ಪುತ್ತೂರು:ಕೃಷಿಯು ನಂಬಿದವರನ್ನು ಕೈಬಿಡದು. ನಾವೂ ಕೃಷಿಯನ್ನು ಕೈಬಿಡಬಾರದು. ಕಳೆದ ಹಲವು ವರ್ಷಗಳ ಕೃಷಿ ಬದುಕಿನಲ್ಲಿ ಸಂತೋಷವಿದೆ. ಸಾರ್ಥಕ ಬದುಕು ಕಾಣಲು ಸಾಧ್ಯವಾಗಿದೆ ಎಂದು ಕೃಷಿಕ, ನಿವೃತ್ತ ಶಿಕ್ಷಕ ವಾಟೆ ಮಹಾಲಿಂಗ ಭಟ್ ಹೇಳಿದರು.
ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಸಭೆಯು ಪುತ್ತೂರಿನ ಎಳ್ಮುಡಿಯಲ್ಲಿರುವ ಸಂಘದ ಕಚೇರಿಯಲ್ಲಿ ಸಂಘದ ಅಧ್ಯಕ್ಷ ಅಶೋಕ್ ಕಿನಿಲ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಂದರ್ಭ ಸಂಘದ ಹಿರಿಯ ಸದಸ್ಯ ವಾಟೆ ಮಹಾಲಿಂಗ ಭಟ್ ಅವರನ್ನು ಗೌರವಿಸಲಾಯಿತು.ಸಂಘದ ನಿಕಟಪೂರ್ವ ಅದ್ಯಕ್ಷ ಮಂಚಿ ಶ್ರೀನಿವಾಸ ಆಚಾರ್ ಅಭಿನಂದಿಸಿ ಮಾತನಾಡಿ, ವಾಟೆಯವರಿಂದ ಕಲಿಯುವುದಕ್ಕೆ ಸಾಕಷ್ಟಿದೆ. ಅವರು ಸತತ ಕಲಿಕೆಯಲ್ಲಿ ತೊಡಗಿಕೊಂಡವರು. ಜೀವನವನ್ನು ಅನುಭವಿಸಿದ್ದಾರೆ. ಹೀಗಾಗಿ ಎಲ್ಲರಿಗೂ ಮಾದರಿಯಾಗಿದ್ದಾರೆ ಎಂದರು.
ಗೌರವ ಸ್ವೀಕರಿಸಿ ಮಾತನಾಡಿದ ವಾಟೆ ಮಹಾಲಿಂಗ ಭಟ್,ಕೃಷಿಕರು ಅನುಭವಗಳನ್ನು ಹಂಚಿಕೊಳ್ಳಬೇಕು. ಕೃಷಿ ಯಾವತ್ತೂ ಕೈಬಿಡದು. ಆದರೆ ಕೃಷಿಕರ ನಡುವೆ ಪರಸ್ಪರ ಸಂವಹನ ನಡೆಯಬೇಕು. ಹೀಗಾದರೆ ಕೃಷಿ ಇನ್ನಷ್ಟು ಗಟ್ಟಿಯಾಗಲು ಸಾಧ್ಯ. ಅನುಭವ ಉಳ್ಳವರು ಕೃಷಿ ಸಂಘಟನೆಗಳಲ್ಲಿ ಹೆಚ್ಚು ತೊಡಗಿಸಿಕೊಳ್ಳುವಂತಾಗಬೇಕು ಎಂದರು.
ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಉಪಾದ್ಯಕ್ಷ ಎಂ ಜಿ ಸತ್ಯನಾರಾಯಣ, ಹಿರಿಯ ಸದಸ್ಯ ದಯಾನಂದ ಕೋಟೆ ಮಾತನಾಡಿದರು. ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಅಧ್ಯಕ್ಷ ಅಶೋಕ್ ಕಿನಿಲ, ಕಾರ್ಯದರ್ಶಿ ಮಹೇಶ್ ಪುಚ್ಚಪ್ಪಾಡಿ ಉಪಸ್ಥಿತರಿದ್ದರು.
ಅಧ್ಯಕ್ಷ ಅಶೋಕ್ ಕಿನಿಲ ಸ್ವಾಗತಿಸಿ ಕಾರ್ಯದರ್ಶಿ ಮಹೇಶ್ ಪುಚ್ಚಪ್ಪಾಡಿ ವಂದಿಸಿದರು.
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…
ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…