Advertisement
ಸುದ್ದಿಗಳು

ಕೃಷಿ ನೀರಿನ ತೊಟ್ಟಿಯಲ್ಲಿ ಯಶಸ್ಸು ಕಂಡ ಬಳ್ಪದ ಕೃಷಿಕ

Share

ಬಳ್ಪ: ಕೃಷಿ ನೀರಿನ ತೊಟ್ಟಿಯಿಂದ ಕೃಷಿ ಭೂಮಿಯಲ್ಲಿ ಯಶಸ್ಸು ಕಂಡ ಕೃಷಿಕ ಬಳ್ಪ ಗ್ರಾಮದ ಪಠೋಳಿ ಕೃಷ್ಣ ಭಟ್. ಸಮಗ್ರ ತೋಟಗಾರಿಕೆ ಅಭಿವೃದ್ದಿ ಯೋಜನೆಯಡಿ ನೀರು ಸಂಗ್ರಹಣಾ ಘಟಕ ಯೋಜನೆಯಡಿ ಸುಳ್ಯ ತಾಲೂಕಿನ ಬಳ್ಪ ನಿವಾಸಿ ಪಿ. ಕೃಷ್ಣ ಭಟ್ ಇವರು ನೀರಾವರಿ ಬಗ್ಗೆ ತೋಟಗಾರಿಕೆ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿದಾಗ ಇಲಾಖಾ ಅಧಿಕಾರಿಗಳು ಇಲಾಖೆಯ ಸಹಾಯಧನದ ಮೂಲಕ ನೀರು ಸಂಗ್ರಹಣಾ ತೊಟ್ಟಿ ರಚನೆ ಮಾಡಿ ಬೇಸಿಗೆ ಕಾಲದಲ್ಲಿ ಕೃಷಿ ಭೂಮಿಯನ್ನು ಸುಸ್ಥಿತಿಯಲ್ಲಿ ಇಡಬಹುದೆಂಬ ಮಾಹಿತಿಯನ್ನು ನೀಡಿದರು.

ಅವರು ಇಲಾಖಾ ಮಾರ್ಗಸೂಚಿ ಅನ್ವಯ ಸುಮಾರು 20 * 20 * 3 ಮೀಟರ್ ಅಳತೆಯಲ್ಲಿ ಕೃಷಿ ಹೊಂಡ ಮಾಡಿ ಪ್ಲಾಸ್ಟಿಕ್ ಹೊದಿಕೆ ಹಾಕಿ ನೀರು ಸಂಗ್ರಹಣಾ ತೊಟ್ಟಿ ರಚಿಸಿದರು. ಇದಕ್ಕೆ ಶೇ. 50ರ ಸಹಾಯಧನದಂತೆ ರೂ. 67,094.00 ಗಳನ್ನು ಸಮಗ್ರ ತೋಟಗಾರಿಕೆ ಅಭಿವೃದ್ದಿ ಯೋಜನೆಯಡಿ ಸಹಾಯಧನವಾಗಿ ನೀಡಲಾಯಿತು. ಇಲಾಖಾ ವತಿಯಿಂದ ಅವರಿಗೆ ಆರ್ಥಿಕ ನೆರವು ದೊರೆಯಿತು.

ಸರಕಾರ ನೀಡಿರುವ ಸಹಾಯಧನ ಮತ್ತು ಸ್ವಂತದ ಒಂದಿಷ್ಟು ಹಣ ಖರ್ಚು ಮಾಡಿ ಕೃಷಿ ಹೊಂಡ ನಿರ್ಮಿಸಿಕೊಂಡಿದ್ದೇನೆ. 2018-19 ನೇ ಸಾಲಿನ ಬೇಸಿಗೆ (ಏಪ್ರಿಲ್-ಮೇ) ಯಲ್ಲಿ ಸುಳ್ಯ ತಾಲೂಕಿನಾದ್ಯಂತ ಬರದ ಪರಿಸ್ಥಿತಿ ಮೂಡಿದಾಗ ಸಹಾಯಧನದಡಿ ನಿರ್ಮಿಸಿದ ನೀರು ಸಂಗ್ರಹಣಾ ತೊಟ್ಟಿಯಲ್ಲಿ ಸಾಕಷ್ಟು ನೀರಿನ ಲಭ್ಯತೆ ಇದ್ದ ಕಾರಣ ಬರದ ನಡುವೆಯೂ ಎರಡರಿಂದ ಮೂರು ಸಲ ತೋಟಕ್ಕೆ ನೀರು ಕೊಡಲು ಸಾಧ್ಯವಾಯಿತು. ಹಾಗಾಗಿ ಅಡಿಕೆ ಮತ್ತು ಕಾಳುಮೆಣಸು ತೋಟವು ಬರದ ನಡುವೆಯೇ ಹಸಿರುಮಯವಾಗಿ ಕಂಗೊಳಿಸುತ್ತಾ ಹೆಚ್ಚಿನ ಬೆಳವಣಿಗೆಯ ಆಶಾಭಾವನೆ ಮೂಡಿಸಿದೆ. ಈ ವರ್ಷದಲ್ಲಿ 30-50% ಅಧಿಕ ಇಳುವರಿ ಪಡೆಯಬಹುದೆಂದು ಆಶಾಭಾವನೆ ಮೂಡಿದೆ” ಎಂದು ಕೃಷ್ಣ ಭಟ್‍ರವರು ತಮ್ಮ ಅಭಿಪ್ರಾಯ ತಿಳಿಸಿರುತ್ತಾರೆ ಎಂದು ತೋಟಗಾರಿಕೆ ಇಲಾಖೆ ಉಪನಿರ್ದೇಶಕರು ಹೇಳುತ್ತಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

1 day ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

2 days ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

2 days ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

2 days ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

2 days ago