ಪುತ್ತೂರು:ಕೃಷಿಯು ನಂಬಿದವರನ್ನು ಕೈಬಿಡದು. ನಾವೂ ಕೃಷಿಯನ್ನು ಕೈಬಿಡಬಾರದು. ಕಳೆದ ಹಲವು ವರ್ಷಗಳ ಕೃಷಿ ಬದುಕಿನಲ್ಲಿ ಸಂತೋಷವಿದೆ. ಸಾರ್ಥಕ ಬದುಕು ಕಾಣಲು ಸಾಧ್ಯವಾಗಿದೆ ಎಂದು ಕೃಷಿಕ, ನಿವೃತ್ತ ಶಿಕ್ಷಕ ವಾಟೆ ಮಹಾಲಿಂಗ ಭಟ್ ಹೇಳಿದರು.
ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಸಭೆಯು ಪುತ್ತೂರಿನ ಎಳ್ಮುಡಿಯಲ್ಲಿರುವ ಸಂಘದ ಕಚೇರಿಯಲ್ಲಿ ಸಂಘದ ಅಧ್ಯಕ್ಷ ಅಶೋಕ್ ಕಿನಿಲ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಂದರ್ಭ ಸಂಘದ ಹಿರಿಯ ಸದಸ್ಯ ವಾಟೆ ಮಹಾಲಿಂಗ ಭಟ್ ಅವರನ್ನು ಗೌರವಿಸಲಾಯಿತು.ಸಂಘದ ನಿಕಟಪೂರ್ವ ಅದ್ಯಕ್ಷ ಮಂಚಿ ಶ್ರೀನಿವಾಸ ಆಚಾರ್ ಅಭಿನಂದಿಸಿ ಮಾತನಾಡಿ, ವಾಟೆಯವರಿಂದ ಕಲಿಯುವುದಕ್ಕೆ ಸಾಕಷ್ಟಿದೆ. ಅವರು ಸತತ ಕಲಿಕೆಯಲ್ಲಿ ತೊಡಗಿಕೊಂಡವರು. ಜೀವನವನ್ನು ಅನುಭವಿಸಿದ್ದಾರೆ. ಹೀಗಾಗಿ ಎಲ್ಲರಿಗೂ ಮಾದರಿಯಾಗಿದ್ದಾರೆ ಎಂದರು.
ಗೌರವ ಸ್ವೀಕರಿಸಿ ಮಾತನಾಡಿದ ವಾಟೆ ಮಹಾಲಿಂಗ ಭಟ್,ಕೃಷಿಕರು ಅನುಭವಗಳನ್ನು ಹಂಚಿಕೊಳ್ಳಬೇಕು. ಕೃಷಿ ಯಾವತ್ತೂ ಕೈಬಿಡದು. ಆದರೆ ಕೃಷಿಕರ ನಡುವೆ ಪರಸ್ಪರ ಸಂವಹನ ನಡೆಯಬೇಕು. ಹೀಗಾದರೆ ಕೃಷಿ ಇನ್ನಷ್ಟು ಗಟ್ಟಿಯಾಗಲು ಸಾಧ್ಯ. ಅನುಭವ ಉಳ್ಳವರು ಕೃಷಿ ಸಂಘಟನೆಗಳಲ್ಲಿ ಹೆಚ್ಚು ತೊಡಗಿಸಿಕೊಳ್ಳುವಂತಾಗಬೇಕು ಎಂದರು.
ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಉಪಾದ್ಯಕ್ಷ ಎಂ ಜಿ ಸತ್ಯನಾರಾಯಣ, ಹಿರಿಯ ಸದಸ್ಯ ದಯಾನಂದ ಕೋಟೆ ಮಾತನಾಡಿದರು. ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಅಧ್ಯಕ್ಷ ಅಶೋಕ್ ಕಿನಿಲ, ಕಾರ್ಯದರ್ಶಿ ಮಹೇಶ್ ಪುಚ್ಚಪ್ಪಾಡಿ ಉಪಸ್ಥಿತರಿದ್ದರು.
ಅಧ್ಯಕ್ಷ ಅಶೋಕ್ ಕಿನಿಲ ಸ್ವಾಗತಿಸಿ ಕಾರ್ಯದರ್ಶಿ ಮಹೇಶ್ ಪುಚ್ಚಪ್ಪಾಡಿ ವಂದಿಸಿದರು.
ಚುನಾವಣಾ ಸಮಯದಲ್ಲಿ ಪರವಾನಿಗೆ ಹೊಂದಿದ ಶಸ್ತ್ರಾಸ್ತ್ರ ಠೇವಣಿ ವಿನಾಯಿತಿ ಕೋರಿ ಸಲ್ಲಿಸಿದ ಅರ್ಜಿಯನ್ನು…
ದೇಸೀ ಗೋವು ಅದರಲ್ಲೂ ಮಲೆನಾಡು ಗಿಡ್ಡ ತಳಿಯ ಹಸು ಉಳಿಯಬೇಕು, ಅದರ ಉಳಿವು…
ದಿನದಿಂದ ದಿನಕ್ಕೆ ತಾಪಮಾನ(Temperature) ಏರುತ್ತಿದೆ. ಬಿಸಿ ಗಾಳಿ(Heat wave) ಬೀಸುತ್ತಿದೆ. ನೀರಿಗೆ ಅಭಾವ(Water…
ವಿಶ್ವ ವಿದ್ಯಾಲಯ ಕಾಲೇಜು, ನೆಲ್ಯಾಡಿಯ ಶಿಕ್ಷಕ-ರಕ್ಷಕ ಸಂಘದ ವಾರ್ಷಿಕ ಮಹಾಸಭೆ ಮತ್ತು ನೂತನ…
ಹೆಚ್ಚಿನ ಪಾಲಕರು(Parents) ಮಕ್ಕಳನ್ನು(Children) ಹೆತ್ತ ನಂತರ ಅವರನ್ನು ಶಿಕ್ಷಣದ ವ್ಯವಸ್ಥೆ(Education system) ಮಾಡುವುದು…
ಅಮೇಥಿ(Amethi) ಮತ್ತು ರಾಯ್ ಬರೇಲಿ(Raebareli) ಉತ್ತರ ಪ್ರದೇಶದ(Uttar Pradesh) ಈ ಎರಡು ಕ್ಷೇತ್ರಗಳು…