Advertisement
ಸುದ್ದಿಗಳು

ಕೃಷಿ ಉತ್ಪನ್ನಗಳ ಮಾರಾಟ ಸಂಸ್ಥೆಗಳಿಗೆ ಟಿ.ಡಿ.ಎಸ್‍ ವಿನಾಯಿತಿ : ಕ್ಯಾಂಪ್ಕೊಅಭಿನಂದನೆ

Share

ಮಂಗಳೂರು: ಕೇಂದ್ರ ಸರಕಾರವು ಇತ್ತೀಚೆಗೆ ತಂದಿದ್ದ, ಬ್ಯಾಂಕ್ ಖಾತೆಗಳಿಂದ ಹಿಂಪಡೆಯುವ ರೂ.1 ಕೋಟಿ ಮೇಲ್ಪಟ್ಟ ಹಣದ ಮೇಲಿನ 2% ಮೂಲತೆರಿಗೆ ಕಡಿತ (ಟಿ.ಡಿ.ಎಸ್.) ನಿಯಮವನ್ನು, ನೂತನವಾಗಿ ಹೊರಡಿಸಿರುವ ಸುತ್ತೋಲೆಯ ಅನುಸಾರ ಸೆ.1 ರಿಂದ ಅನ್ವಯವಾಗುವಂತೆ, ಸಡಿಲಗೊಳಿಸಿ ಆದೇಶ ಹೊರಡಿಸಿದೆ. ಕೃಷಿಕರ ಹಣಕಾಸು ಸಮಸ್ಯೆಗಳನ್ನು ಮನಗಂಡು ಕೇಂದ್ರ ಸರಕಾರವು ಈ ಆದೇಶವನ್ನು ಹೊರಡಿಸಿದ್ದು, ಎ.ಪಿ.ಎಮ್.ಸಿ. ಸದಸ್ಯತ್ವ ಹೊಂದಿ ಕಾರ್ಯಾಚರಿಸುವ ಎಲ್ಲಾ ವ್ಯಾಪಾರಿಗಳು ಮತ್ತು ಕೃಷಿ ಉತ್ಪನ್ನಗಳ ಮಾರಾಟ ಸಂಸ್ಥೆಗಳಿಗೆ ಈ ವಿನಾಯಿತಿ ಅನ್ವಯಿಸುತ್ತದೆ. ಈ ಮೂಲಕ ಸಂಸ್ಥೆಗಳ ಮೇಲಿನ ಟಿ.ಡಿ.ಎಸ್‍ ಭಾರವನ್ನು ಇಳಿಸಿ ಕೃಷಿಕ ಸಮುದಾಯದ ಸಂಕಷ್ಟಕ್ಕೆ ಸ್ಪಂದಿಸಿದ ಕೇಂದ್ರ ಸರಕಾರದ ಈ ಕ್ರಮಕ್ಕೆ ಕೃಷಿಕ ಸಮುದಾಯದ ಪರವಾಗಿ ಕ್ಯಾಂಪ್ಕೊ ಸಂಸ್ಥೆಯು ಅಭಿನಂದನೆಯನ್ನು ಸಲ್ಲಿಸುತ್ತದೆ ಎಂದು ಪ್ರಕಟಣೆ ತಿಳಿಸಿದೆ.

ಈ ಹಿಂದೆ, 2% ಮೂಲತೆರಿಗೆ ನಿಯಮವನ್ನುಜಾರಿಗೆ ತಂದಿದ್ದ ಸಂದರ್ಭದಲ್ಲಿ, ಸಂಸ್ಥೆಯ ವತಿಯಿಂದ ದ.ಕ.ಸಂಸದ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಕೇಂದ್ರ ಹಣಕಾಸು ಸಚಿವೆ  ನಿರ್ಮಲಾ ಸೀತಾರಾಮನ್ ಮತ್ತು ಹಣಕಾಸು ಖಾತೆರಾಜ್ಯ ಸಚಿವರಾದ ಅನುರಾಗ್‍ ಠಾಕೂರ್‍ ಅವರಿಗೆ, ಈ ನಿಯಮದಿಂದ ಕೃಷಿಕರಿಗೆ ತಲೆದೋರಬಹುದಾದ ಸಮಸ್ಯೆಗಳನ್ನು ಮನವರಿಕೆ ಮಾಡಿಕೊಟ್ಟು, ನಿಯಮದ ಸಡಿಲಿಕೆಗಾಗಿ ಮನವಿ ಮಾಡಲಾಗಿತ್ತು. ಇದೀಗ, ಮನವಿಯನ್ನು ಪುರಸ್ಕರಿಸಿ ನಿಯಮದಲ್ಲಿ ಸಡಿಲಿಕೆತಂದಿರುವುದು ಕೃಷಿಕ ಸಮುದಾಯದಲ್ಲಿ ಸಂತಸವನ್ನುಂಟುಮಾಡಿದೆ ಎಂದು ಪ್ರಕಟಣೆ ತಿಳಿಸಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?

ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…

2 hours ago

ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ

ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…

13 hours ago

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…

18 hours ago

ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ

ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…

19 hours ago

ಪಿಒಪಿ ಗಣಪತಿಗೆ ಬ್ರೇಕ್..? ಕರಾವಳಿಯ 90–95% ಪರಿಸರ ಸ್ನೇಹಿ ಮಾದರಿ ರಾಜ್ಯಕ್ಕೆ ಪಾಠ

ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…

21 hours ago

ಪಶ್ಚಿಮ ಘಟ್ಟ ಸಂರಕ್ಷಣೆ ಹೆಸರಿನಲ್ಲಿ ಕೃಷಿಕರಿಗೆ ನಿರ್ಬಂಧ ಬೇಡ – ಕಸ್ತೂರಿ ರಂಗನ್ ವರದಿ ಸಂಪೂರ್ಣ ತಿರಸ್ಕರಿಸಲು ಆಗ್ರಹ

ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…

22 hours ago