ಮಂಗಳೂರು: ಕೇಂದ್ರ ಸರಕಾರವು ಇತ್ತೀಚೆಗೆ ತಂದಿದ್ದ, ಬ್ಯಾಂಕ್ ಖಾತೆಗಳಿಂದ ಹಿಂಪಡೆಯುವ ರೂ.1 ಕೋಟಿ ಮೇಲ್ಪಟ್ಟ ಹಣದ ಮೇಲಿನ 2% ಮೂಲತೆರಿಗೆ ಕಡಿತ (ಟಿ.ಡಿ.ಎಸ್.) ನಿಯಮವನ್ನು, ನೂತನವಾಗಿ ಹೊರಡಿಸಿರುವ ಸುತ್ತೋಲೆಯ ಅನುಸಾರ ಸೆ.1 ರಿಂದ ಅನ್ವಯವಾಗುವಂತೆ, ಸಡಿಲಗೊಳಿಸಿ ಆದೇಶ ಹೊರಡಿಸಿದೆ. ಕೃಷಿಕರ ಹಣಕಾಸು ಸಮಸ್ಯೆಗಳನ್ನು ಮನಗಂಡು ಕೇಂದ್ರ ಸರಕಾರವು ಈ ಆದೇಶವನ್ನು ಹೊರಡಿಸಿದ್ದು, ಎ.ಪಿ.ಎಮ್.ಸಿ. ಸದಸ್ಯತ್ವ ಹೊಂದಿ ಕಾರ್ಯಾಚರಿಸುವ ಎಲ್ಲಾ ವ್ಯಾಪಾರಿಗಳು ಮತ್ತು ಕೃಷಿ ಉತ್ಪನ್ನಗಳ ಮಾರಾಟ ಸಂಸ್ಥೆಗಳಿಗೆ ಈ ವಿನಾಯಿತಿ ಅನ್ವಯಿಸುತ್ತದೆ. ಈ ಮೂಲಕ ಸಂಸ್ಥೆಗಳ ಮೇಲಿನ ಟಿ.ಡಿ.ಎಸ್ ಭಾರವನ್ನು ಇಳಿಸಿ ಕೃಷಿಕ ಸಮುದಾಯದ ಸಂಕಷ್ಟಕ್ಕೆ ಸ್ಪಂದಿಸಿದ ಕೇಂದ್ರ ಸರಕಾರದ ಈ ಕ್ರಮಕ್ಕೆ ಕೃಷಿಕ ಸಮುದಾಯದ ಪರವಾಗಿ ಕ್ಯಾಂಪ್ಕೊ ಸಂಸ್ಥೆಯು ಅಭಿನಂದನೆಯನ್ನು ಸಲ್ಲಿಸುತ್ತದೆ ಎಂದು ಪ್ರಕಟಣೆ ತಿಳಿಸಿದೆ.
ಈ ಹಿಂದೆ, 2% ಮೂಲತೆರಿಗೆ ನಿಯಮವನ್ನುಜಾರಿಗೆ ತಂದಿದ್ದ ಸಂದರ್ಭದಲ್ಲಿ, ಸಂಸ್ಥೆಯ ವತಿಯಿಂದ ದ.ಕ.ಸಂಸದ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಹಣಕಾಸು ಖಾತೆರಾಜ್ಯ ಸಚಿವರಾದ ಅನುರಾಗ್ ಠಾಕೂರ್ ಅವರಿಗೆ, ಈ ನಿಯಮದಿಂದ ಕೃಷಿಕರಿಗೆ ತಲೆದೋರಬಹುದಾದ ಸಮಸ್ಯೆಗಳನ್ನು ಮನವರಿಕೆ ಮಾಡಿಕೊಟ್ಟು, ನಿಯಮದ ಸಡಿಲಿಕೆಗಾಗಿ ಮನವಿ ಮಾಡಲಾಗಿತ್ತು. ಇದೀಗ, ಮನವಿಯನ್ನು ಪುರಸ್ಕರಿಸಿ ನಿಯಮದಲ್ಲಿ ಸಡಿಲಿಕೆತಂದಿರುವುದು ಕೃಷಿಕ ಸಮುದಾಯದಲ್ಲಿ ಸಂತಸವನ್ನುಂಟುಮಾಡಿದೆ ಎಂದು ಪ್ರಕಟಣೆ ತಿಳಿಸಿದೆ.
ಸುಳ್ಯದ ಗುತ್ತಿಗಾರಿನಲ್ಲಿ ಮಹಿಳೆಯರ ನೇತೃತ್ವದಲ್ಲಿ ಗೇರು ಹಣ್ಣಿನ ಜ್ಯೂಸ್ ಘಟಕ ಆರಂಭವಾಗಿದೆ. ಮೌಲ್ಯವರ್ಧನೆಯ…
ಗುತ್ತಿಗಾರಿನಲ್ಲಿ ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಸಂವಾದ ಕಾರ್ಯಕ್ರಮ ನಡೆಯಿತು. ಸಮುದಾಯದ…
29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…
ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…