ಕೃಷಿ ಬದುಕಿನಲ್ಲಿ ಸಂತೋಷವಿದೆ

March 1, 2020
2:17 PM

ಪುತ್ತೂರು:ಕೃಷಿಯು ನಂಬಿದವರನ್ನು ಕೈಬಿಡದು. ನಾವೂ ಕೃಷಿಯನ್ನು ಕೈಬಿಡಬಾರದು. ಕಳೆದ ಹಲವು ವರ್ಷಗಳ ಕೃಷಿ ಬದುಕಿನಲ್ಲಿ ಸಂತೋಷವಿದೆ. ಸಾರ್ಥಕ ಬದುಕು ಕಾಣಲು ಸಾಧ್ಯವಾಗಿದೆ ಎಂದು ಕೃಷಿಕ, ನಿವೃತ್ತ ಶಿಕ್ಷಕ ವಾಟೆ ಮಹಾಲಿಂಗ ಭಟ್ ಹೇಳಿದರು.

ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಸಭೆಯು ಪುತ್ತೂರಿನ ಎಳ್ಮುಡಿಯಲ್ಲಿರುವ ಸಂಘದ ಕಚೇರಿಯಲ್ಲಿ ಸಂಘದ ಅಧ್ಯಕ್ಷ ಅಶೋಕ್ ಕಿನಿಲ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಂದರ್ಭ ಸಂಘದ ಹಿರಿಯ ಸದಸ್ಯ ವಾಟೆ ಮಹಾಲಿಂಗ ಭಟ್ ಅವರನ್ನು ಗೌರವಿಸಲಾಯಿತು.ಸಂಘದ ನಿಕಟಪೂರ್ವ ಅದ್ಯಕ್ಷ ಮಂಚಿ ಶ್ರೀನಿವಾಸ ಆಚಾರ್ ಅಭಿನಂದಿಸಿ ಮಾತನಾಡಿ, ವಾಟೆಯವರಿಂದ ಕಲಿಯುವುದಕ್ಕೆ ಸಾಕಷ್ಟಿದೆ. ಅವರು ಸತತ ಕಲಿಕೆಯಲ್ಲಿ ತೊಡಗಿಕೊಂಡವರು. ಜೀವನವನ್ನು ಅನುಭವಿಸಿದ್ದಾರೆ. ಹೀಗಾಗಿ ಎಲ್ಲರಿಗೂ ಮಾದರಿಯಾಗಿದ್ದಾರೆ ಎಂದರು.

ಗೌರವ ಸ್ವೀಕರಿಸಿ ಮಾತನಾಡಿದ ವಾಟೆ ಮಹಾಲಿಂಗ ಭಟ್,ಕೃಷಿಕರು ಅನುಭವಗಳನ್ನು ಹಂಚಿಕೊಳ್ಳಬೇಕು. ಕೃಷಿ ಯಾವತ್ತೂ ಕೈಬಿಡದು. ಆದರೆ ಕೃಷಿಕರ ನಡುವೆ ಪರಸ್ಪರ ಸಂವಹನ ನಡೆಯಬೇಕು. ಹೀಗಾದರೆ ಕೃಷಿ ಇನ್ನಷ್ಟು ಗಟ್ಟಿಯಾಗಲು ಸಾಧ್ಯ. ಅನುಭವ ಉಳ್ಳವರು ಕೃಷಿ ಸಂಘಟನೆಗಳಲ್ಲಿ ಹೆಚ್ಚು ತೊಡಗಿಸಿಕೊಳ್ಳುವಂತಾಗಬೇಕು ಎಂದರು.

ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಉಪಾದ್ಯಕ್ಷ ಎಂ ಜಿ ಸತ್ಯನಾರಾಯಣ, ಹಿರಿಯ ಸದಸ್ಯ ದಯಾನಂದ ಕೋಟೆ ಮಾತನಾಡಿದರು. ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಅಧ್ಯಕ್ಷ ಅಶೋಕ್ ಕಿನಿಲ, ಕಾರ್ಯದರ್ಶಿ ಮಹೇಶ್ ಪುಚ್ಚಪ್ಪಾಡಿ ಉಪಸ್ಥಿತರಿದ್ದರು.

ಅಧ್ಯಕ್ಷ ಅಶೋಕ್ ಕಿನಿಲ ಸ್ವಾಗತಿಸಿ ಕಾರ್ಯದರ್ಶಿ ಮಹೇಶ್ ಪುಚ್ಚಪ್ಪಾಡಿ ವಂದಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಭಾರತದ ಚೆಸ್ ಇತಿಹಾಸದಲ್ಲಿ ಹೊಸ ಅಧ್ಯಾಯ – ನಾರ್ವೆ ಚೆಸ್ ಕಿರೀಟ ಗೆದ್ದ ಮೊದಲ ಭಾರತೀಯ ಪ್ರಜ್ಞಾನಂದ
June 6, 2026
9:23 AM
by: ಮಿರರ್‌ ಡೆಸ್ಕ್
ಜೇನುಗೂಡುಗಳ ಕೊರತೆಯಿಂದ ಪರಾಗಸ್ಪರ್ಶ ವ್ಯವಸ್ಥೆ ಮೇಲೆ ಪರಿಣಾಮ ; ಕೃಷಿ ಕ್ಷೇತ್ರದಲ್ಲಿ ಆತಂಕ – ಆಹಾರ ಬೆಳೆ ಉತ್ಪಾದನೆಗೆ ಸಂಕಷ್ಟದ ಎಚ್ಚರಿಕೆ
June 5, 2026
10:04 PM
by: ಮಿರರ್‌ ಡೆಸ್ಕ್
ಕಾಸರಗೋಡು ಜಿಲ್ಲೆಯಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ – ರೆಡ್ ಅಲರ್ಟ್ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮ
June 5, 2026
8:53 PM
by: ಮಿರರ್‌ ಡೆಸ್ಕ್
ಮಲೆನಾಡಿನ ಸಂಕಷ್ಟವೇ ಅವಕಾಶವಾಗಬಹುದೇ? : ‘ನಿರಪೇಕ್ಷಿತ ಕಾಡು ಕೃಷಿ’ ಹೊಸ ಪರಿಕಲ್ಪನೆ
June 5, 2026
8:20 PM
by: ಪ್ರಬಂಧ ಅಂಬುತೀರ್ಥ

You cannot copy content of this page - Copyright -The Rural Mirror