ಪುತ್ತೂರು:ಕೃಷಿಯು ನಂಬಿದವರನ್ನು ಕೈಬಿಡದು. ನಾವೂ ಕೃಷಿಯನ್ನು ಕೈಬಿಡಬಾರದು. ಕಳೆದ ಹಲವು ವರ್ಷಗಳ ಕೃಷಿ ಬದುಕಿನಲ್ಲಿ ಸಂತೋಷವಿದೆ. ಸಾರ್ಥಕ ಬದುಕು ಕಾಣಲು ಸಾಧ್ಯವಾಗಿದೆ ಎಂದು ಕೃಷಿಕ, ನಿವೃತ್ತ ಶಿಕ್ಷಕ ವಾಟೆ ಮಹಾಲಿಂಗ ಭಟ್ ಹೇಳಿದರು.
ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಸಭೆಯು ಪುತ್ತೂರಿನ ಎಳ್ಮುಡಿಯಲ್ಲಿರುವ ಸಂಘದ ಕಚೇರಿಯಲ್ಲಿ ಸಂಘದ ಅಧ್ಯಕ್ಷ ಅಶೋಕ್ ಕಿನಿಲ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಂದರ್ಭ ಸಂಘದ ಹಿರಿಯ ಸದಸ್ಯ ವಾಟೆ ಮಹಾಲಿಂಗ ಭಟ್ ಅವರನ್ನು ಗೌರವಿಸಲಾಯಿತು.ಸಂಘದ ನಿಕಟಪೂರ್ವ ಅದ್ಯಕ್ಷ ಮಂಚಿ ಶ್ರೀನಿವಾಸ ಆಚಾರ್ ಅಭಿನಂದಿಸಿ ಮಾತನಾಡಿ, ವಾಟೆಯವರಿಂದ ಕಲಿಯುವುದಕ್ಕೆ ಸಾಕಷ್ಟಿದೆ. ಅವರು ಸತತ ಕಲಿಕೆಯಲ್ಲಿ ತೊಡಗಿಕೊಂಡವರು. ಜೀವನವನ್ನು ಅನುಭವಿಸಿದ್ದಾರೆ. ಹೀಗಾಗಿ ಎಲ್ಲರಿಗೂ ಮಾದರಿಯಾಗಿದ್ದಾರೆ ಎಂದರು.
ಗೌರವ ಸ್ವೀಕರಿಸಿ ಮಾತನಾಡಿದ ವಾಟೆ ಮಹಾಲಿಂಗ ಭಟ್,ಕೃಷಿಕರು ಅನುಭವಗಳನ್ನು ಹಂಚಿಕೊಳ್ಳಬೇಕು. ಕೃಷಿ ಯಾವತ್ತೂ ಕೈಬಿಡದು. ಆದರೆ ಕೃಷಿಕರ ನಡುವೆ ಪರಸ್ಪರ ಸಂವಹನ ನಡೆಯಬೇಕು. ಹೀಗಾದರೆ ಕೃಷಿ ಇನ್ನಷ್ಟು ಗಟ್ಟಿಯಾಗಲು ಸಾಧ್ಯ. ಅನುಭವ ಉಳ್ಳವರು ಕೃಷಿ ಸಂಘಟನೆಗಳಲ್ಲಿ ಹೆಚ್ಚು ತೊಡಗಿಸಿಕೊಳ್ಳುವಂತಾಗಬೇಕು ಎಂದರು.
ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಉಪಾದ್ಯಕ್ಷ ಎಂ ಜಿ ಸತ್ಯನಾರಾಯಣ, ಹಿರಿಯ ಸದಸ್ಯ ದಯಾನಂದ ಕೋಟೆ ಮಾತನಾಡಿದರು. ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಅಧ್ಯಕ್ಷ ಅಶೋಕ್ ಕಿನಿಲ, ಕಾರ್ಯದರ್ಶಿ ಮಹೇಶ್ ಪುಚ್ಚಪ್ಪಾಡಿ ಉಪಸ್ಥಿತರಿದ್ದರು.
ಅಧ್ಯಕ್ಷ ಅಶೋಕ್ ಕಿನಿಲ ಸ್ವಾಗತಿಸಿ ಕಾರ್ಯದರ್ಶಿ ಮಹೇಶ್ ಪುಚ್ಚಪ್ಪಾಡಿ ವಂದಿಸಿದರು.
ಸಾರ್ವಜನಿಕ ಹಿತದೃಷ್ಠಿಯಿಂದ ಆಗುಂಬೆ ಘಾಟಿಯ ಮೂಲಕ ನಾಳೆಯಿಂದ ಸೆಪ್ಟಂಬರ್ 30 ರವರೆಗೆ ಲಘು…
ಕೃಷಿ ಸಂಸ್ಕರಣಾ ಘಟಕ ಸ್ಥಾಪಿಸುವ ರೈತರಿಗೆ ಈ ವರ್ಷದಿಂದ ರಾಜ್ಯ ಸರ್ಕಾರ 9…
ಚಿಕ್ಕಮಗಳೂರು ಜಿಲ್ಲೆಯಲ್ಲಿ ಸಾಧಾರಣದಿಂದ ಹೆಚ್ಚು ಮಳೆಯಾಗುತ್ತಿದೆ. ಹೆಚ್ಚು ಮಳೆಯಿಂದಾಗಿ ಜಿಲ್ಲೆಯ ಮುಳ್ಳಯ್ಯನಗಿರಿ ರಸ್ತೆಯೆ…
ದಾವಣಗೆರೆ ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ಸಹಯೋಗದೊಂದಿಗೆ ಜೂನ್.16 ರಿಂದ 18 ವರೆಗೆ…
ರಾಜ್ಯದಲ್ಲಿ ಮಾರಣಾಂತಿಕ ಕ್ಯಾನ್ಸರ್ರೋಗದಿಂದ ಬಳಲುತ್ತಿರುವ ಹಾಗೂ ಒಂದರಿಂದ ಹತ್ತನೆ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ…
ಇಂದು ವಿಶ್ವ ರಕ್ತದಾನಿಗಳ ದಿನ. ಪ್ರತಿವರ್ಷ ಜೂನ್ 14 ರಂದು ವಿಶ್ವ ರಕ್ತದಾನಿಗಳ…