ಸುಳ್ಯ: ದ.ಕ ಜಿಲ್ಲೆ ಹಾಗೂ ಕೊಡಗು ಜಿಲ್ಲೆಯ ಭಾಗದಲ್ಲಿ ಕೆಂಪುಕಲ್ಲು ಕೋರೆಯನ್ನು ನಡೆಸಲಾಗುತ್ತಿದ್ದು ಇದು ಅನಧಿಕೃತವಾಗಿದ್ದರು ಇದರ ಅವಶ್ಯಕತೆ ಸಾರ್ವಜನಿಕರಿಗೆ ಬಹಳಷ್ಟು ಇರುವುದರಿಂದ ಈ ಎಲ್ಲಾ ವಿಷಯವನ್ನು ಪರಿಗಣಿಸಿ ಈಗ ಇರುವ ಕಾನೂನನ್ನು ಸರಳೀಕರಣ ಮಾಡಿ ಆಯಾ ಪಂಚಾಯತ್ ಮಟ್ಟದಲ್ಲಿ ಪರವಾನಿಗೆ ಕೊಡುವ ವ್ಯವಸ್ಥೆ ಮಾಡಬೇಕು ಎಂದು ಮುಖ್ಯಮಂತ್ರಿಗಳಿಗೆ ಹಾಗೂ ಗಣಿ ಮತ್ತು ಭೂವಿಜ್ಞಾನ ಸಚಿವರಿಗೆ ಮನವಿ ಮಾಡಲಾಯಿತು.
ಹೊಸ ನಿಯಮವನ್ನು ಮಾಡಿ ಸ್ಥಳೀಯವಾಗಿ ಉದ್ಯೋಗ ಸೃಷ್ಟಿಗೆ ಹಾಗೂ ಪಂಚಾಯತ್ ಗೆ ಆದಾಯ ಬರುವ ನಿಟ್ಟಿನಲ್ಲಿ ಕಾನೂನು ರೂಪಿಸಿ ಅನುಷ್ಠಾನ ಗೊಳಿಸಬೇಕೆಂದು ಮನವಿಯಲ್ಲಿ ತಿಳಿಸಲಾಗಿದೆ. ಬಂದರು ಮತ್ತು ಮೀನುಗಾರಿಕೆ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಇವರ ಮುಖಾಂತರ ಮನವಿ ಪತ್ರವನ್ನು ನೀಡಲಾಯಿತು.
ಈ ಸಂದರ್ಭದಲ್ಲಿ ಕೆಂಪು ಕಲ್ಲಿನ ಚಾಲಕ ಮತ್ತು ಮಾಲಕರಾದ ವಿಜಯಕುಮಾರ್ ನಿಡ್ಯಮಲೆ , ನವೀನ್ ರೈ ಮೇನಾಲ, ಪ್ರಕಾಶ್ ಗೌಡ ಅಡ್ಕಾರ್ ಮತ್ತು ಕಿಟ್ಟಣ್ಣ ರೈ ಮೇನಾಲ ಉಪಸ್ಥಿತರಿದ್ದರು.
ಮುಂಗಾರು ಮತ್ತಷ್ಟು ದುರ್ಬಲಗೊಳ್ಳತ್ತಿದ್ದು, ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಆಗಸ್ಟ್ ತಿಂಗಳಲ್ಲಿ…
ದ ರೂರಲ್ ಮಿರರ್.ಕಾಂ ನಲ್ಲಿ "ಹೊಸರುಚಿ" ಯ ಮೂಲಕ ಹಲಸು ಅಡುಗೆಯ ಮೂಲಕ…
ತುಳು ಸಾಹಿತ್ಯ ಅಕಾಡೆಮಿ ಹಾಗೂ ಅಖಿಲ ಭಾರತ ಮುಂಡಾಲ ಯುವ ವೇದಿಕೆಯ ವತಿಯಿಂದ…
ವಿಶ್ವದಲ್ಲಿ ಅಡಿಕೆ ಉತ್ಪಾದನೆ ಆಗುವ ಎಲ್ಲಾ ರಾಷ್ಟ್ರಗಳಲ್ಲಿ ಅದರ ಬಳಕೆಯೂ ಆಗುತ್ತಿದೆ.ಇದರೊಂದಿಗೆ ಈ…
ಪ್ಲಾಸ್ಟಿಕ್ ಮಾಲಿನ್ಯವು ಪರಿಸರ ವಿನಾಶದ ಅಂಶಗಳಲ್ಲಿ ಒಂದಾಗಿದೆ. ನಮ್ಮ ಸಾಗರಗಳು ಮತ್ತು ಕರಾವಳಿಗಳಲ್ಲಿ…
ವಿಯೆಟ್ನಾಂ 2030 ರ ವೇಳೆಗೆ ಕೃಷಿಯಲ್ಲಿ ಹೊರಸೂಸುವ ಮೀಥೇನ್ ಅನ್ನು 30% ರಷ್ಟು…