ಮಂಗಳೂರು: ಕೇಂದ್ರ ಸರಕಾರವು ಇತ್ತೀಚೆಗೆ ತಂದಿದ್ದ, ಬ್ಯಾಂಕ್ ಖಾತೆಗಳಿಂದ ಹಿಂಪಡೆಯುವ ರೂ.1 ಕೋಟಿ ಮೇಲ್ಪಟ್ಟ ಹಣದ ಮೇಲಿನ 2% ಮೂಲತೆರಿಗೆ ಕಡಿತ (ಟಿ.ಡಿ.ಎಸ್.) ನಿಯಮವನ್ನು, ನೂತನವಾಗಿ ಹೊರಡಿಸಿರುವ ಸುತ್ತೋಲೆಯ ಅನುಸಾರ ಸೆ.1 ರಿಂದ ಅನ್ವಯವಾಗುವಂತೆ, ಸಡಿಲಗೊಳಿಸಿ ಆದೇಶ ಹೊರಡಿಸಿದೆ. ಕೃಷಿಕರ ಹಣಕಾಸು ಸಮಸ್ಯೆಗಳನ್ನು ಮನಗಂಡು ಕೇಂದ್ರ ಸರಕಾರವು ಈ ಆದೇಶವನ್ನು ಹೊರಡಿಸಿದ್ದು, ಎ.ಪಿ.ಎಮ್.ಸಿ. ಸದಸ್ಯತ್ವ ಹೊಂದಿ ಕಾರ್ಯಾಚರಿಸುವ ಎಲ್ಲಾ ವ್ಯಾಪಾರಿಗಳು ಮತ್ತು ಕೃಷಿ ಉತ್ಪನ್ನಗಳ ಮಾರಾಟ ಸಂಸ್ಥೆಗಳಿಗೆ ಈ ವಿನಾಯಿತಿ ಅನ್ವಯಿಸುತ್ತದೆ. ಈ ಮೂಲಕ ಸಂಸ್ಥೆಗಳ ಮೇಲಿನ ಟಿ.ಡಿ.ಎಸ್ ಭಾರವನ್ನು ಇಳಿಸಿ ಕೃಷಿಕ ಸಮುದಾಯದ ಸಂಕಷ್ಟಕ್ಕೆ ಸ್ಪಂದಿಸಿದ ಕೇಂದ್ರ ಸರಕಾರದ ಈ ಕ್ರಮಕ್ಕೆ ಕೃಷಿಕ ಸಮುದಾಯದ ಪರವಾಗಿ ಕ್ಯಾಂಪ್ಕೊ ಸಂಸ್ಥೆಯು ಅಭಿನಂದನೆಯನ್ನು ಸಲ್ಲಿಸುತ್ತದೆ ಎಂದು ಪ್ರಕಟಣೆ ತಿಳಿಸಿದೆ.
ಈ ಹಿಂದೆ, 2% ಮೂಲತೆರಿಗೆ ನಿಯಮವನ್ನುಜಾರಿಗೆ ತಂದಿದ್ದ ಸಂದರ್ಭದಲ್ಲಿ, ಸಂಸ್ಥೆಯ ವತಿಯಿಂದ ದ.ಕ.ಸಂಸದ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಹಣಕಾಸು ಖಾತೆರಾಜ್ಯ ಸಚಿವರಾದ ಅನುರಾಗ್ ಠಾಕೂರ್ ಅವರಿಗೆ, ಈ ನಿಯಮದಿಂದ ಕೃಷಿಕರಿಗೆ ತಲೆದೋರಬಹುದಾದ ಸಮಸ್ಯೆಗಳನ್ನು ಮನವರಿಕೆ ಮಾಡಿಕೊಟ್ಟು, ನಿಯಮದ ಸಡಿಲಿಕೆಗಾಗಿ ಮನವಿ ಮಾಡಲಾಗಿತ್ತು. ಇದೀಗ, ಮನವಿಯನ್ನು ಪುರಸ್ಕರಿಸಿ ನಿಯಮದಲ್ಲಿ ಸಡಿಲಿಕೆತಂದಿರುವುದು ಕೃಷಿಕ ಸಮುದಾಯದಲ್ಲಿ ಸಂತಸವನ್ನುಂಟುಮಾಡಿದೆ ಎಂದು ಪ್ರಕಟಣೆ ತಿಳಿಸಿದೆ.
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…