ಸುಳ್ಯ: ದ.ಕ ಜಿಲ್ಲೆ ಹಾಗೂ ಕೊಡಗು ಜಿಲ್ಲೆಯ ಭಾಗದಲ್ಲಿ ಕೆಂಪುಕಲ್ಲು ಕೋರೆಯನ್ನು ನಡೆಸಲಾಗುತ್ತಿದ್ದು ಇದು ಅನಧಿಕೃತವಾಗಿದ್ದರು ಇದರ ಅವಶ್ಯಕತೆ ಸಾರ್ವಜನಿಕರಿಗೆ ಬಹಳಷ್ಟು ಇರುವುದರಿಂದ ಈ ಎಲ್ಲಾ ವಿಷಯವನ್ನು ಪರಿಗಣಿಸಿ ಈಗ ಇರುವ ಕಾನೂನನ್ನು ಸರಳೀಕರಣ ಮಾಡಿ ಆಯಾ ಪಂಚಾಯತ್ ಮಟ್ಟದಲ್ಲಿ ಪರವಾನಿಗೆ ಕೊಡುವ ವ್ಯವಸ್ಥೆ ಮಾಡಬೇಕು ಎಂದು ಮುಖ್ಯಮಂತ್ರಿಗಳಿಗೆ ಹಾಗೂ ಗಣಿ ಮತ್ತು ಭೂವಿಜ್ಞಾನ ಸಚಿವರಿಗೆ ಮನವಿ ಮಾಡಲಾಯಿತು.
ಹೊಸ ನಿಯಮವನ್ನು ಮಾಡಿ ಸ್ಥಳೀಯವಾಗಿ ಉದ್ಯೋಗ ಸೃಷ್ಟಿಗೆ ಹಾಗೂ ಪಂಚಾಯತ್ ಗೆ ಆದಾಯ ಬರುವ ನಿಟ್ಟಿನಲ್ಲಿ ಕಾನೂನು ರೂಪಿಸಿ ಅನುಷ್ಠಾನ ಗೊಳಿಸಬೇಕೆಂದು ಮನವಿಯಲ್ಲಿ ತಿಳಿಸಲಾಗಿದೆ. ಬಂದರು ಮತ್ತು ಮೀನುಗಾರಿಕೆ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಇವರ ಮುಖಾಂತರ ಮನವಿ ಪತ್ರವನ್ನು ನೀಡಲಾಯಿತು.
ಈ ಸಂದರ್ಭದಲ್ಲಿ ಕೆಂಪು ಕಲ್ಲಿನ ಚಾಲಕ ಮತ್ತು ಮಾಲಕರಾದ ವಿಜಯಕುಮಾರ್ ನಿಡ್ಯಮಲೆ , ನವೀನ್ ರೈ ಮೇನಾಲ, ಪ್ರಕಾಶ್ ಗೌಡ ಅಡ್ಕಾರ್ ಮತ್ತು ಕಿಟ್ಟಣ್ಣ ರೈ ಮೇನಾಲ ಉಪಸ್ಥಿತರಿದ್ದರು.
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…