Advertisement
ಸುದ್ದಿಗಳು

ಕೃಷಿ ಉತ್ಪನ್ನಗಳ ಮಾರಾಟ ಸಂಸ್ಥೆಗಳಿಗೆ ಟಿ.ಡಿ.ಎಸ್‍ ವಿನಾಯಿತಿ : ಕ್ಯಾಂಪ್ಕೊಅಭಿನಂದನೆ

Share

ಮಂಗಳೂರು: ಕೇಂದ್ರ ಸರಕಾರವು ಇತ್ತೀಚೆಗೆ ತಂದಿದ್ದ, ಬ್ಯಾಂಕ್ ಖಾತೆಗಳಿಂದ ಹಿಂಪಡೆಯುವ ರೂ.1 ಕೋಟಿ ಮೇಲ್ಪಟ್ಟ ಹಣದ ಮೇಲಿನ 2% ಮೂಲತೆರಿಗೆ ಕಡಿತ (ಟಿ.ಡಿ.ಎಸ್.) ನಿಯಮವನ್ನು, ನೂತನವಾಗಿ ಹೊರಡಿಸಿರುವ ಸುತ್ತೋಲೆಯ ಅನುಸಾರ ಸೆ.1 ರಿಂದ ಅನ್ವಯವಾಗುವಂತೆ, ಸಡಿಲಗೊಳಿಸಿ ಆದೇಶ ಹೊರಡಿಸಿದೆ. ಕೃಷಿಕರ ಹಣಕಾಸು ಸಮಸ್ಯೆಗಳನ್ನು ಮನಗಂಡು ಕೇಂದ್ರ ಸರಕಾರವು ಈ ಆದೇಶವನ್ನು ಹೊರಡಿಸಿದ್ದು, ಎ.ಪಿ.ಎಮ್.ಸಿ. ಸದಸ್ಯತ್ವ ಹೊಂದಿ ಕಾರ್ಯಾಚರಿಸುವ ಎಲ್ಲಾ ವ್ಯಾಪಾರಿಗಳು ಮತ್ತು ಕೃಷಿ ಉತ್ಪನ್ನಗಳ ಮಾರಾಟ ಸಂಸ್ಥೆಗಳಿಗೆ ಈ ವಿನಾಯಿತಿ ಅನ್ವಯಿಸುತ್ತದೆ. ಈ ಮೂಲಕ ಸಂಸ್ಥೆಗಳ ಮೇಲಿನ ಟಿ.ಡಿ.ಎಸ್‍ ಭಾರವನ್ನು ಇಳಿಸಿ ಕೃಷಿಕ ಸಮುದಾಯದ ಸಂಕಷ್ಟಕ್ಕೆ ಸ್ಪಂದಿಸಿದ ಕೇಂದ್ರ ಸರಕಾರದ ಈ ಕ್ರಮಕ್ಕೆ ಕೃಷಿಕ ಸಮುದಾಯದ ಪರವಾಗಿ ಕ್ಯಾಂಪ್ಕೊ ಸಂಸ್ಥೆಯು ಅಭಿನಂದನೆಯನ್ನು ಸಲ್ಲಿಸುತ್ತದೆ ಎಂದು ಪ್ರಕಟಣೆ ತಿಳಿಸಿದೆ.

ಈ ಹಿಂದೆ, 2% ಮೂಲತೆರಿಗೆ ನಿಯಮವನ್ನುಜಾರಿಗೆ ತಂದಿದ್ದ ಸಂದರ್ಭದಲ್ಲಿ, ಸಂಸ್ಥೆಯ ವತಿಯಿಂದ ದ.ಕ.ಸಂಸದ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಕೇಂದ್ರ ಹಣಕಾಸು ಸಚಿವೆ  ನಿರ್ಮಲಾ ಸೀತಾರಾಮನ್ ಮತ್ತು ಹಣಕಾಸು ಖಾತೆರಾಜ್ಯ ಸಚಿವರಾದ ಅನುರಾಗ್‍ ಠಾಕೂರ್‍ ಅವರಿಗೆ, ಈ ನಿಯಮದಿಂದ ಕೃಷಿಕರಿಗೆ ತಲೆದೋರಬಹುದಾದ ಸಮಸ್ಯೆಗಳನ್ನು ಮನವರಿಕೆ ಮಾಡಿಕೊಟ್ಟು, ನಿಯಮದ ಸಡಿಲಿಕೆಗಾಗಿ ಮನವಿ ಮಾಡಲಾಗಿತ್ತು. ಇದೀಗ, ಮನವಿಯನ್ನು ಪುರಸ್ಕರಿಸಿ ನಿಯಮದಲ್ಲಿ ಸಡಿಲಿಕೆತಂದಿರುವುದು ಕೃಷಿಕ ಸಮುದಾಯದಲ್ಲಿ ಸಂತಸವನ್ನುಂಟುಮಾಡಿದೆ ಎಂದು ಪ್ರಕಟಣೆ ತಿಳಿಸಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ

ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್‌ನಲ್ಲಿ…

1 hour ago

ಹವಾಮಾನ ವರದಿ |13-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಹಂತ ಹಂತವಾಗಿ ಚುರುಕಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…

10 hours ago

ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು

ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…

14 hours ago

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…

1 day ago

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

2 days ago

ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?

ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…

2 days ago