Advertisement
MIRROR FOCUS

ಕೃಷಿ ಕೊಳದಲ್ಲಿ ಮೀನು ಸಾಕಾಣಿಕೆ ಸುಲಭ ಸಾಧ್ಯ…

Share

ಕೃಷಿಕರು ಅಡಿಕೆ, ಮಾವು, ಪೇರಳೆ, ಕೊಕೋ, ಲವಂಗ, ತೆಂಗು ಇತ್ಯಾದಿಗಳ ಜೊತೆಗೆ ಕೃಷಿ ನೀರುಣಿಸುವ ಕೃಷಿ ಕೊಳಗಳ ಮೂಲಕವೂ ಮೀನು ಸಾಕಾಣಿಕೆ ಮಾಡಿ ಆದಾಯ ಗಳಿಸಬಹುದಾಗಿದೆ.  ಈ ಬಗ್ಗೆ ಮಂಗಳೂರಿನ ಮೀನುಗಾರಿಕಾ ಮಹಾವಿದ್ಯಾಲಯದ ತಜ್ಞರು  ಕೃಷಿ ಭೂಮಿಗೆ ಭೇಟಿ ನೀಡಿ ಜಮೀನಿನ ಕೊಳಗಳಲ್ಲಿ ಮೀನು ಕೃಷಿ ಮಾಡುವ ಬಗ್ಗೆ ರೈತರಿಗೆ ಸಲಹೆ ಸೂಚನೆ ನೀಡಿದರು.

Advertisement

ಪ್ರೊ. ಡಾ. ರಾಮಚಂದ್ರ ನಾಯ್ಕ ಮತ್ತು ಕೃಷಿ ವಿಜ್ಞಾನ ಕೇಂದ್ರದ ವಿಷಯ ತಜ್ಞ ಡಾ. ಚೇತನ್ ಎನ್. ಅವರು  ಬಾಯಾರು ಗ್ರಾಮದ ನಿವಾಸಿ, ವಕೀಲ ರಾಮಚಂದ್ರ ಭಟ್ ಅವರ ಜಮೀನಿಗೆ ಭೇಟಿ ನೀಡಿದರು.    ಕ್ಷೇತ್ರದ ಭೇಟಿಯ ಸಮಯದಲ್ಲಿ ವಿವಿಧ ಕೃಷಿ ಹಾಗೂ ಕೃಷಿಯೇತರ ಪದ್ದತಿಗಳ ಅಳವಡಿಕೆಗಳ ಬಗ್ಗೆ ಜೊತೆ ಮುಕ್ತವಾಗಿ ಚರ್ಚಿಸಿದರು.

ಬಾಯಾರು ಗ್ರಾಮದ ರಾಮಚಂದ್ರ ಭಟ್ ಎಂಬವರ ಕೃಷಿ ಭೂಮಿಗೆ ಭೇಟಿ ನೀಡಿದ ತಜ್ಞರ ತಂಡ ಚರ್ಚಿಸಿದರು. ಇಲ್ಲಿನ ಕೃಷಿಕರು ಅಡಿಕೆ, ಮಾವು, ಪೇರಳೆ, ಕೊಕೋ, ಲವಂಗ, ತೆಂಗು, ಮೆಣಸು, ಹಲಸು, ಬಾಳೆ, ಪುನ್ನಾರ್ಪುಳಿ, ಜೀಗುಜ್ಜೆ, ಚಿಕ್ಕು, ಬೆಟ್ಟದನೆಲ್ಲಿ, ಮೆಣಸು, ಜೇನು, ಜಾನುವಾರು, ಇತ್ಯಾದಿ ಬಗೆಯ ಬೆಳೆಗಳನ್ನು ಬೆಳೆಸುತ್ತಿದ್ದಾರೆ. ಈ ಭೂಮಿಯಲ್ಲಿ ನೀರು ಶೇಖರಣೆ ಮಾಡಲು ಅಲ್ಲಲ್ಲಿ ಹೊಂಡ, ಕೊಳ, ಕೆರೆ ಇತ್ಯಾದಿಗಳನ್ನು ಸಂರಕ್ಷಿಸಿದ್ದಾರೆ. ಇವುಗಳು ಕೇವಲ ನೀರಿಗಾಗಿ ಮತ್ತು ತೋಟದ ಗಿಡ-ಮರಗಳಿಗೆ ನೀರು ಹಾಯಿಸಲು ಮಾತ್ರ ಎಂದುಕೊಂಡ ರಾಮಚಂದ್ರ ಭಟ್ ರವರು ಮೀನುಗಾರಿಕಾ ಪದವಿಧರ ಗುರುರಾಜ್ ರವಲ್ಲಿ ಆಕಸ್ಮಿಕವಾಗಿ ಚರ್ಚಿಸಿ ಸೂಕ್ತವಾಗಿ ಬಳಸಿಕೊಳ್ಳಲು ಯೋಚಿಸಿದ್ದರು.

ಅದಕ್ಕೆ ಸೂಕ್ತವಾದ ಮಾಹಿತಿ ಪಡೆಯಲು ಮೀನುಗಾರಿಕಾ ಕಾಲೇಜಿನ ವಿಷಯ ತಜ್ಞ ಹಾಗೂ ಪ್ರೊಫೆಸರ್  ಡಾ. ರಾಮಚಂದ್ರ ನಾಯ್ಕರಲ್ಲಿ ದೂರವಾಣಿಯ ಮೂಲಕ ಸಂಪರ್ಕಿಸಿ ಕ್ಷೇತ್ರ ಬೇಟಿಗೆ ಮುಂದಾದರು. ಇವರು ಕೃಷಿ ವಿಜ್ಞಾನ ಕೇಂದ್ರದ ಮಾಜಿ ಪ್ರಧಾನ ವಿಜ್ಞಾನಿ ಮತ್ತು ಮುಖ್ಯಸ್ಥರಾಗಿ ಅನುಭವವುಳ್ಳವರು ಹಾಗೂ ರೈತರಿಗೆ ಸಮಗ್ರ ಮೀನು ಕೃಷಿ ಪದ್ದತಿಗಳನ್ನು ಅಳವಡಿಕೆಗಳಲ್ಲಿ ವೈಜ್ಞಾನಿಕ ಸಲಹೆ ನೀಡಿಕೊಂಡು ಬಂದವರು.

ಜಮೀನಿನ ಮಾಲಿಕ ರಾಮಚಂದ್ರ ಭಟ್ ಈ ರೀತಿಯ ಕೃಷಿ ಭೂಮಿಯಲ್ಲಿನ ನೀರು ಶೇಖರಣೆಯ ಪ್ರದೇಶವು ಮೀನು ಸಾಕಾಣೆಮಾಡಲು ಹೇಗೆ ಉಪಯೋಗವಾಗುತ್ತದೆಂಬ ಸಂದೇಹದಲ್ಲಿದ್ದರು. ಇದಕ್ಕೆ ಮಾಹಿತಿ ತಿಳಿಸಿದ ವಿಷಯ ತಜ್ಞರು ಈ ನೀರಿನ ಪ್ರದೇಶಗಳ ಯೋಗ್ಯತೆಯ ಬಗ್ಗೆ ಕೂಲಂಕುಷವಾಗಿ ಮಹಿತಿ ನೀಡಿ ಜಮೀನಿನ ಉದ್ದಗಲಕ್ಕೂ ತಿರುಗಿ ಸಂಪನ್ಮೂಲದ ವೀಕ್ಷಿಣೆ ಮಾಡಿ ಸೂಕ್ತ ಸಲಹೆಯನ್ನು ನೀಡಿದರು. ಸಮಗ್ರ ಕೃಷಿ ಪದ್ದತಿಯಲ್ಲಿ ಎಲ್ಲಾ ಬಗೆಯ ಬೆಳೆಗಳನ್ನು ಕಡಿಮೆ ಪ್ರದೇಶದಲ್ಲಿ ಬೆಳೆಯುವುದರಿಂದ ಹೆಚ್ಚು ಅದಾಯವನ್ನು ಪಡೆಯುವುದರೊಂದಿಗೆ ಸಂಪನ್ಮೂಲಗಳನ್ನು ಸಮರ್ಪಕವಾಗಿ ಉಪಯೋಗಿಸಿಕೊಂಡು ಆರ್ಥಿಕವಾಗಿ ಅಭಿವೃದ್ದಿಯಾಗಲು ನೆರವಾಗಬಹುದಾದ ಮಾಹಿತಿಯನ್ನು ತಿಳಿಸಿಕೊಟ್ಟರು. ವಿವಿಧ ಬೆಳೆಗಳಿಗೆ ನೀರನ್ನು ಬಳಸುವ ಸಲುವಾಗಿ ಮೀಸಲಿಟ್ಟ ನೀರಿರುವ ಪ್ರದೇಶಗಳನ್ನು ಸಿಹಿನೀರು ಅಥವಾ ಚಪ್ಪೆನೀರಿನ ಮೀನುಗಳನ್ನು ಸಾಕಲು ಉಪಯೊಗಿಸುವುದರಿಂದ ಅನ್ಯ ಕೃಷಿ ಬೆಳೆಗಳಿಗೆ ಯಾವುದೇ ತೊಂದರೆಮಾಡದೆ ಸಂಪನ್ಮೂಲವನ್ನು ಸದ್ಬಳಕೆ ಮಾಡಿ ವೈಜ್ಞಾನಿಕ ರೀತಿಯ ಕೃಷಿ ಬೆಳೆಗಳನ್ನು ಮಾಡಿ ಹೆಚ್ಚಿನ ಅದಾಯವನ್ನು ಪಡೆಯಬಹುದಾಗಿದೆ ಎಂದರು.

ಇಂತಹ ನೀರು ಶೇಖರಿಸಿದ ಹೊಂಡಗಳಲ್ಲಿ ಕನಿಷ್ಟ 8 ರಿಂದ 9 ತಿಂಗಳುಗಳವರೆಗೆ ನೀರಿದ್ದಲ್ಲಿ ಮೀನು ಕೃಷಿಗೆ ಸೂಕ್ತವಾದುದು. ಮೀನುಕೃಷಿಯ ಮೀನು ಮರಿಗಳನ್ನು ಕೊಳದಲ್ಲಿ ಬಿತ್ತನೆ ಮಾಡುವ ಮುನ್ನ ಹೊಂಡಗಳಲ್ಲಿನ ಕಳೆ ಮೀನು, ಭಕ್ಷಕ ಮೀನು, ಕಪ್ಪೆ, ಜಲಚಿಟ್ಟೆ ಮುಂತಾದವುಗಳನ್ನು ತೆಗೆದು ಸಮವಾದ ತಳಬಾಗವನ್ನು ರಚಿಸುವುದು ಸೂಕ್ತ.

ಮೀನುಮರಿ ಬಿತ್ತನೆ ಸಮಯಕ್ಕೆ ಸರಿಯಾಗಿ ಮೀನುಗಾರಿಕಾ ಮಹಾವಿದ್ಯಾಲಯದ ಜಲ ಪರಿಸರ ನಿರ್ವಹಣೆ ವಿಭಾಗದಲ್ಲಿ ಡಾ. ರಾಮಚಂದ್ರ ನಾಯ್ಕರವರ ಮಾರ್ಗದರ್ಶನದಲ್ಲಿ ಡಾಕ್ಟರೇಟ್ ಪದವಿಯ ಸಂಶೋಧನಾ ವಿದ್ಯಾರ್ಥಿಗಳಾದ  ಕಿಶೋರ್ ಸಿ. ಮತ್ತು ಪ್ರವೀಣ್ ಜೋಶಿ ಎಚ್.ಎಸ್. ಸಹಕರಿಸಿದರು.  ಸಾರ್ವಜನಿಕರು  ತಮ್ಮ ಜಮೀನುಗಳಲ್ಲಿ ಇಂತಹ ಅವಕಾಶವಿದ್ದರೆ, ಸಂಭಂದಪಟ್ಟ ತಜ್ಞರನ್ನು (ಮೊಬೈಲ್ ನಂಬರ್ 99169 24084)ಕೃಷಿ ವಿಜ್ಞಾನ ಕೇಂದ್ರದ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…

12 hours ago

ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ

ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…

20 hours ago

ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ

ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…

20 hours ago

ರೈತರಿಗೆ ಗುಡ್ ನ್ಯೂಸ್..! ತೊಗರಿ ಖರೀದಿ ಅವಧಿ ಮೇ 15ರವರೆಗೆ ವಿಸ್ತರಣೆ

ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…

20 hours ago

ವಿಜಯಪುರದಲ್ಲಿ ತಾಪಮಾನ ಹೆಚ್ಚಳ : ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ AC ವಾರ್ಡ್ ಸಿದ್ಧ

ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…

20 hours ago

ಹೊಸರುಚಿ | ಗುಜ್ಜೆ ಮಂಚೂರಿ – ಕರಾವಳಿಯ ಸಾಂಪ್ರದಾಯಿಕ ರುಚಿಗೆ ಚೈನೀಸ್ ಟ್ವಿಸ್ಟ್

ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…

1 day ago