Advertisement
ಸುದ್ದಿಗಳು

ಕೃಷಿ ಉತ್ಪನ್ನಗಳ ಮಾರಾಟ ಸಂಸ್ಥೆಗಳಿಗೆ ಟಿ.ಡಿ.ಎಸ್‍ ವಿನಾಯಿತಿ : ಕ್ಯಾಂಪ್ಕೊಅಭಿನಂದನೆ

Share

ಮಂಗಳೂರು: ಕೇಂದ್ರ ಸರಕಾರವು ಇತ್ತೀಚೆಗೆ ತಂದಿದ್ದ, ಬ್ಯಾಂಕ್ ಖಾತೆಗಳಿಂದ ಹಿಂಪಡೆಯುವ ರೂ.1 ಕೋಟಿ ಮೇಲ್ಪಟ್ಟ ಹಣದ ಮೇಲಿನ 2% ಮೂಲತೆರಿಗೆ ಕಡಿತ (ಟಿ.ಡಿ.ಎಸ್.) ನಿಯಮವನ್ನು, ನೂತನವಾಗಿ ಹೊರಡಿಸಿರುವ ಸುತ್ತೋಲೆಯ ಅನುಸಾರ ಸೆ.1 ರಿಂದ ಅನ್ವಯವಾಗುವಂತೆ, ಸಡಿಲಗೊಳಿಸಿ ಆದೇಶ ಹೊರಡಿಸಿದೆ. ಕೃಷಿಕರ ಹಣಕಾಸು ಸಮಸ್ಯೆಗಳನ್ನು ಮನಗಂಡು ಕೇಂದ್ರ ಸರಕಾರವು ಈ ಆದೇಶವನ್ನು ಹೊರಡಿಸಿದ್ದು, ಎ.ಪಿ.ಎಮ್.ಸಿ. ಸದಸ್ಯತ್ವ ಹೊಂದಿ ಕಾರ್ಯಾಚರಿಸುವ ಎಲ್ಲಾ ವ್ಯಾಪಾರಿಗಳು ಮತ್ತು ಕೃಷಿ ಉತ್ಪನ್ನಗಳ ಮಾರಾಟ ಸಂಸ್ಥೆಗಳಿಗೆ ಈ ವಿನಾಯಿತಿ ಅನ್ವಯಿಸುತ್ತದೆ. ಈ ಮೂಲಕ ಸಂಸ್ಥೆಗಳ ಮೇಲಿನ ಟಿ.ಡಿ.ಎಸ್‍ ಭಾರವನ್ನು ಇಳಿಸಿ ಕೃಷಿಕ ಸಮುದಾಯದ ಸಂಕಷ್ಟಕ್ಕೆ ಸ್ಪಂದಿಸಿದ ಕೇಂದ್ರ ಸರಕಾರದ ಈ ಕ್ರಮಕ್ಕೆ ಕೃಷಿಕ ಸಮುದಾಯದ ಪರವಾಗಿ ಕ್ಯಾಂಪ್ಕೊ ಸಂಸ್ಥೆಯು ಅಭಿನಂದನೆಯನ್ನು ಸಲ್ಲಿಸುತ್ತದೆ ಎಂದು ಪ್ರಕಟಣೆ ತಿಳಿಸಿದೆ.

ಈ ಹಿಂದೆ, 2% ಮೂಲತೆರಿಗೆ ನಿಯಮವನ್ನುಜಾರಿಗೆ ತಂದಿದ್ದ ಸಂದರ್ಭದಲ್ಲಿ, ಸಂಸ್ಥೆಯ ವತಿಯಿಂದ ದ.ಕ.ಸಂಸದ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಕೇಂದ್ರ ಹಣಕಾಸು ಸಚಿವೆ  ನಿರ್ಮಲಾ ಸೀತಾರಾಮನ್ ಮತ್ತು ಹಣಕಾಸು ಖಾತೆರಾಜ್ಯ ಸಚಿವರಾದ ಅನುರಾಗ್‍ ಠಾಕೂರ್‍ ಅವರಿಗೆ, ಈ ನಿಯಮದಿಂದ ಕೃಷಿಕರಿಗೆ ತಲೆದೋರಬಹುದಾದ ಸಮಸ್ಯೆಗಳನ್ನು ಮನವರಿಕೆ ಮಾಡಿಕೊಟ್ಟು, ನಿಯಮದ ಸಡಿಲಿಕೆಗಾಗಿ ಮನವಿ ಮಾಡಲಾಗಿತ್ತು. ಇದೀಗ, ಮನವಿಯನ್ನು ಪುರಸ್ಕರಿಸಿ ನಿಯಮದಲ್ಲಿ ಸಡಿಲಿಕೆತಂದಿರುವುದು ಕೃಷಿಕ ಸಮುದಾಯದಲ್ಲಿ ಸಂತಸವನ್ನುಂಟುಮಾಡಿದೆ ಎಂದು ಪ್ರಕಟಣೆ ತಿಳಿಸಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗುತ್ತಿಗಾರಿನಲ್ಲಿ ಮಹಿಳೆಯರ ನೇತೃತ್ವದಲ್ಲಿ ಗೇರು ಹಣ್ಣಿನ ಜ್ಯೂಸ್‌ ಘಟಕ ಆರಂಭ – ಮಹಿಳೆಯರ ನೇತೃತ್ವದಲ್ಲಿ ಗ್ರಾಮೀಣ ಉದ್ಯಮಕ್ಕೆ ಹೊಸ ದಿಕ್ಕು

ಸುಳ್ಯದ ಗುತ್ತಿಗಾರಿನಲ್ಲಿ ಮಹಿಳೆಯರ ನೇತೃತ್ವದಲ್ಲಿ ಗೇರು ಹಣ್ಣಿನ ಜ್ಯೂಸ್‌ ಘಟಕ ಆರಂಭವಾಗಿದೆ. ಮೌಲ್ಯವರ್ಧನೆಯ…

9 hours ago

ಅಡಿಕೆ ಎಲೆಚುಕ್ಕೆ ರೋಗದ ವಿರುದ್ಧ ಹೋರಾಟ – ಸಮುದಾಯ ಮಟ್ಟದಲ್ಲಿ ಕ್ರಿಯಾ ಯೋಜನೆಗೆ ಸಂಸದ ಬ್ರಿಜೇಶ್ ಚೌಟ ಕರೆ

ಗುತ್ತಿಗಾರಿನಲ್ಲಿ ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಸಂವಾದ ಕಾರ್ಯಕ್ರಮ ನಡೆಯಿತು. ಸಮುದಾಯದ…

10 hours ago

ಹವಾಮಾನ ವರದಿ | 28-04-2026 | ಎಪ್ರಿಲ್ 29ರಿಂದ ಕರ್ನಾಟಕದಲ್ಲಿ ಮಳೆ ಚುರುಕು! ಕರಾವಳಿ–ಮಲೆನಾಡಿನಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ

29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…

2 days ago

ಹೆಸರಘಟ್ಟ ಹಕ್ಕಿಜ್ವರ ನಿಯಂತ್ರಣದಲ್ಲಿ | ಜನರಿಗೆ ಯಾವುದೇ ಆತಂಕ ಬೇಡ ಎಂದ ಆರೋಗ್ಯ ಇಲಾಖೆ

ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…

3 days ago

ಬಿಸಿಲಿನ ಬೇಗೆಯಲ್ಲಿ ಕಾಡಿಗೆ ಜೀವಜಲ..! ವನ್ಯಜೀವಿಗಳಿಗಾಗಿ ಕೃತಕ ನೀರಿನ ತೊಟ್ಟಿಗಳ ಮಹಾಯೋಜನೆ

ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…

3 days ago

ಹವಾಮಾನ ವರದಿ | 26-04-2026 | ಸದ್ಯ ಸೆಖೆಯ ಉಗ್ರ ರೂಪ…! ಏಪ್ರಿಲ್ 28 ರಿಂದ ರಾಜ್ಯಾದ್ಯಂತ ಮಳೆ ಸಾಧ್ಯತೆ

ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…

4 days ago