Advertisement
ಸುದ್ದಿಗಳು

ಕೃಷಿ ನೀರಿನ ತೊಟ್ಟಿಯಲ್ಲಿ ಯಶಸ್ಸು ಕಂಡ ಬಳ್ಪದ ಕೃಷಿಕ

Share

ಬಳ್ಪ: ಕೃಷಿ ನೀರಿನ ತೊಟ್ಟಿಯಿಂದ ಕೃಷಿ ಭೂಮಿಯಲ್ಲಿ ಯಶಸ್ಸು ಕಂಡ ಕೃಷಿಕ ಬಳ್ಪ ಗ್ರಾಮದ ಪಠೋಳಿ ಕೃಷ್ಣ ಭಟ್. ಸಮಗ್ರ ತೋಟಗಾರಿಕೆ ಅಭಿವೃದ್ದಿ ಯೋಜನೆಯಡಿ ನೀರು ಸಂಗ್ರಹಣಾ ಘಟಕ ಯೋಜನೆಯಡಿ ಸುಳ್ಯ ತಾಲೂಕಿನ ಬಳ್ಪ ನಿವಾಸಿ ಪಿ. ಕೃಷ್ಣ ಭಟ್ ಇವರು ನೀರಾವರಿ ಬಗ್ಗೆ ತೋಟಗಾರಿಕೆ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿದಾಗ ಇಲಾಖಾ ಅಧಿಕಾರಿಗಳು ಇಲಾಖೆಯ ಸಹಾಯಧನದ ಮೂಲಕ ನೀರು ಸಂಗ್ರಹಣಾ ತೊಟ್ಟಿ ರಚನೆ ಮಾಡಿ ಬೇಸಿಗೆ ಕಾಲದಲ್ಲಿ ಕೃಷಿ ಭೂಮಿಯನ್ನು ಸುಸ್ಥಿತಿಯಲ್ಲಿ ಇಡಬಹುದೆಂಬ ಮಾಹಿತಿಯನ್ನು ನೀಡಿದರು.

Advertisement
Advertisement
Advertisement
Advertisement

ಅವರು ಇಲಾಖಾ ಮಾರ್ಗಸೂಚಿ ಅನ್ವಯ ಸುಮಾರು 20 * 20 * 3 ಮೀಟರ್ ಅಳತೆಯಲ್ಲಿ ಕೃಷಿ ಹೊಂಡ ಮಾಡಿ ಪ್ಲಾಸ್ಟಿಕ್ ಹೊದಿಕೆ ಹಾಕಿ ನೀರು ಸಂಗ್ರಹಣಾ ತೊಟ್ಟಿ ರಚಿಸಿದರು. ಇದಕ್ಕೆ ಶೇ. 50ರ ಸಹಾಯಧನದಂತೆ ರೂ. 67,094.00 ಗಳನ್ನು ಸಮಗ್ರ ತೋಟಗಾರಿಕೆ ಅಭಿವೃದ್ದಿ ಯೋಜನೆಯಡಿ ಸಹಾಯಧನವಾಗಿ ನೀಡಲಾಯಿತು. ಇಲಾಖಾ ವತಿಯಿಂದ ಅವರಿಗೆ ಆರ್ಥಿಕ ನೆರವು ದೊರೆಯಿತು.

Advertisement

ಸರಕಾರ ನೀಡಿರುವ ಸಹಾಯಧನ ಮತ್ತು ಸ್ವಂತದ ಒಂದಿಷ್ಟು ಹಣ ಖರ್ಚು ಮಾಡಿ ಕೃಷಿ ಹೊಂಡ ನಿರ್ಮಿಸಿಕೊಂಡಿದ್ದೇನೆ. 2018-19 ನೇ ಸಾಲಿನ ಬೇಸಿಗೆ (ಏಪ್ರಿಲ್-ಮೇ) ಯಲ್ಲಿ ಸುಳ್ಯ ತಾಲೂಕಿನಾದ್ಯಂತ ಬರದ ಪರಿಸ್ಥಿತಿ ಮೂಡಿದಾಗ ಸಹಾಯಧನದಡಿ ನಿರ್ಮಿಸಿದ ನೀರು ಸಂಗ್ರಹಣಾ ತೊಟ್ಟಿಯಲ್ಲಿ ಸಾಕಷ್ಟು ನೀರಿನ ಲಭ್ಯತೆ ಇದ್ದ ಕಾರಣ ಬರದ ನಡುವೆಯೂ ಎರಡರಿಂದ ಮೂರು ಸಲ ತೋಟಕ್ಕೆ ನೀರು ಕೊಡಲು ಸಾಧ್ಯವಾಯಿತು. ಹಾಗಾಗಿ ಅಡಿಕೆ ಮತ್ತು ಕಾಳುಮೆಣಸು ತೋಟವು ಬರದ ನಡುವೆಯೇ ಹಸಿರುಮಯವಾಗಿ ಕಂಗೊಳಿಸುತ್ತಾ ಹೆಚ್ಚಿನ ಬೆಳವಣಿಗೆಯ ಆಶಾಭಾವನೆ ಮೂಡಿಸಿದೆ. ಈ ವರ್ಷದಲ್ಲಿ 30-50% ಅಧಿಕ ಇಳುವರಿ ಪಡೆಯಬಹುದೆಂದು ಆಶಾಭಾವನೆ ಮೂಡಿದೆ” ಎಂದು ಕೃಷ್ಣ ಭಟ್‍ರವರು ತಮ್ಮ ಅಭಿಪ್ರಾಯ ತಿಳಿಸಿರುತ್ತಾರೆ ಎಂದು ತೋಟಗಾರಿಕೆ ಇಲಾಖೆ ಉಪನಿರ್ದೇಶಕರು ಹೇಳುತ್ತಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವಾಡಿಕೆಗಿಂತ  2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು ಅಧಿಕ

ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ  2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…

9 hours ago

ಸರ್ಕಾರಿ ಬಸ್ ನಿರ್ವಾಹಕರಿಗೆ ಸೂಕ್ತ ಭದ್ರತೆ ಒದಗಿಸುವಂತೆ ಮನವಿ

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…

9 hours ago

ಕೃಷಿ ವಿಶ್ವವಿದ್ಯಾಲಯಗಳು ಸಂಶೋಧನೆಗೆ ಹೆಚ್ಚಿನ ಆದ್ಯತೆ ನೀಡಬೇಕು

ಕೃಷಿ ಹಾಗೂ ರೈತರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದೆ…

9 hours ago

ಏರುತ್ತಿರುವ ತಾಪಮಾನ | 2030 ರ ವೇಳೆಗೆ ಕೃಷಿ ಕ್ಷೇತ್ರದ ಮೇಲೆ ಗಂಭೀರ ಪರಿಣಾಮ | ಕೃಷಿ ಸಾಲ ಮರುಪಾವತಿ ಮೇಲೆ ಹೊಡೆತ..? |

ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…

17 hours ago

ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಅಭಿಯಾನ | ರಾಜ್ಯಸಭಾ ಸಂಸದೆ ಸುಧಾಮೂರ್ತಿ ಸೇರಿದಂತೆ 10 ಮಂದಿ ನಾಮನಿರ್ದೇಶನ

ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…

18 hours ago

ಸಹಕಾರಿ ಪಾಠ | ಆರ್ಥಿಕ ಶಿಸ್ತು ಹಾಗೂ ಸಣ್ಣ ಸಣ್ಣ ಮೊತ್ತವೂ ಬ್ಯಾಂಕಿಗೆ ಏಕೆ ಬರಬೇಕು…?

ತೀರಾ ಸಣ್ಣ ಮಟ್ಟಿನ‌ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?

19 hours ago