ಬಿಸಿಲಿನೊಂದಿಗೆ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಕರಾವಳಿ ಹಾಗೂ…

1 day ago

ರೈತರಿಂದ ಉದ್ಯಮಿಗಳವರೆಗೆ : ಕೃಷಿ ಕ್ಷೇತ್ರಕ್ಕೆ ಸರ್ಕಾರದ ಹೊಸ ದೃಷ್ಟಿಕೋನ

ರೈತರನ್ನು ಉದ್ಯಮಿಗಳನ್ನಾಗಿ ಮಾಡಲು ಬೆಳೆ ಮೌಲ್ಯವರ್ಧನೆ ಮತ್ತು ಮಾರುಕಟ್ಟೆ ಸಂಪರ್ಕ ವ್ಯವಸ್ಥೆಗಳನ್ನು ಸರ್ಕಾರ…

1 day ago