Advertisement
ಸುದ್ದಿಗಳು

ಕೃಷಿ ಉತ್ಪನ್ನಗಳ ಮಾರಾಟ ಸಂಸ್ಥೆಗಳಿಗೆ ಟಿ.ಡಿ.ಎಸ್‍ ವಿನಾಯಿತಿ : ಕ್ಯಾಂಪ್ಕೊಅಭಿನಂದನೆ

Share

ಮಂಗಳೂರು: ಕೇಂದ್ರ ಸರಕಾರವು ಇತ್ತೀಚೆಗೆ ತಂದಿದ್ದ, ಬ್ಯಾಂಕ್ ಖಾತೆಗಳಿಂದ ಹಿಂಪಡೆಯುವ ರೂ.1 ಕೋಟಿ ಮೇಲ್ಪಟ್ಟ ಹಣದ ಮೇಲಿನ 2% ಮೂಲತೆರಿಗೆ ಕಡಿತ (ಟಿ.ಡಿ.ಎಸ್.) ನಿಯಮವನ್ನು, ನೂತನವಾಗಿ ಹೊರಡಿಸಿರುವ ಸುತ್ತೋಲೆಯ ಅನುಸಾರ ಸೆ.1 ರಿಂದ ಅನ್ವಯವಾಗುವಂತೆ, ಸಡಿಲಗೊಳಿಸಿ ಆದೇಶ ಹೊರಡಿಸಿದೆ. ಕೃಷಿಕರ ಹಣಕಾಸು ಸಮಸ್ಯೆಗಳನ್ನು ಮನಗಂಡು ಕೇಂದ್ರ ಸರಕಾರವು ಈ ಆದೇಶವನ್ನು ಹೊರಡಿಸಿದ್ದು, ಎ.ಪಿ.ಎಮ್.ಸಿ. ಸದಸ್ಯತ್ವ ಹೊಂದಿ ಕಾರ್ಯಾಚರಿಸುವ ಎಲ್ಲಾ ವ್ಯಾಪಾರಿಗಳು ಮತ್ತು ಕೃಷಿ ಉತ್ಪನ್ನಗಳ ಮಾರಾಟ ಸಂಸ್ಥೆಗಳಿಗೆ ಈ ವಿನಾಯಿತಿ ಅನ್ವಯಿಸುತ್ತದೆ. ಈ ಮೂಲಕ ಸಂಸ್ಥೆಗಳ ಮೇಲಿನ ಟಿ.ಡಿ.ಎಸ್‍ ಭಾರವನ್ನು ಇಳಿಸಿ ಕೃಷಿಕ ಸಮುದಾಯದ ಸಂಕಷ್ಟಕ್ಕೆ ಸ್ಪಂದಿಸಿದ ಕೇಂದ್ರ ಸರಕಾರದ ಈ ಕ್ರಮಕ್ಕೆ ಕೃಷಿಕ ಸಮುದಾಯದ ಪರವಾಗಿ ಕ್ಯಾಂಪ್ಕೊ ಸಂಸ್ಥೆಯು ಅಭಿನಂದನೆಯನ್ನು ಸಲ್ಲಿಸುತ್ತದೆ ಎಂದು ಪ್ರಕಟಣೆ ತಿಳಿಸಿದೆ.

ಈ ಹಿಂದೆ, 2% ಮೂಲತೆರಿಗೆ ನಿಯಮವನ್ನುಜಾರಿಗೆ ತಂದಿದ್ದ ಸಂದರ್ಭದಲ್ಲಿ, ಸಂಸ್ಥೆಯ ವತಿಯಿಂದ ದ.ಕ.ಸಂಸದ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಕೇಂದ್ರ ಹಣಕಾಸು ಸಚಿವೆ  ನಿರ್ಮಲಾ ಸೀತಾರಾಮನ್ ಮತ್ತು ಹಣಕಾಸು ಖಾತೆರಾಜ್ಯ ಸಚಿವರಾದ ಅನುರಾಗ್‍ ಠಾಕೂರ್‍ ಅವರಿಗೆ, ಈ ನಿಯಮದಿಂದ ಕೃಷಿಕರಿಗೆ ತಲೆದೋರಬಹುದಾದ ಸಮಸ್ಯೆಗಳನ್ನು ಮನವರಿಕೆ ಮಾಡಿಕೊಟ್ಟು, ನಿಯಮದ ಸಡಿಲಿಕೆಗಾಗಿ ಮನವಿ ಮಾಡಲಾಗಿತ್ತು. ಇದೀಗ, ಮನವಿಯನ್ನು ಪುರಸ್ಕರಿಸಿ ನಿಯಮದಲ್ಲಿ ಸಡಿಲಿಕೆತಂದಿರುವುದು ಕೃಷಿಕ ಸಮುದಾಯದಲ್ಲಿ ಸಂತಸವನ್ನುಂಟುಮಾಡಿದೆ ಎಂದು ಪ್ರಕಟಣೆ ತಿಳಿಸಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

4 hours ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

4 hours ago

ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ ; ಔಷಧಿಗಿಂತ ಉತ್ತಮ ಜೀವನಶೈಲಿಯೇ ಪರಿಹಾರ: ರಾಘವೇಶ್ವರ ಶ್ರೀ

ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…

6 hours ago

ಕೇರಳದಲ್ಲಿ ಭಾರಿ ಮಳೆ ಆರ್ಭಟ : ಮಲಪ್ಪುರಂನಲ್ಲಿ ಸರಣಿ ಭೂಕುಸಿತ , ಸಂಚಾರ ಸಂಪೂರ್ಣ ಸ್ಥಗಿತ

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…

9 hours ago