Advertisement
ಸುದ್ದಿಗಳು

ಕೃಷಿ ಉತ್ಪನ್ನಗಳ ಮಾರಾಟ ಸಂಸ್ಥೆಗಳಿಗೆ ಟಿ.ಡಿ.ಎಸ್‍ ವಿನಾಯಿತಿ : ಕ್ಯಾಂಪ್ಕೊಅಭಿನಂದನೆ

Share

ಮಂಗಳೂರು: ಕೇಂದ್ರ ಸರಕಾರವು ಇತ್ತೀಚೆಗೆ ತಂದಿದ್ದ, ಬ್ಯಾಂಕ್ ಖಾತೆಗಳಿಂದ ಹಿಂಪಡೆಯುವ ರೂ.1 ಕೋಟಿ ಮೇಲ್ಪಟ್ಟ ಹಣದ ಮೇಲಿನ 2% ಮೂಲತೆರಿಗೆ ಕಡಿತ (ಟಿ.ಡಿ.ಎಸ್.) ನಿಯಮವನ್ನು, ನೂತನವಾಗಿ ಹೊರಡಿಸಿರುವ ಸುತ್ತೋಲೆಯ ಅನುಸಾರ ಸೆ.1 ರಿಂದ ಅನ್ವಯವಾಗುವಂತೆ, ಸಡಿಲಗೊಳಿಸಿ ಆದೇಶ ಹೊರಡಿಸಿದೆ. ಕೃಷಿಕರ ಹಣಕಾಸು ಸಮಸ್ಯೆಗಳನ್ನು ಮನಗಂಡು ಕೇಂದ್ರ ಸರಕಾರವು ಈ ಆದೇಶವನ್ನು ಹೊರಡಿಸಿದ್ದು, ಎ.ಪಿ.ಎಮ್.ಸಿ. ಸದಸ್ಯತ್ವ ಹೊಂದಿ ಕಾರ್ಯಾಚರಿಸುವ ಎಲ್ಲಾ ವ್ಯಾಪಾರಿಗಳು ಮತ್ತು ಕೃಷಿ ಉತ್ಪನ್ನಗಳ ಮಾರಾಟ ಸಂಸ್ಥೆಗಳಿಗೆ ಈ ವಿನಾಯಿತಿ ಅನ್ವಯಿಸುತ್ತದೆ. ಈ ಮೂಲಕ ಸಂಸ್ಥೆಗಳ ಮೇಲಿನ ಟಿ.ಡಿ.ಎಸ್‍ ಭಾರವನ್ನು ಇಳಿಸಿ ಕೃಷಿಕ ಸಮುದಾಯದ ಸಂಕಷ್ಟಕ್ಕೆ ಸ್ಪಂದಿಸಿದ ಕೇಂದ್ರ ಸರಕಾರದ ಈ ಕ್ರಮಕ್ಕೆ ಕೃಷಿಕ ಸಮುದಾಯದ ಪರವಾಗಿ ಕ್ಯಾಂಪ್ಕೊ ಸಂಸ್ಥೆಯು ಅಭಿನಂದನೆಯನ್ನು ಸಲ್ಲಿಸುತ್ತದೆ ಎಂದು ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
Advertisement

ಈ ಹಿಂದೆ, 2% ಮೂಲತೆರಿಗೆ ನಿಯಮವನ್ನುಜಾರಿಗೆ ತಂದಿದ್ದ ಸಂದರ್ಭದಲ್ಲಿ, ಸಂಸ್ಥೆಯ ವತಿಯಿಂದ ದ.ಕ.ಸಂಸದ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಕೇಂದ್ರ ಹಣಕಾಸು ಸಚಿವೆ  ನಿರ್ಮಲಾ ಸೀತಾರಾಮನ್ ಮತ್ತು ಹಣಕಾಸು ಖಾತೆರಾಜ್ಯ ಸಚಿವರಾದ ಅನುರಾಗ್‍ ಠಾಕೂರ್‍ ಅವರಿಗೆ, ಈ ನಿಯಮದಿಂದ ಕೃಷಿಕರಿಗೆ ತಲೆದೋರಬಹುದಾದ ಸಮಸ್ಯೆಗಳನ್ನು ಮನವರಿಕೆ ಮಾಡಿಕೊಟ್ಟು, ನಿಯಮದ ಸಡಿಲಿಕೆಗಾಗಿ ಮನವಿ ಮಾಡಲಾಗಿತ್ತು. ಇದೀಗ, ಮನವಿಯನ್ನು ಪುರಸ್ಕರಿಸಿ ನಿಯಮದಲ್ಲಿ ಸಡಿಲಿಕೆತಂದಿರುವುದು ಕೃಷಿಕ ಸಮುದಾಯದಲ್ಲಿ ಸಂತಸವನ್ನುಂಟುಮಾಡಿದೆ ಎಂದು ಪ್ರಕಟಣೆ ತಿಳಿಸಿದೆ.

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಎಥೆನಾಲ್ ಮಿಶ್ರಣ ಶೇ.20ಕ್ಕೆ ಹೆಚ್ಚಿಸುವ ಚಿಂತನೆ |

ಅಭಿವೃದ್ಧಿ ಸವಾಲುಗಳ ನಡುವೆಯೂ ದೇಶದ ಎಲ್ಲ ತೈಲ ಉತ್ಪಾದನಾ ಕಂಪನಿಗಳು 2045ರ ವೇಳೆಗೆ…

59 mins ago

ಭಾರತದಿಂದ 3.84 ಲಕ್ಷ ಮೆಟ್ರಿಕ್ ಟನ್ ಕಾಫಿ ರಫ್ತು |

ಕಾಫಿ ಸಂಶೋಧನೆ ಮತ್ತು ಅಭಿವೃದ್ಧಿ, ತಂತ್ರಜ್ಞಾನ ವಿಸ್ತರಣೆ, ಮಾರುಕಟ್ಟೆ ಅಭಿವೃದ್ಧಿಯಲ್ಲಿ ಕಾಫಿ ಮಂಡಳಿ…

1 hour ago

ರೈತ ಉತ್ಪಾದಕ ಸಂಸ್ಥೆಗಳ ಮೇಳ | ರೈತ ಉತ್ಪಾದಕ ಸಂಸ್ಥೆಗಳಿಂದ ಕೃಷಿ ಕ್ಷೇತ್ರದ ಏಳಿಗೆಗೆ ಕೊಡುಗೆ

ರೈತ ಉತ್ಪಾದಕ ಸಂಸ್ಥೆಗಳು ರೈತರು ಮತ್ತು ಇಲಾಖೆಯ ನಡುವೆ ಉತ್ತಮವಾಗಿ ಕಾರ್ಯನಿರ್ವಹಿಸುವ ಮೂಲಕ…

1 hour ago

ಕರಾವಳಿ ಭಾಗದಲ್ಲಿ ಬಿಸಿಗಾಳಿ ಬೀಸುವ ಸಾಧ್ಯತೆ | ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಲು ಸೂಚನೆ

ದಕ್ಷಿಣ ಕನ್ನಡದ ಸುಳ್ಯದಲ್ಲಿ  40.4 ಡಿಗ್ರಿ ಸೆಲ್ಸಿಯಸ್,  ಉಪ್ಪಿನಂಗಡಿಯಲ್ಲಿ   39.6, ಪಾಣೆ ಮಂಗಳೂರಿನಲ್ಲಿ …

1 hour ago

ಕೃಷಿಯಲ್ಲಿ ಶೇ.80 ರಷ್ಟು ಮಂದಿ ಸಣ್ಣ ರೈತರು

ಕೃಷಿಯಲ್ಲಿ ತೊಡಗಿರುವವರಲ್ಲಿ ಶೇಕಡಾ 80ರಷ್ಟು ಮಂದಿ ಸಣ್ಣ ರೈತರು. ಈ  ಸಮುದಾಯ ಮಾರುಕಟ್ಟೆ…

1 hour ago

ಕುಡಿಯುವ ನೀರಿನ ಸಮಸ್ಯೆ | ಮುನ್ನೆಚ್ಚರಿಕೆ ವಹಿಸಲು ಜಿಲ್ಲಾಧಿಕಾರಿ ಸೂಚನೆ

ಬೇಸಿಗೆ ಕಾಲ ಪ್ರಾರಂಭವಾಗಿರುವುದರಿಂದ ಜಿಲ್ಲೆಯಲ್ಲಿ ಕುಡಿಯುವ ನೀರಿನ ನಿರ್ವಹಣೆ ಹಾಗೂ ಕಾಡ್ಗಿಚ್ಚು ನಿರ್ವಹಣೆ…

12 hours ago