Advertisement
ಸುದ್ದಿಗಳು

ಕೃಷಿ ನೀರಿನ ತೊಟ್ಟಿಯಲ್ಲಿ ಯಶಸ್ಸು ಕಂಡ ಬಳ್ಪದ ಕೃಷಿಕ

Share

ಬಳ್ಪ: ಕೃಷಿ ನೀರಿನ ತೊಟ್ಟಿಯಿಂದ ಕೃಷಿ ಭೂಮಿಯಲ್ಲಿ ಯಶಸ್ಸು ಕಂಡ ಕೃಷಿಕ ಬಳ್ಪ ಗ್ರಾಮದ ಪಠೋಳಿ ಕೃಷ್ಣ ಭಟ್. ಸಮಗ್ರ ತೋಟಗಾರಿಕೆ ಅಭಿವೃದ್ದಿ ಯೋಜನೆಯಡಿ ನೀರು ಸಂಗ್ರಹಣಾ ಘಟಕ ಯೋಜನೆಯಡಿ ಸುಳ್ಯ ತಾಲೂಕಿನ ಬಳ್ಪ ನಿವಾಸಿ ಪಿ. ಕೃಷ್ಣ ಭಟ್ ಇವರು ನೀರಾವರಿ ಬಗ್ಗೆ ತೋಟಗಾರಿಕೆ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿದಾಗ ಇಲಾಖಾ ಅಧಿಕಾರಿಗಳು ಇಲಾಖೆಯ ಸಹಾಯಧನದ ಮೂಲಕ ನೀರು ಸಂಗ್ರಹಣಾ ತೊಟ್ಟಿ ರಚನೆ ಮಾಡಿ ಬೇಸಿಗೆ ಕಾಲದಲ್ಲಿ ಕೃಷಿ ಭೂಮಿಯನ್ನು ಸುಸ್ಥಿತಿಯಲ್ಲಿ ಇಡಬಹುದೆಂಬ ಮಾಹಿತಿಯನ್ನು ನೀಡಿದರು.

ಅವರು ಇಲಾಖಾ ಮಾರ್ಗಸೂಚಿ ಅನ್ವಯ ಸುಮಾರು 20 * 20 * 3 ಮೀಟರ್ ಅಳತೆಯಲ್ಲಿ ಕೃಷಿ ಹೊಂಡ ಮಾಡಿ ಪ್ಲಾಸ್ಟಿಕ್ ಹೊದಿಕೆ ಹಾಕಿ ನೀರು ಸಂಗ್ರಹಣಾ ತೊಟ್ಟಿ ರಚಿಸಿದರು. ಇದಕ್ಕೆ ಶೇ. 50ರ ಸಹಾಯಧನದಂತೆ ರೂ. 67,094.00 ಗಳನ್ನು ಸಮಗ್ರ ತೋಟಗಾರಿಕೆ ಅಭಿವೃದ್ದಿ ಯೋಜನೆಯಡಿ ಸಹಾಯಧನವಾಗಿ ನೀಡಲಾಯಿತು. ಇಲಾಖಾ ವತಿಯಿಂದ ಅವರಿಗೆ ಆರ್ಥಿಕ ನೆರವು ದೊರೆಯಿತು.

Advertisement

ಸರಕಾರ ನೀಡಿರುವ ಸಹಾಯಧನ ಮತ್ತು ಸ್ವಂತದ ಒಂದಿಷ್ಟು ಹಣ ಖರ್ಚು ಮಾಡಿ ಕೃಷಿ ಹೊಂಡ ನಿರ್ಮಿಸಿಕೊಂಡಿದ್ದೇನೆ. 2018-19 ನೇ ಸಾಲಿನ ಬೇಸಿಗೆ (ಏಪ್ರಿಲ್-ಮೇ) ಯಲ್ಲಿ ಸುಳ್ಯ ತಾಲೂಕಿನಾದ್ಯಂತ ಬರದ ಪರಿಸ್ಥಿತಿ ಮೂಡಿದಾಗ ಸಹಾಯಧನದಡಿ ನಿರ್ಮಿಸಿದ ನೀರು ಸಂಗ್ರಹಣಾ ತೊಟ್ಟಿಯಲ್ಲಿ ಸಾಕಷ್ಟು ನೀರಿನ ಲಭ್ಯತೆ ಇದ್ದ ಕಾರಣ ಬರದ ನಡುವೆಯೂ ಎರಡರಿಂದ ಮೂರು ಸಲ ತೋಟಕ್ಕೆ ನೀರು ಕೊಡಲು ಸಾಧ್ಯವಾಯಿತು. ಹಾಗಾಗಿ ಅಡಿಕೆ ಮತ್ತು ಕಾಳುಮೆಣಸು ತೋಟವು ಬರದ ನಡುವೆಯೇ ಹಸಿರುಮಯವಾಗಿ ಕಂಗೊಳಿಸುತ್ತಾ ಹೆಚ್ಚಿನ ಬೆಳವಣಿಗೆಯ ಆಶಾಭಾವನೆ ಮೂಡಿಸಿದೆ. ಈ ವರ್ಷದಲ್ಲಿ 30-50% ಅಧಿಕ ಇಳುವರಿ ಪಡೆಯಬಹುದೆಂದು ಆಶಾಭಾವನೆ ಮೂಡಿದೆ” ಎಂದು ಕೃಷ್ಣ ಭಟ್‍ರವರು ತಮ್ಮ ಅಭಿಪ್ರಾಯ ತಿಳಿಸಿರುತ್ತಾರೆ ಎಂದು ತೋಟಗಾರಿಕೆ ಇಲಾಖೆ ಉಪನಿರ್ದೇಶಕರು ಹೇಳುತ್ತಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಲಸಿನ ಹಾಲಿನಿಂದ ವಸಡು ರೋಗಕ್ಕೆ ಚಿಕಿತ್ಸೆ…? ಬ್ರೆಜಿಲ್‌ ವಿಜ್ಞಾನಿಗಳ ಹೊಸ ಸಂಶೋಧನೆ ಆಶಾಭರವಸೆ ಮೂಡಿಸಿದೆ

ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್‌ ಬಳಸಿ ವಿಜ್ಞಾನಿಗಳು ವಸಡು…

2 days ago

ಅಡಿಕೆಗೆ ಬ್ಯಾನ್ ಅಲ್ಲ… ಕಲಬೆರಕೆ ಅಡಿಕೆಗೆ ಬ್ಯಾನ್ ಆಗಬೇಕು..! – ಮಲೆನಾಡಿನ ಅಡಿಕೆಗೆ ಪ್ರತ್ಯೇಕ ಮಾರುಕಟ್ಟೆ ಅಗತ್ಯ

ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…

2 days ago

ಬೆಲೆ ಕುಸಿದಾಗ ನಷ್ಟ ಬೇಡ – ರಂಬುಟಾನ್‌ ಫ್ರೀಜ್‌ ಮಾಡಿ, ನಂತರ ಮಾರಾಟ ಮಾಡಿ..! ಕೃಷಿಕನ ಹೊಸ ಪ್ರಯೋಗ

ರಂಬುಟಾನ್‌ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್‌ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…

2 days ago

ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ

ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

3 days ago

ಕಾಪುವಿನಲ್ಲಿ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ಗೆ ಚಾಲನೆ – 400ಕ್ಕೂ ಅಧಿಕ ಪ್ರತಿಭೆಗಳು ಭಾಗಿ, 24 ಮಂದಿಗೆ ರಾಷ್ಟ್ರಮಟ್ಟದ ಅವಕಾಶ

ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

3 days ago

34 ಟನ್ ಅಡಿಕೆ ವಂಚನೆ – ಅಸ್ಸಾಂ ವ್ಯಾಪಾರಿಗಳಿಗೆ ಹರಿಯಾಣದಲ್ಲಿ ವಂಚನೆ..!

ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…

3 days ago