ಬಳ್ಪ: ಕೃಷಿ ನೀರಿನ ತೊಟ್ಟಿಯಿಂದ ಕೃಷಿ ಭೂಮಿಯಲ್ಲಿ ಯಶಸ್ಸು ಕಂಡ ಕೃಷಿಕ ಬಳ್ಪ ಗ್ರಾಮದ ಪಠೋಳಿ ಕೃಷ್ಣ ಭಟ್. ಸಮಗ್ರ ತೋಟಗಾರಿಕೆ ಅಭಿವೃದ್ದಿ ಯೋಜನೆಯಡಿ ನೀರು ಸಂಗ್ರಹಣಾ ಘಟಕ ಯೋಜನೆಯಡಿ ಸುಳ್ಯ ತಾಲೂಕಿನ ಬಳ್ಪ ನಿವಾಸಿ ಪಿ. ಕೃಷ್ಣ ಭಟ್ ಇವರು ನೀರಾವರಿ ಬಗ್ಗೆ ತೋಟಗಾರಿಕೆ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿದಾಗ ಇಲಾಖಾ ಅಧಿಕಾರಿಗಳು ಇಲಾಖೆಯ ಸಹಾಯಧನದ ಮೂಲಕ ನೀರು ಸಂಗ್ರಹಣಾ ತೊಟ್ಟಿ ರಚನೆ ಮಾಡಿ ಬೇಸಿಗೆ ಕಾಲದಲ್ಲಿ ಕೃಷಿ ಭೂಮಿಯನ್ನು ಸುಸ್ಥಿತಿಯಲ್ಲಿ ಇಡಬಹುದೆಂಬ ಮಾಹಿತಿಯನ್ನು ನೀಡಿದರು.
ಅವರು ಇಲಾಖಾ ಮಾರ್ಗಸೂಚಿ ಅನ್ವಯ ಸುಮಾರು 20 * 20 * 3 ಮೀಟರ್ ಅಳತೆಯಲ್ಲಿ ಕೃಷಿ ಹೊಂಡ ಮಾಡಿ ಪ್ಲಾಸ್ಟಿಕ್ ಹೊದಿಕೆ ಹಾಕಿ ನೀರು ಸಂಗ್ರಹಣಾ ತೊಟ್ಟಿ ರಚಿಸಿದರು. ಇದಕ್ಕೆ ಶೇ. 50ರ ಸಹಾಯಧನದಂತೆ ರೂ. 67,094.00 ಗಳನ್ನು ಸಮಗ್ರ ತೋಟಗಾರಿಕೆ ಅಭಿವೃದ್ದಿ ಯೋಜನೆಯಡಿ ಸಹಾಯಧನವಾಗಿ ನೀಡಲಾಯಿತು. ಇಲಾಖಾ ವತಿಯಿಂದ ಅವರಿಗೆ ಆರ್ಥಿಕ ನೆರವು ದೊರೆಯಿತು.
ಸರಕಾರ ನೀಡಿರುವ ಸಹಾಯಧನ ಮತ್ತು ಸ್ವಂತದ ಒಂದಿಷ್ಟು ಹಣ ಖರ್ಚು ಮಾಡಿ ಕೃಷಿ ಹೊಂಡ ನಿರ್ಮಿಸಿಕೊಂಡಿದ್ದೇನೆ. 2018-19 ನೇ ಸಾಲಿನ ಬೇಸಿಗೆ (ಏಪ್ರಿಲ್-ಮೇ) ಯಲ್ಲಿ ಸುಳ್ಯ ತಾಲೂಕಿನಾದ್ಯಂತ ಬರದ ಪರಿಸ್ಥಿತಿ ಮೂಡಿದಾಗ ಸಹಾಯಧನದಡಿ ನಿರ್ಮಿಸಿದ ನೀರು ಸಂಗ್ರಹಣಾ ತೊಟ್ಟಿಯಲ್ಲಿ ಸಾಕಷ್ಟು ನೀರಿನ ಲಭ್ಯತೆ ಇದ್ದ ಕಾರಣ ಬರದ ನಡುವೆಯೂ ಎರಡರಿಂದ ಮೂರು ಸಲ ತೋಟಕ್ಕೆ ನೀರು ಕೊಡಲು ಸಾಧ್ಯವಾಯಿತು. ಹಾಗಾಗಿ ಅಡಿಕೆ ಮತ್ತು ಕಾಳುಮೆಣಸು ತೋಟವು ಬರದ ನಡುವೆಯೇ ಹಸಿರುಮಯವಾಗಿ ಕಂಗೊಳಿಸುತ್ತಾ ಹೆಚ್ಚಿನ ಬೆಳವಣಿಗೆಯ ಆಶಾಭಾವನೆ ಮೂಡಿಸಿದೆ. ಈ ವರ್ಷದಲ್ಲಿ 30-50% ಅಧಿಕ ಇಳುವರಿ ಪಡೆಯಬಹುದೆಂದು ಆಶಾಭಾವನೆ ಮೂಡಿದೆ” ಎಂದು ಕೃಷ್ಣ ಭಟ್ರವರು ತಮ್ಮ ಅಭಿಪ್ರಾಯ ತಿಳಿಸಿರುತ್ತಾರೆ ಎಂದು ತೋಟಗಾರಿಕೆ ಇಲಾಖೆ ಉಪನಿರ್ದೇಶಕರು ಹೇಳುತ್ತಾರೆ.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…