ಪುತ್ತೂರು:ಕೃಷಿಯು ನಂಬಿದವರನ್ನು ಕೈಬಿಡದು. ನಾವೂ ಕೃಷಿಯನ್ನು ಕೈಬಿಡಬಾರದು. ಕಳೆದ ಹಲವು ವರ್ಷಗಳ ಕೃಷಿ ಬದುಕಿನಲ್ಲಿ ಸಂತೋಷವಿದೆ. ಸಾರ್ಥಕ ಬದುಕು ಕಾಣಲು ಸಾಧ್ಯವಾಗಿದೆ ಎಂದು ಕೃಷಿಕ, ನಿವೃತ್ತ ಶಿಕ್ಷಕ ವಾಟೆ ಮಹಾಲಿಂಗ ಭಟ್ ಹೇಳಿದರು.
ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಸಭೆಯು ಪುತ್ತೂರಿನ ಎಳ್ಮುಡಿಯಲ್ಲಿರುವ ಸಂಘದ ಕಚೇರಿಯಲ್ಲಿ ಸಂಘದ ಅಧ್ಯಕ್ಷ ಅಶೋಕ್ ಕಿನಿಲ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಂದರ್ಭ ಸಂಘದ ಹಿರಿಯ ಸದಸ್ಯ ವಾಟೆ ಮಹಾಲಿಂಗ ಭಟ್ ಅವರನ್ನು ಗೌರವಿಸಲಾಯಿತು.ಸಂಘದ ನಿಕಟಪೂರ್ವ ಅದ್ಯಕ್ಷ ಮಂಚಿ ಶ್ರೀನಿವಾಸ ಆಚಾರ್ ಅಭಿನಂದಿಸಿ ಮಾತನಾಡಿ, ವಾಟೆಯವರಿಂದ ಕಲಿಯುವುದಕ್ಕೆ ಸಾಕಷ್ಟಿದೆ. ಅವರು ಸತತ ಕಲಿಕೆಯಲ್ಲಿ ತೊಡಗಿಕೊಂಡವರು. ಜೀವನವನ್ನು ಅನುಭವಿಸಿದ್ದಾರೆ. ಹೀಗಾಗಿ ಎಲ್ಲರಿಗೂ ಮಾದರಿಯಾಗಿದ್ದಾರೆ ಎಂದರು.
ಗೌರವ ಸ್ವೀಕರಿಸಿ ಮಾತನಾಡಿದ ವಾಟೆ ಮಹಾಲಿಂಗ ಭಟ್,ಕೃಷಿಕರು ಅನುಭವಗಳನ್ನು ಹಂಚಿಕೊಳ್ಳಬೇಕು. ಕೃಷಿ ಯಾವತ್ತೂ ಕೈಬಿಡದು. ಆದರೆ ಕೃಷಿಕರ ನಡುವೆ ಪರಸ್ಪರ ಸಂವಹನ ನಡೆಯಬೇಕು. ಹೀಗಾದರೆ ಕೃಷಿ ಇನ್ನಷ್ಟು ಗಟ್ಟಿಯಾಗಲು ಸಾಧ್ಯ. ಅನುಭವ ಉಳ್ಳವರು ಕೃಷಿ ಸಂಘಟನೆಗಳಲ್ಲಿ ಹೆಚ್ಚು ತೊಡಗಿಸಿಕೊಳ್ಳುವಂತಾಗಬೇಕು ಎಂದರು.
ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಉಪಾದ್ಯಕ್ಷ ಎಂ ಜಿ ಸತ್ಯನಾರಾಯಣ, ಹಿರಿಯ ಸದಸ್ಯ ದಯಾನಂದ ಕೋಟೆ ಮಾತನಾಡಿದರು. ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಅಧ್ಯಕ್ಷ ಅಶೋಕ್ ಕಿನಿಲ, ಕಾರ್ಯದರ್ಶಿ ಮಹೇಶ್ ಪುಚ್ಚಪ್ಪಾಡಿ ಉಪಸ್ಥಿತರಿದ್ದರು.
ಅಧ್ಯಕ್ಷ ಅಶೋಕ್ ಕಿನಿಲ ಸ್ವಾಗತಿಸಿ ಕಾರ್ಯದರ್ಶಿ ಮಹೇಶ್ ಪುಚ್ಚಪ್ಪಾಡಿ ವಂದಿಸಿದರು.
ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…