ಸುಳ್ಯ: ದ.ಕ ಜಿಲ್ಲೆ ಹಾಗೂ ಕೊಡಗು ಜಿಲ್ಲೆಯ ಭಾಗದಲ್ಲಿ ಕೆಂಪುಕಲ್ಲು ಕೋರೆಯನ್ನು ನಡೆಸಲಾಗುತ್ತಿದ್ದು ಇದು ಅನಧಿಕೃತವಾಗಿದ್ದರು ಇದರ ಅವಶ್ಯಕತೆ ಸಾರ್ವಜನಿಕರಿಗೆ ಬಹಳಷ್ಟು ಇರುವುದರಿಂದ ಈ ಎಲ್ಲಾ ವಿಷಯವನ್ನು ಪರಿಗಣಿಸಿ ಈಗ ಇರುವ ಕಾನೂನನ್ನು ಸರಳೀಕರಣ ಮಾಡಿ ಆಯಾ ಪಂಚಾಯತ್ ಮಟ್ಟದಲ್ಲಿ ಪರವಾನಿಗೆ ಕೊಡುವ ವ್ಯವಸ್ಥೆ ಮಾಡಬೇಕು ಎಂದು ಮುಖ್ಯಮಂತ್ರಿಗಳಿಗೆ ಹಾಗೂ ಗಣಿ ಮತ್ತು ಭೂವಿಜ್ಞಾನ ಸಚಿವರಿಗೆ ಮನವಿ ಮಾಡಲಾಯಿತು.
ಹೊಸ ನಿಯಮವನ್ನು ಮಾಡಿ ಸ್ಥಳೀಯವಾಗಿ ಉದ್ಯೋಗ ಸೃಷ್ಟಿಗೆ ಹಾಗೂ ಪಂಚಾಯತ್ ಗೆ ಆದಾಯ ಬರುವ ನಿಟ್ಟಿನಲ್ಲಿ ಕಾನೂನು ರೂಪಿಸಿ ಅನುಷ್ಠಾನ ಗೊಳಿಸಬೇಕೆಂದು ಮನವಿಯಲ್ಲಿ ತಿಳಿಸಲಾಗಿದೆ. ಬಂದರು ಮತ್ತು ಮೀನುಗಾರಿಕೆ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಇವರ ಮುಖಾಂತರ ಮನವಿ ಪತ್ರವನ್ನು ನೀಡಲಾಯಿತು.
ಈ ಸಂದರ್ಭದಲ್ಲಿ ಕೆಂಪು ಕಲ್ಲಿನ ಚಾಲಕ ಮತ್ತು ಮಾಲಕರಾದ ವಿಜಯಕುಮಾರ್ ನಿಡ್ಯಮಲೆ , ನವೀನ್ ರೈ ಮೇನಾಲ, ಪ್ರಕಾಶ್ ಗೌಡ ಅಡ್ಕಾರ್ ಮತ್ತು ಕಿಟ್ಟಣ್ಣ ರೈ ಮೇನಾಲ ಉಪಸ್ಥಿತರಿದ್ದರು.
ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಮಾಲಿನ್ಯ ಮಣ್ಣಿನ ಆರೋಗ್ಯ ಮತ್ತು ಬೆಳೆ ಉತ್ಪಾದನೆಗೆ ಭೀತಿ ತಂದಿದೆ.…
ಮೇ 19 ಅಥವಾ 20ರಿಂದ ಕರ್ನಾಟಕದಲ್ಲಿ ಮುಂಗಾರು ಮಾದರಿಯ ಗಾಳಿಯ ಚಲನೆ ಆರಂಭವಾಗುವ…
ಹೆದ್ದಾರಿಯಲ್ಲಿ ಸಂಚರಿಸುವ ಖಾಸಗಿ ಬಸ್ಗಳ ಅತಿವೇಗ ಹಾಗೂ ಅತಿಯಾದ LED ಲೈಟುಗಳ ವಿರುದ್ಧ…
ಭಾರತ–ಆಸ್ಟ್ರೇಲಿಯಾ ಅಗ್ರಿಟೆಕ್ ಸಹಕಾರದಿಂದ ಹವಾಮಾನ ಸ್ನೇಹಿ ಕೃಷಿ, ಡ್ರೋನ್, AI ಹಾಗೂ ಸ್ಮಾರ್ಟ್…
ಕೋಟಿ ವೃಕ್ಷ ಅಭಿಯಾನದ ಪರಿಣಾಮವಾಗಿ ವಿಜಯಪುರದಲ್ಲಿ ಈ ವರ್ಷ ತಾಪಮಾನ 40 ಡಿಗ್ರಿ…
ಉತ್ತರ ಪ್ರದೇಶದಲ್ಲಿ ಭಾರೀ ಧೂಳುಗಾಳಿ, ಮಳೆ ಹಾಗೂ ಮಿಂಚಿನಿಂದ 140ಕ್ಕೂ ಹೆಚ್ಚು ಮಂದಿ…