Advertisement
MIRROR FOCUS

ಕೃಷ್ಣಜನ್ಮಾಷ್ಟಮಿ ಶುಭಾಶಯ | ಕೃಷ್ಣನೆಂದರೆ ಪ್ರೀತಿ…..

Share

ಅದೊಂದು ವಿಶೇಷ ಸಮಾರಂಭ.  ರಂಗು ರಂಗಿನ ಕಾರ್ಯಕ್ರಮ. ನಗುವಿನಲೆಯಲ್ಲಿ  ತುಂಬಿರುವ  ವಾತಾವರಣ . ಪುಟ್ಟ ಪುಟ್ಟ  ಕಂದಮ್ಮಗಳು.    ಬಣ್ಣ ಬಣ್ಣದ ಬಟ್ಟೆಗಳನ್ನು ಹಾಕಿ ಚೆಂದಕೆ ಆಭರಣಗಳನ್ನು ಹಾಕಿ ಅಚೀಚೆ ತಿರುಗುತ್ತಾ , ಮಕ್ಕಳ ಹಿಂದೆ ಅವರ ಅಮ್ಮಂದಿರೂ  ಹೆಜ್ಜೆ ಹಾಕುತ್ತಾ  ಪರಿಸರಕ್ಕೊಂದು ವಿಶೇಷ ಕಳೆ ಬಂದಂತಾಗಿದೆ. ಏನು  ಸ್ಕೂಲ್ ಡೇ ವರ್ಣನೆ ಅಂದುಕೊಂಡಿರಾ

? ಅಲ್ಲಪ್ಪಾ ಅಲ್ಲ. ಇದು ಶ್ರೀ ಕೃಷ್ಣ ಜನ್ಮಾಷ್ಟಮಿಯ ಸಂದರ್ಭದ ದೃಶ್ಯ.  ಅಲ್ಲಿ ಮಕ್ಕಳ ಕಲರವವೇ ತುಂಬಿತ್ತು. ತೊದಲು ನುಡಿಗೆ ಸಣ್ಣನೆಯ ದನಿಯ ಸಂಗೀತ  ಹೊಸ ಲೋಕವನ್ನೇ ಸೃಷ್ಟಿ ಸಿತ್ತು. ಮಕ್ಕಳ ಚಟುವಟಿಕೆಗೆ, ಹೆತ್ತವರ ಸೃಜನಶೀಲತೆಗೊಂದು ವೇದಿಕೆ ಸಿದ್ದವಾಗಿತ್ತು.  ಮಕ್ಕಳೆಂದರೆ  ದೇವರೇ ಅಲ್ಲವೆ ? ಮುಗ್ಧ ಮನಸಿನ ಕಂದಮ್ಮಗಳು. ಅವುಗಳ ಜಗತ್ತೇ ಸುಂದರ. ಅಲ್ಕಿ ಕಳೆಯುವ ಕ್ಷಣಗಳೇ ಅಮೂಲ್ಯ.
ಕೃಷ್ಣ ನೆಂದರೆ ಮನಸಿಗೆ ಹತ್ತಿರದವನು. ಗಣೇಶನನ್ನು ಎಷ್ಟು ಆರಾಧಿಸುತ್ತೇವೋ ಕೃಷ್ಣ ನನ್ನು ಅಷ್ಟೇ ಪ್ರೀತಿಸುತ್ತೇವೆ.  ನಾವು ನ ಎಳೆಯುತ್ತಾ ಕೃಷ್ಣ ನ ಬಾಲ್ಯ ಲೀಲೆಗಳನ್ನು ಕೇಳುತ್ತಾ ಬೆಳೆದುದು. ಕೃಷ್ಣ ನ ಬಗ್ಗೆ   ಎಷ್ಟು ಹೇಳಿದರೂ ಮುಗಿಯದ ಕಥೆಗಳು . ಒಂದಕ್ಕಿಂತ ಒಂದು ವಿಭಿನ್ನ ಸಾಹಸಗಳು. ಹುಟ್ಟಿದ ದಿನದಿಂದಲೇ ಅವನ ಸಾಹಸ ಯಾತ್ರೆಗಳು ಆರಂಭ. ಸೆರೆ ಮನೆಯಿಂದ  ಗೋಕುಲದ  ಪಯಣವೂ ರೋಚಕವೇ. ಇನ್ನೂ ಗೋಕುಲದಲ್ಲಿ ಶ್ರೀ ಕೃಷ್ಣ ನ ಬೆಳವಣಿಗೆಯ ಪ್ರತಿ ಹಂತವೂ ಒಂದು ಕಥೆಯೇ. ಕೃಷ್ಣ ನೆಂದು ಒಡೆಯನಾಗಿಯೇ  ಇರಲಿಲ್ಲ. ಸಾಮಾನ್ಯ ರಲ್ಲಿ ಸಾಮಾನ್ಯ ನಾಗಿ ಇದ್ದವ. ಎಲ್ಲಿ ಬೇಕೋ ಅಲ್ಲಿ ತನ್ನ ಶಕ್ತಿಯ ಉಪಯೋಗ ಮಾಡುತ್ತಿದ್ದವ. ಎಲ್ಲಾ ಮಕ್ಕಳಂತೆ   ತುಂಟ. ಇಂದೂ ಮಕ್ಕಳು ಜಾಸ್ತಿ ಉಪದ್ರ ಮಾಡಿದರೂ  ಹೇಳುವುದು ಕೃಷ್ಣನ ನ್ನೇ. ಇವ ನೋಡು ಕೃಷ್ಣನಂತೆ  ತುಂಟನೆಂದು. ಕೃಷ್ಣ  ಎಲ್ಲರಿಗೂ ಇಷ್ಟವಾಗುವಂತವ. ಅವನು  ದೇವರಾದರೂ ನಮ್ಮ ನಿಮ್ಮೆಲ್ಲರಂತೆ.  ಸ್ವಯಂ ಶಕ್ತಿ ವಂತನಾದರೂ ಎಲ್ಲೂ ಅನಗತ್ಯ ಪ್ರದರ್ಶನ ಮಾಡದೆ  ಅಗತ್ಯವಿದ್ದಾಗ ಪ್ರಯೋಗಿಸುವವ. ಯಾರು ಸಂಪೂರ್ಣ ಆತನಿಗೆ ಶರಣಾಗುತ್ತರೋ ಅವರನ್ನು ಸದಾ ಕಾಯುವವ.  ಕಷ್ಟಗಳು ಬಂದಾಗ , ನೆನೆದವರ ಮನದಲ್ಲಿ ನಾ ಬಂದೆ ಎಂದು ಅಲ್ಲಿರುವನಾತ.
ಬದುಕಿನ  ದುಃಖದ ಕ್ಷಣದಲ್ಲಿ ಎಲ್ಲರನ್ನು ನೆನಪಿಸಿ ಕೊಳ್ಳುತ್ತೇವೆ. ಆದರೆ ಖುಷಿಯಲ್ಲಿದ್ದಾಗಲೂ ನೆನಪಾಗುವವರು, ಮನಸ್ಸಿಗೆ  ಹತ್ತಿರದವರು. ಕೃಷ್ಣ ಕಷ್ಟದಲ್ಲೂ, ಖುಷಿಯಲ್ಲೂ  ನೆನಪಾಗುವವ. ಅವನ ಹುಟ್ಟು ಹಬ್ಬವೆಂದರೆ ಸಂಭ್ರಮವಲ್ಲವೆ?  ತಿಂಡಿಗಳೆಂದರೆ  ,ಅದರಲ್ಲೂ ಸಿಹಿಯೆಂದರೆ ಬಲು ಇಷ್ಟ. ಕೃಷ್ಣಾಷ್ಟಮಿಯಂದು  ತರತರದ ಉಂಡೆಗಳು , ಚಕ್ಕುಲಿಗಳು, ಉದ್ದಿನ ಕಡುಬು, ಪಾಯಸ , ರಸಾಯನ , ಹಾಲು, ಬೆಣ್ಣೆ , ಮೊಸರು ಹೀಗೆ ಬಗೆಬಗೆಯ ನೈವೇದ್ಯವನ್ನು ಸಮರ್ಪಿಸುವುದು  ಮೆಚ್ಚಿನ ಕೆಲಸ.  ಬಹಳ ನಿರೀಕ್ಷಿಸಿ ಆಚರಿಸುವ ತಿಂಡಿಗಳ ಹಬ್ಬವೇ ಅಷ್ಟಮಿ.
ಎಲ್ಲರಿಗೂ ಹಬ್ಬದ ಶುಭಾಶಯ ಗಳು.
#ಅಶ್ವಿನಿ ಮೂರ್ತಿ ಅಯ್ಯನಕಟ್ಟೆ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಮೂರು ವರ್ಷಗಳಲ್ಲಿ 27% ಏರಿದ ಅಡಿಕೆ ಉತ್ಪಾದನಾ ವೆಚ್ಚ – ರೈತರಿಗೆ ಲಾಭ ಸಿಗಬೇಕಾದರೆ ಕನಿಷ್ಠ ಬೆಲೆ ಎಷ್ಟು ಇರಬೇಕು?

2023ರಿಂದ 2026ರವರೆಗೆ ಅಡಿಕೆ ಉತ್ಪಾದನಾ ವೆಚ್ಚ ಸುಮಾರು 27% ಏರಿಕೆಯಾಗಿದೆ. ಈ ಲೆಕ್ಕಾಚಾರದ…

3 hours ago

ಎಲ್ ನೀನೋ, ಲಾ ನೀನಾ ಮತ್ತು ಮಳೆ ಅನಿಶ್ಚಿತತೆ – ಮುಂದಿನ ಪೀಳಿಗೆಗಾಗಿ ಮಳೆನೀರು ಉಳಿಸುವುದು ಈಗಲೇ ಅನಿವಾರ್ಯ..!

ಎಲ್ ನೀನೋ ಮತ್ತು ಲಾ ನೀನಾ ಪ್ರಭಾವದಿಂದ ಮಳೆಯ ಮಾದರಿಯಲ್ಲಿ ಅನಿಶ್ಚಿತತೆ ಹೆಚ್ಚಾಗುತ್ತಿದೆ.…

5 hours ago

ರಸ್ತೆ ಬದಿ ತ್ಯಾಜ್ಯ ಎಸೆದರೆ ಎಚ್ಚರ – ದಂಡ ಖಚಿತ | ಬೆಂಗಮಲೆಯಲ್ಲಿ ತ್ಯಾಜ್ಯ ಎಸೆದವರಿಗೆ ₹5,000 ದಂಡ

ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಂಗಮಲೆಯಲ್ಲಿ ತ್ಯಾಜ್ಯ ಎಸೆದ ಸುಳ್ಯ ನಿವಾಸಿಗೆ ₹5,000…

5 hours ago

ಕೇಂದ್ರ ಕೃಷಿ ಸಚಿವರನ್ನು ಭೇಟಿಯಾದ ಕ್ಯಾಂಪ್ಕೋ ನಿಯೋಗ – ಅಡಿಕೆ ಹಾನಿಕಾರಕ ಕುರಿತ ಸಂಶೋಧನೆ, ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಚರ್ಚೆ

ಅಡಿಕೆಯ ಆರೋಗ್ಯ ಸುರಕ್ಷತೆ ಮತ್ತು ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಕ್ಯಾಂಪ್ಕೋ ನಿಯೋಗವು…

11 hours ago

ಹವಾಮಾನ ವರದಿ | 10-06-2026 | ಕರ್ನಾಟಕದಲ್ಲಿ ಮುಂಗಾರು ದುರ್ಬಲ – ಮುಂದಿನ 10 ದಿನ ಭಾರೀ ಮಳೆ ಸಾಧ್ಯತೆ ಕಡಿಮೆ, ಅಲ್ಲಲ್ಲಿ ಮಾತ್ರ ಮಳೆ

ರಾಜ್ಯದಲ್ಲಿ ಮುಂಗಾರು ದುರ್ಬಲಗೊಂಡಿದ್ದು ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಸಾಧ್ಯತೆ ಕಡಿಮೆ…

11 hours ago

ರಬ್ಬರ್ ಬೆಲೆ ಇತಿಹಾಸದಲ್ಲೇ ದಾಖಲೆ- ಕೆ.ಜಿಗೆ ₹263 ತಲುಪಿದ ರಬ್ಬರ್ ಧಾರಣೆ..!

ನೈಸರ್ಗಿಕ ರಬ್ಬರ್ ಬೆಲೆ ಪ್ರತಿ ಕೆ.ಜಿಗೆ ₹263 ತಲುಪಿ ಹೊಸ ದಾಖಲೆ ನಿರ್ಮಿಸಿದೆ.…

14 hours ago