Advertisement
ಸುದ್ದಿಗಳು

ಕೃಷಿ ನೀರಿನ ತೊಟ್ಟಿಯಲ್ಲಿ ಯಶಸ್ಸು ಕಂಡ ಬಳ್ಪದ ಕೃಷಿಕ

Share

ಬಳ್ಪ: ಕೃಷಿ ನೀರಿನ ತೊಟ್ಟಿಯಿಂದ ಕೃಷಿ ಭೂಮಿಯಲ್ಲಿ ಯಶಸ್ಸು ಕಂಡ ಕೃಷಿಕ ಬಳ್ಪ ಗ್ರಾಮದ ಪಠೋಳಿ ಕೃಷ್ಣ ಭಟ್. ಸಮಗ್ರ ತೋಟಗಾರಿಕೆ ಅಭಿವೃದ್ದಿ ಯೋಜನೆಯಡಿ ನೀರು ಸಂಗ್ರಹಣಾ ಘಟಕ ಯೋಜನೆಯಡಿ ಸುಳ್ಯ ತಾಲೂಕಿನ ಬಳ್ಪ ನಿವಾಸಿ ಪಿ. ಕೃಷ್ಣ ಭಟ್ ಇವರು ನೀರಾವರಿ ಬಗ್ಗೆ ತೋಟಗಾರಿಕೆ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿದಾಗ ಇಲಾಖಾ ಅಧಿಕಾರಿಗಳು ಇಲಾಖೆಯ ಸಹಾಯಧನದ ಮೂಲಕ ನೀರು ಸಂಗ್ರಹಣಾ ತೊಟ್ಟಿ ರಚನೆ ಮಾಡಿ ಬೇಸಿಗೆ ಕಾಲದಲ್ಲಿ ಕೃಷಿ ಭೂಮಿಯನ್ನು ಸುಸ್ಥಿತಿಯಲ್ಲಿ ಇಡಬಹುದೆಂಬ ಮಾಹಿತಿಯನ್ನು ನೀಡಿದರು.

ಅವರು ಇಲಾಖಾ ಮಾರ್ಗಸೂಚಿ ಅನ್ವಯ ಸುಮಾರು 20 * 20 * 3 ಮೀಟರ್ ಅಳತೆಯಲ್ಲಿ ಕೃಷಿ ಹೊಂಡ ಮಾಡಿ ಪ್ಲಾಸ್ಟಿಕ್ ಹೊದಿಕೆ ಹಾಕಿ ನೀರು ಸಂಗ್ರಹಣಾ ತೊಟ್ಟಿ ರಚಿಸಿದರು. ಇದಕ್ಕೆ ಶೇ. 50ರ ಸಹಾಯಧನದಂತೆ ರೂ. 67,094.00 ಗಳನ್ನು ಸಮಗ್ರ ತೋಟಗಾರಿಕೆ ಅಭಿವೃದ್ದಿ ಯೋಜನೆಯಡಿ ಸಹಾಯಧನವಾಗಿ ನೀಡಲಾಯಿತು. ಇಲಾಖಾ ವತಿಯಿಂದ ಅವರಿಗೆ ಆರ್ಥಿಕ ನೆರವು ದೊರೆಯಿತು.

ಸರಕಾರ ನೀಡಿರುವ ಸಹಾಯಧನ ಮತ್ತು ಸ್ವಂತದ ಒಂದಿಷ್ಟು ಹಣ ಖರ್ಚು ಮಾಡಿ ಕೃಷಿ ಹೊಂಡ ನಿರ್ಮಿಸಿಕೊಂಡಿದ್ದೇನೆ. 2018-19 ನೇ ಸಾಲಿನ ಬೇಸಿಗೆ (ಏಪ್ರಿಲ್-ಮೇ) ಯಲ್ಲಿ ಸುಳ್ಯ ತಾಲೂಕಿನಾದ್ಯಂತ ಬರದ ಪರಿಸ್ಥಿತಿ ಮೂಡಿದಾಗ ಸಹಾಯಧನದಡಿ ನಿರ್ಮಿಸಿದ ನೀರು ಸಂಗ್ರಹಣಾ ತೊಟ್ಟಿಯಲ್ಲಿ ಸಾಕಷ್ಟು ನೀರಿನ ಲಭ್ಯತೆ ಇದ್ದ ಕಾರಣ ಬರದ ನಡುವೆಯೂ ಎರಡರಿಂದ ಮೂರು ಸಲ ತೋಟಕ್ಕೆ ನೀರು ಕೊಡಲು ಸಾಧ್ಯವಾಯಿತು. ಹಾಗಾಗಿ ಅಡಿಕೆ ಮತ್ತು ಕಾಳುಮೆಣಸು ತೋಟವು ಬರದ ನಡುವೆಯೇ ಹಸಿರುಮಯವಾಗಿ ಕಂಗೊಳಿಸುತ್ತಾ ಹೆಚ್ಚಿನ ಬೆಳವಣಿಗೆಯ ಆಶಾಭಾವನೆ ಮೂಡಿಸಿದೆ. ಈ ವರ್ಷದಲ್ಲಿ 30-50% ಅಧಿಕ ಇಳುವರಿ ಪಡೆಯಬಹುದೆಂದು ಆಶಾಭಾವನೆ ಮೂಡಿದೆ” ಎಂದು ಕೃಷ್ಣ ಭಟ್‍ರವರು ತಮ್ಮ ಅಭಿಪ್ರಾಯ ತಿಳಿಸಿರುತ್ತಾರೆ ಎಂದು ತೋಟಗಾರಿಕೆ ಇಲಾಖೆ ಉಪನಿರ್ದೇಶಕರು ಹೇಳುತ್ತಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!

ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…

4 hours ago

ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!

ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…

8 hours ago

ಹವಾಮಾನ ವರದಿ | 02-04-2026 | ಕರಾವಳಿಯಲ್ಲಿ ಮಳೆ ಅನಿಶ್ಚಿತತೆ, ಒಳನಾಡಿನಲ್ಲಿ ಬಿಸಿಲು

ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…

1 day ago

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ

ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.

1 day ago

ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ

ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…

1 day ago

ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!

ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…

2 days ago