ಪುತ್ತೂರು:ಕೃಷಿಯು ನಂಬಿದವರನ್ನು ಕೈಬಿಡದು. ನಾವೂ ಕೃಷಿಯನ್ನು ಕೈಬಿಡಬಾರದು. ಕಳೆದ ಹಲವು ವರ್ಷಗಳ ಕೃಷಿ ಬದುಕಿನಲ್ಲಿ ಸಂತೋಷವಿದೆ. ಸಾರ್ಥಕ ಬದುಕು ಕಾಣಲು ಸಾಧ್ಯವಾಗಿದೆ ಎಂದು ಕೃಷಿಕ, ನಿವೃತ್ತ ಶಿಕ್ಷಕ ವಾಟೆ ಮಹಾಲಿಂಗ ಭಟ್ ಹೇಳಿದರು.
ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಸಭೆಯು ಪುತ್ತೂರಿನ ಎಳ್ಮುಡಿಯಲ್ಲಿರುವ ಸಂಘದ ಕಚೇರಿಯಲ್ಲಿ ಸಂಘದ ಅಧ್ಯಕ್ಷ ಅಶೋಕ್ ಕಿನಿಲ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಂದರ್ಭ ಸಂಘದ ಹಿರಿಯ ಸದಸ್ಯ ವಾಟೆ ಮಹಾಲಿಂಗ ಭಟ್ ಅವರನ್ನು ಗೌರವಿಸಲಾಯಿತು.ಸಂಘದ ನಿಕಟಪೂರ್ವ ಅದ್ಯಕ್ಷ ಮಂಚಿ ಶ್ರೀನಿವಾಸ ಆಚಾರ್ ಅಭಿನಂದಿಸಿ ಮಾತನಾಡಿ, ವಾಟೆಯವರಿಂದ ಕಲಿಯುವುದಕ್ಕೆ ಸಾಕಷ್ಟಿದೆ. ಅವರು ಸತತ ಕಲಿಕೆಯಲ್ಲಿ ತೊಡಗಿಕೊಂಡವರು. ಜೀವನವನ್ನು ಅನುಭವಿಸಿದ್ದಾರೆ. ಹೀಗಾಗಿ ಎಲ್ಲರಿಗೂ ಮಾದರಿಯಾಗಿದ್ದಾರೆ ಎಂದರು.
ಗೌರವ ಸ್ವೀಕರಿಸಿ ಮಾತನಾಡಿದ ವಾಟೆ ಮಹಾಲಿಂಗ ಭಟ್,ಕೃಷಿಕರು ಅನುಭವಗಳನ್ನು ಹಂಚಿಕೊಳ್ಳಬೇಕು. ಕೃಷಿ ಯಾವತ್ತೂ ಕೈಬಿಡದು. ಆದರೆ ಕೃಷಿಕರ ನಡುವೆ ಪರಸ್ಪರ ಸಂವಹನ ನಡೆಯಬೇಕು. ಹೀಗಾದರೆ ಕೃಷಿ ಇನ್ನಷ್ಟು ಗಟ್ಟಿಯಾಗಲು ಸಾಧ್ಯ. ಅನುಭವ ಉಳ್ಳವರು ಕೃಷಿ ಸಂಘಟನೆಗಳಲ್ಲಿ ಹೆಚ್ಚು ತೊಡಗಿಸಿಕೊಳ್ಳುವಂತಾಗಬೇಕು ಎಂದರು.
ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಉಪಾದ್ಯಕ್ಷ ಎಂ ಜಿ ಸತ್ಯನಾರಾಯಣ, ಹಿರಿಯ ಸದಸ್ಯ ದಯಾನಂದ ಕೋಟೆ ಮಾತನಾಡಿದರು. ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಅಧ್ಯಕ್ಷ ಅಶೋಕ್ ಕಿನಿಲ, ಕಾರ್ಯದರ್ಶಿ ಮಹೇಶ್ ಪುಚ್ಚಪ್ಪಾಡಿ ಉಪಸ್ಥಿತರಿದ್ದರು.
ಅಧ್ಯಕ್ಷ ಅಶೋಕ್ ಕಿನಿಲ ಸ್ವಾಗತಿಸಿ ಕಾರ್ಯದರ್ಶಿ ಮಹೇಶ್ ಪುಚ್ಚಪ್ಪಾಡಿ ವಂದಿಸಿದರು.
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…