ಪುತ್ತೂರು:ಕೃಷಿಯು ನಂಬಿದವರನ್ನು ಕೈಬಿಡದು. ನಾವೂ ಕೃಷಿಯನ್ನು ಕೈಬಿಡಬಾರದು. ಕಳೆದ ಹಲವು ವರ್ಷಗಳ ಕೃಷಿ ಬದುಕಿನಲ್ಲಿ ಸಂತೋಷವಿದೆ. ಸಾರ್ಥಕ ಬದುಕು ಕಾಣಲು ಸಾಧ್ಯವಾಗಿದೆ ಎಂದು ಕೃಷಿಕ, ನಿವೃತ್ತ ಶಿಕ್ಷಕ ವಾಟೆ ಮಹಾಲಿಂಗ ಭಟ್ ಹೇಳಿದರು.
ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಸಭೆಯು ಪುತ್ತೂರಿನ ಎಳ್ಮುಡಿಯಲ್ಲಿರುವ ಸಂಘದ ಕಚೇರಿಯಲ್ಲಿ ಸಂಘದ ಅಧ್ಯಕ್ಷ ಅಶೋಕ್ ಕಿನಿಲ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಂದರ್ಭ ಸಂಘದ ಹಿರಿಯ ಸದಸ್ಯ ವಾಟೆ ಮಹಾಲಿಂಗ ಭಟ್ ಅವರನ್ನು ಗೌರವಿಸಲಾಯಿತು.ಸಂಘದ ನಿಕಟಪೂರ್ವ ಅದ್ಯಕ್ಷ ಮಂಚಿ ಶ್ರೀನಿವಾಸ ಆಚಾರ್ ಅಭಿನಂದಿಸಿ ಮಾತನಾಡಿ, ವಾಟೆಯವರಿಂದ ಕಲಿಯುವುದಕ್ಕೆ ಸಾಕಷ್ಟಿದೆ. ಅವರು ಸತತ ಕಲಿಕೆಯಲ್ಲಿ ತೊಡಗಿಕೊಂಡವರು. ಜೀವನವನ್ನು ಅನುಭವಿಸಿದ್ದಾರೆ. ಹೀಗಾಗಿ ಎಲ್ಲರಿಗೂ ಮಾದರಿಯಾಗಿದ್ದಾರೆ ಎಂದರು.
ಗೌರವ ಸ್ವೀಕರಿಸಿ ಮಾತನಾಡಿದ ವಾಟೆ ಮಹಾಲಿಂಗ ಭಟ್,ಕೃಷಿಕರು ಅನುಭವಗಳನ್ನು ಹಂಚಿಕೊಳ್ಳಬೇಕು. ಕೃಷಿ ಯಾವತ್ತೂ ಕೈಬಿಡದು. ಆದರೆ ಕೃಷಿಕರ ನಡುವೆ ಪರಸ್ಪರ ಸಂವಹನ ನಡೆಯಬೇಕು. ಹೀಗಾದರೆ ಕೃಷಿ ಇನ್ನಷ್ಟು ಗಟ್ಟಿಯಾಗಲು ಸಾಧ್ಯ. ಅನುಭವ ಉಳ್ಳವರು ಕೃಷಿ ಸಂಘಟನೆಗಳಲ್ಲಿ ಹೆಚ್ಚು ತೊಡಗಿಸಿಕೊಳ್ಳುವಂತಾಗಬೇಕು ಎಂದರು.
ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಉಪಾದ್ಯಕ್ಷ ಎಂ ಜಿ ಸತ್ಯನಾರಾಯಣ, ಹಿರಿಯ ಸದಸ್ಯ ದಯಾನಂದ ಕೋಟೆ ಮಾತನಾಡಿದರು. ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಅಧ್ಯಕ್ಷ ಅಶೋಕ್ ಕಿನಿಲ, ಕಾರ್ಯದರ್ಶಿ ಮಹೇಶ್ ಪುಚ್ಚಪ್ಪಾಡಿ ಉಪಸ್ಥಿತರಿದ್ದರು.
ಅಧ್ಯಕ್ಷ ಅಶೋಕ್ ಕಿನಿಲ ಸ್ವಾಗತಿಸಿ ಕಾರ್ಯದರ್ಶಿ ಮಹೇಶ್ ಪುಚ್ಚಪ್ಪಾಡಿ ವಂದಿಸಿದರು.
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…
ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…