Advertisement
ಅನುಕ್ರಮ

ಕೃಷಿ ಮಾತುಕತೆ | 27 ಡಿಗ್ರಿ ಮತ್ತು ತೇವಾಂಶ 85% ಮೇಲೆ ಇದ್ದರೆ ಕೊಳೆರೋಗಕ್ಕೆ ರಹದಾರಿ…..!

Share
ಇದು ಕೃಷಿಕರ ಮಾತುಕತೆ. ಕೃಷಿಕರ ಅನುಭವದ ಚರ್ಚೆಗಳು. ಇದು ಯುವ ಕೃಷಿಕರಿಗೆ ಮಾರ್ಗದರ್ಶನ. ವಾತಾವರಣದ ಅಧ್ಯಯನ, ಕೃಷಿ ಬೆಳವಣಿಗೆಗೆ ಇಂತಹ ಹವ್ಯಾಸಗಳು ಅಗತ್ಯವಾಗಿದೆ. ಹೀಗಾಗಿ ಕಲ್ಮಡ್ಕದ ಕೃಷಿಕ ಟಿ ಆರ್‌ ಸುರೇಶ್ಚಂದ್ರ ಅವರ ಅನುಭವದ ಬರಹ ಇಲ್ಲಿ ನೀಡಲಾಗಿದೆ…

ಆಟಿ ಸಂಕ್ರಾಂತಿ, ಮಳೆ  ನಕ್ಷತ್ರ ಪುನರ್ವಸು- ಪುಷ್ಯಗಳ ವೈಭವದ ದಿನಗಳು. ಸಾಧಾರಣ ಮಧ್ಯೆ ಮಳೆಗಾಲದ ದಿನಗಳು. ಅಡಿಕೆ ಬೆಳೆಗಾರನ ವರ್ಷಪೂರ್ತಿ ಶ್ರಮದ ನಿರ್ಣಾಯಕ ಕಾಲಘಟ್ಟ ಇದು.
ಹೌದು. ಕೆಲವೊಂದು ತೋಟಗಳಲ್ಲಿ ಕೊಳೆರೋಗ ತನ್ನ ಹಾಜರಾತಿಯನ್ನು ದಾಖಲಿಸಿದೆ. ಕೊಳೆಗೆ ಪ್ರತಿರೋಧವಾಗಿ ಸಿಂಪಡಿಸಿದ ಔಷಧ ಕಾಲ ಮೀರಿದೆ. ವಾತಾವರಣದ ಮಾಪಕದಲ್ಲಿ ತೇವಾಂಶ ಸದಾ 99 % ತೋರಿಸುತ್ತಿದೆ.
ವಿಷಯಕ್ಕೆ ಬರೋಣವಂತೆ.  ಮೊನ್ನೆ ತಾನೇ  ವಾಟ್ಸಾಪ್ ಬಳಗದ ಕೃಷಿಕ ಮಿತ್ರರು ಉಷ್ಣತೆ 27 ಡಿಗ್ರಿ ಮತ್ತು ತೇವಾಂಶ 85 % ಮೇಲೆ ಇದ್ದರೆ ಕೊಳೆರೋಗಕ್ಕೆ ಸುಲಭ ರಹದಾರಿ ಎಂದು ತಿಳಿಸಿದ್ದರು.
ನಿಟ್ಟಿನಲ್ಲಿ ಗಮನಿಸಿದಾಗ , ಬಾಳಿಲದ  ಪಿಜಿಯಸ್ ಯನ್ ಪ್ರಸಾದ್‌ ಅವರಿಂದ ಪ್ರೇರಿತನಾಗಿ ಮಳೆ ಮಾಪನದ ದಾಖಲಾತಿಗಳನ್ನು ನೋಡಿದಾಗ.ನಮ್ಮಲ್ಲಿ ಸಾಧಾರಣ  ಎಪ್ರಿಲ್ ಮಧ್ಯ  ಭಾಗದಿಂದ, ರಾತ್ರಿ ಕಾಲದಲ್ಲಿ ಉಷ್ಣತೆ 27 ಡಿಗ್ರಿ ಸುತ್ತಲೇ ದಾಖಲಾಗಿದೆ ಹಾಗೇ ತೇವಾಂಶವೂ 85% ಕ್ಕಿಂತ ಮೇಲೆಯೇ ಇತ್ತು ಹಾಗೂ ಜೂನ್ ತಿಂಗಳಾರಂಭದಿಂದ ಇಂದಿನ ತನಕವೂ ಉಷ್ಣಾಂಶ 24 – 26 ಡಿಗ್ರಿಗಳಲ್ಲೂ ,  ತೇವಾಂಶ 90-99% ದಲ್ಲೂ ಇರುವುದನ್ನು ಗಮನಿಸಬೇಕು. ಹಾಗಾದರೆ ಇನ್ನಿನ ದಿನಗಳು ಕೊಳೆರೋಗದ  ಧಾಳಿಯದ್ದಿರಬಹುದೇ ಇರಬಹುದು. ಪ್ರತ್ಯೌಷದ ಕಾಲಕಾಲಕ್ಕೆ ಸಿಂಪರಣೆ ಆಗಬೇಕು. ಮಳೆ ತೆರೆಮರೆಗೆ ಸರಿದಾಗ ಕಾರ್ಮಿಕರನ್ನು ಒಗ್ಗೂಡಿಸಿ ಸೇನಾಪತಿಯಂತೆ ಕಣಕ್ಕಿಳಿಯಬೇಕು. ನನ್ನ ಮಾತಾಮಹರ ಮಾತು ನೆನಪಿಗೆ ಬರುತ್ತದೆ. “ಕೃಷಿಕರಿಗೆ ಮಳೆಗಾಲ ಗಡಿಕಾಯುವ ಸೈನಿಕರಂತೆ ಸದಾ ಎಚ್ಚರದಲ್ಲಿರಬೇಕಾದ ಕಾಲ” ಎಂದು.
ಈ ಎಲ್ಲಾ ಎಚ್ಚರಿಕೆ,ಗಮನಿಸುವಿಕೆಗಳೊಂದಿಗೆ  ತೋಟದ ನೈರ್ಮಲ್ಯ, ಮಣ್ಣಿನ ರಸಸಾರ, ತೋಟದ ಅಂದರೆ ಮರದಲ್ಲಿರುವ ಹೀರಿಕೊಂಡ ಅತೀ ಸಾರಜನಕ, ಬಸಿಗಾಲುವೆ ಅವ್ಯವಸ್ಥೆ ಮುಂತಾದವು ಈ ಕೊಳೆರೋಗಕ್ಕೆ ಮುಕ್ತಾವಕಾಶವನ್ನು ಕಲ್ಪಿಸುತ್ತದೆ. ತೋಟದಲ್ಲಿ ಅತಿಯಾದ ಸಸ್ಯ ಸಾಂದ್ರತೆ, ಅತಿಯಾದ ಹುಲ್ಲು ಕಾಡುಗಳು, ಕೊಳೆತ ಬಾಳೆ ಸೋಗೆಗಳು, ಕೊಳೆತ ಕೊಕ್ಕೋ ಇತ್ಯಾದಿಗಳೂ ತೋಟದಲ್ಲಿ ರೊಗಕಾರಕ ಸೂಕ್ಷ್ಮಜೀವಿಗಳ ಅಭಿವೃದ್ಧಿ ಗೆ ಸಹಕಾರಿಯಾಗಬಲ್ಲದು. ಪ್ರಾಕೃತಿಕ ಏರುಪೇರುಗಳು ನಮ್ಮ ಕೈಯಲ್ಲಿಲ್ಲ. ಆದರೆ ತೋಟದ ನೈರ್ಮಾಲ್ಯ ನಿರ್ವಹಣೆ, ಪೋಷಕಾಂಶಗಳ ನಿರ್ವಹಣೆ ಮುಂತಾದವುಗಳು ನಮ್ಮ ಕೈಯಲ್ಲೇ ನಿರ್ವಹಿಸಲು ಸಾಧ್ಯವಿರುವ ಕಾರಣ ಈ ಬಗ್ಗೆ ಮಳೆಗಾಲ ಪ್ರಾರಂಭದಲ್ಲೇ ಗಮನಹರಿಸಿದರೆ ರೋಗಕಾರಕ ಸೂಕ್ಷ್ಮಜೀವಿಗಳ ಪ್ರವೇಶಕ್ಕೆ ಒಂದಷ್ಟು ತಡೆಯೊಡ್ಡಬಹುದು ಎಂಬುದು ನನ್ನ ಅಭಿಪ್ರಾಯ.
1. ಮೇ ತಿಂಗಳ ಕೊನೆಗೆ ಸಾರಜನಕಯುಕ್ತ ಗೊಬ್ಬರ ಕೊಡಬಾರದು.
2. ತೋಟದಲ್ಲಿ ಬಸಿಗಾಲುವೆಗಳ ಸರಿಯಾದ ನಿರ್ವಹಣೆ ಮಾಡಲೇಬೇಕು.
3.ಹುಲ್ಲು ಕಾಡು ಸಸ್ಯಗಳನ್ನು ತೆಗೆದು ಚೊಕ್ಕಟ ಮಾಡಬೇಕು.
4. ಬಾಳೆ ಬಿದ್ದು ಕೊಳೆಯುತ್ತಿರುವುದನ್ನು ತೋಟದ ಬದಿಯ ತೆಂಗಿನ ಮರದ ಬುಡಕ್ಕೆ ಹಾಕಬೇಕು.
5.ಜೂನ್ ತಿಂಗಳ ಪ್ರಾರಂಭದಲ್ಲಿ ನೂರು ಗ್ರಾಮ್ ನಷ್ಟು ಪೊಟೇಷ್ ಪ್ರತೀ ಮರಕ್ಕೆ ಹಾಕಬೇಕು.
6.ಅತೀ ಮುಖ್ಯವಾಗಿ ದಿನಾ ಒಂದು ಸುತ್ತು ನಮ್ಮ ತೋಟಕ್ಕೆ ನಾವೇ ಹೋಗಿ ತೋಟದ ಆರೋಗ್ಯ, ಆಗುಹೋಗುಗಳನ್ನು ಗಮನಿಸಬೇಕು.
7.ಹಿಂದಿನ ವರ್ಷ ತುಂಬಾ ಕೊಳೆರೋಗವಿದ್ದರೆ ಯಾವುದೇ ಉದಾಸೀನ ಮಾಡದೇ ಎಪ್ರಿಲ್ ಮತ್ತು ಮೇ ತಿಂಗಳಲ್ಲಿ ಬೋರ್ಡೋ ಸಿಂಪಡಿಸಲೇಬೇಕು.
8. ಚಿಪ್ಪು ಸುಣ್ಣವನ್ನೇ ಉಪಯೋಗಿಸಬೇಕು.ಸುಲಭಕ್ಕಾಗಿ ಉಪಯೋಗಿಸುವ ಹುಡಿಸುಣ್ಣದಲ್ಲಿ ಅಂಟುವ ಗುಣವಿಲ್ಲ.
# ಟಿ ಆರ್ ಸುರೇಶ್ಚಂದ್ರ ತೊಟ್ಟೆತ್ತೋಡಿ.
(ಈಗಾಗಲೇ ಬಾಳಿಲದ ಪಿಜಿಯಸ್ ಯನ್ ಪ್ರಸಾದ್‌ ಅವರಿಂದ ಪ್ರೇರಿತರಾಗಿ ಅನೇಕರು ಮಳೆ ಮಾಪಕ ಅಳವಡಿಸಿದ್ದಾರೆ. ಹಲವಾರು ಕೃಷಿಕರು ಇದನ್ನು ಹವ್ಯಾಸವಾಗಿ ಹಾಗೂ ಅಧ್ಯಯನಕ್ಕಾಗಿ ಬಳಸಿಕೊಂಡಿದ್ದಾರೆ. ಪ್ರತೀ ಗ್ರಾಮದಲ್ಲಿ ಕನಿಷ್ಠ ಇಬ್ಬರು ಕೃಷಿಕರು ಮಳೆ ದಾಖಲು ಮಾಡಿದರೆ ಉತ್ತಮ ಮಾಹಿತಿ, ದಾಖಲೆಯಾಗಬಹುದು. ಇದಕ್ಕಾಗಿಯೇ ಗುಂಪುಗಳನ್ನು ರಚಿಸಲಾಗಿದೆ. )
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಟಿ ಆರ್ ಸುರೇಶ್ಚಂದ್ರ ತೊಟ್ಟೆತ್ತೋಡಿ

‌ ಪ್ರಗತಿಪರ ಕೃಷಿಕ, ಬರಹಗಾರ

Published by
ಟಿ ಆರ್ ಸುರೇಶ್ಚಂದ್ರ ತೊಟ್ಟೆತ್ತೋಡಿ

Recent Posts

ಭಾರತ ಕೃಷಿಯಲ್ಲಿ ಭರ್ಜರಿ ದಾಖಲೆ : ಆಹಾರ ಉತ್ಪಾದನೆ 3765 ಮಿಲಿಯನ್ ಟನ್!

2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…

9 hours ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಮೇ 30ರಂದು ಕಸ್ಟಮರ್ ಸಪೋರ್ಟ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ನೇರ ಸಂದರ್ಶನ

ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…

9 hours ago

ಬ್ಲಿಂಕಿಟ್‌ನಲ್ಲಿ ಉದ್ಯೋಗಾವಕಾಶ : ಜೂನ್ 1ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…

9 hours ago

ಬಕ್ರೀದ್‌ಗೂ ಮುನ್ನ ದೇಶದಲ್ಲಿ ಹೊಸ ಚರ್ಚೆ | “ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ” — ಮುಸ್ಲಿಂ ಸಂಘಟನೆಗಳ ಬೇಡಿಕೆ

ಬಕ್ರೀದ್‌ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…

15 hours ago

ಹವಾಮಾನ ಬದಲಾವಣೆ ಈಗ ಭವಿಷ್ಯದ ಸಮಸ್ಯೆಯಲ್ಲ- ಸ್ಥಳೀಯ ಮಟ್ಟದಲ್ಲೇ ಆರಂಭವಾಗುತ್ತಿದೆ ಕ್ರಿಯಾ ಯೋಜನೆ

ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…

17 hours ago

ಹವಾಮಾನ ವರದಿ | 27-05-2026 | ಮಳೆಗಾಲ ಆರಂಭ ಯಾವಾಗ..? ಇಂದು ಎಲ್ಲೆಲ್ಲಾ ಮಳೆ ಇದೆ…?

ರಾಜ್ಯದ ಹಲವೆಡೆ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ…

18 hours ago