Advertisement
ಸುದ್ದಿಗಳು

ಕೃಷಿ ನೀರಿನ ತೊಟ್ಟಿಯಲ್ಲಿ ಯಶಸ್ಸು ಕಂಡ ಬಳ್ಪದ ಕೃಷಿಕ

Share

ಬಳ್ಪ: ಕೃಷಿ ನೀರಿನ ತೊಟ್ಟಿಯಿಂದ ಕೃಷಿ ಭೂಮಿಯಲ್ಲಿ ಯಶಸ್ಸು ಕಂಡ ಕೃಷಿಕ ಬಳ್ಪ ಗ್ರಾಮದ ಪಠೋಳಿ ಕೃಷ್ಣ ಭಟ್. ಸಮಗ್ರ ತೋಟಗಾರಿಕೆ ಅಭಿವೃದ್ದಿ ಯೋಜನೆಯಡಿ ನೀರು ಸಂಗ್ರಹಣಾ ಘಟಕ ಯೋಜನೆಯಡಿ ಸುಳ್ಯ ತಾಲೂಕಿನ ಬಳ್ಪ ನಿವಾಸಿ ಪಿ. ಕೃಷ್ಣ ಭಟ್ ಇವರು ನೀರಾವರಿ ಬಗ್ಗೆ ತೋಟಗಾರಿಕೆ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿದಾಗ ಇಲಾಖಾ ಅಧಿಕಾರಿಗಳು ಇಲಾಖೆಯ ಸಹಾಯಧನದ ಮೂಲಕ ನೀರು ಸಂಗ್ರಹಣಾ ತೊಟ್ಟಿ ರಚನೆ ಮಾಡಿ ಬೇಸಿಗೆ ಕಾಲದಲ್ಲಿ ಕೃಷಿ ಭೂಮಿಯನ್ನು ಸುಸ್ಥಿತಿಯಲ್ಲಿ ಇಡಬಹುದೆಂಬ ಮಾಹಿತಿಯನ್ನು ನೀಡಿದರು.

ಅವರು ಇಲಾಖಾ ಮಾರ್ಗಸೂಚಿ ಅನ್ವಯ ಸುಮಾರು 20 * 20 * 3 ಮೀಟರ್ ಅಳತೆಯಲ್ಲಿ ಕೃಷಿ ಹೊಂಡ ಮಾಡಿ ಪ್ಲಾಸ್ಟಿಕ್ ಹೊದಿಕೆ ಹಾಕಿ ನೀರು ಸಂಗ್ರಹಣಾ ತೊಟ್ಟಿ ರಚಿಸಿದರು. ಇದಕ್ಕೆ ಶೇ. 50ರ ಸಹಾಯಧನದಂತೆ ರೂ. 67,094.00 ಗಳನ್ನು ಸಮಗ್ರ ತೋಟಗಾರಿಕೆ ಅಭಿವೃದ್ದಿ ಯೋಜನೆಯಡಿ ಸಹಾಯಧನವಾಗಿ ನೀಡಲಾಯಿತು. ಇಲಾಖಾ ವತಿಯಿಂದ ಅವರಿಗೆ ಆರ್ಥಿಕ ನೆರವು ದೊರೆಯಿತು.

ಸರಕಾರ ನೀಡಿರುವ ಸಹಾಯಧನ ಮತ್ತು ಸ್ವಂತದ ಒಂದಿಷ್ಟು ಹಣ ಖರ್ಚು ಮಾಡಿ ಕೃಷಿ ಹೊಂಡ ನಿರ್ಮಿಸಿಕೊಂಡಿದ್ದೇನೆ. 2018-19 ನೇ ಸಾಲಿನ ಬೇಸಿಗೆ (ಏಪ್ರಿಲ್-ಮೇ) ಯಲ್ಲಿ ಸುಳ್ಯ ತಾಲೂಕಿನಾದ್ಯಂತ ಬರದ ಪರಿಸ್ಥಿತಿ ಮೂಡಿದಾಗ ಸಹಾಯಧನದಡಿ ನಿರ್ಮಿಸಿದ ನೀರು ಸಂಗ್ರಹಣಾ ತೊಟ್ಟಿಯಲ್ಲಿ ಸಾಕಷ್ಟು ನೀರಿನ ಲಭ್ಯತೆ ಇದ್ದ ಕಾರಣ ಬರದ ನಡುವೆಯೂ ಎರಡರಿಂದ ಮೂರು ಸಲ ತೋಟಕ್ಕೆ ನೀರು ಕೊಡಲು ಸಾಧ್ಯವಾಯಿತು. ಹಾಗಾಗಿ ಅಡಿಕೆ ಮತ್ತು ಕಾಳುಮೆಣಸು ತೋಟವು ಬರದ ನಡುವೆಯೇ ಹಸಿರುಮಯವಾಗಿ ಕಂಗೊಳಿಸುತ್ತಾ ಹೆಚ್ಚಿನ ಬೆಳವಣಿಗೆಯ ಆಶಾಭಾವನೆ ಮೂಡಿಸಿದೆ. ಈ ವರ್ಷದಲ್ಲಿ 30-50% ಅಧಿಕ ಇಳುವರಿ ಪಡೆಯಬಹುದೆಂದು ಆಶಾಭಾವನೆ ಮೂಡಿದೆ” ಎಂದು ಕೃಷ್ಣ ಭಟ್‍ರವರು ತಮ್ಮ ಅಭಿಪ್ರಾಯ ತಿಳಿಸಿರುತ್ತಾರೆ ಎಂದು ತೋಟಗಾರಿಕೆ ಇಲಾಖೆ ಉಪನಿರ್ದೇಶಕರು ಹೇಳುತ್ತಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

9 hours ago

ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?

ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…

12 hours ago

ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!

ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…

13 hours ago

ಎಲ್ ನಿನೊ ಮತ್ತಷ್ಟು ಬಲಗೊಳ್ಳುವ ಮುನ್ಸೂಚನೆ..!

2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…

14 hours ago

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?

ನಾಗಾಲ್ಯಾಂಡ್‌ನಲ್ಲಿ ರಬ್ಬರ್‌ ಕೃಷಿ ಸುಮಾರು 29,794 ಹೆಕ್ಟೇರ್‌ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್‌ನಲ್ಲಿ ಸೂಕ್ತ…

1 day ago

ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ

ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…

1 day ago