ಸುಳ್ಯ: ದ.ಕ ಜಿಲ್ಲೆ ಹಾಗೂ ಕೊಡಗು ಜಿಲ್ಲೆಯ ಭಾಗದಲ್ಲಿ ಕೆಂಪುಕಲ್ಲು ಕೋರೆಯನ್ನು ನಡೆಸಲಾಗುತ್ತಿದ್ದು ಇದು ಅನಧಿಕೃತವಾಗಿದ್ದರು ಇದರ ಅವಶ್ಯಕತೆ ಸಾರ್ವಜನಿಕರಿಗೆ ಬಹಳಷ್ಟು ಇರುವುದರಿಂದ ಈ ಎಲ್ಲಾ ವಿಷಯವನ್ನು ಪರಿಗಣಿಸಿ ಈಗ ಇರುವ ಕಾನೂನನ್ನು ಸರಳೀಕರಣ ಮಾಡಿ ಆಯಾ ಪಂಚಾಯತ್ ಮಟ್ಟದಲ್ಲಿ ಪರವಾನಿಗೆ ಕೊಡುವ ವ್ಯವಸ್ಥೆ ಮಾಡಬೇಕು ಎಂದು ಮುಖ್ಯಮಂತ್ರಿಗಳಿಗೆ ಹಾಗೂ ಗಣಿ ಮತ್ತು ಭೂವಿಜ್ಞಾನ ಸಚಿವರಿಗೆ ಮನವಿ ಮಾಡಲಾಯಿತು.
ಹೊಸ ನಿಯಮವನ್ನು ಮಾಡಿ ಸ್ಥಳೀಯವಾಗಿ ಉದ್ಯೋಗ ಸೃಷ್ಟಿಗೆ ಹಾಗೂ ಪಂಚಾಯತ್ ಗೆ ಆದಾಯ ಬರುವ ನಿಟ್ಟಿನಲ್ಲಿ ಕಾನೂನು ರೂಪಿಸಿ ಅನುಷ್ಠಾನ ಗೊಳಿಸಬೇಕೆಂದು ಮನವಿಯಲ್ಲಿ ತಿಳಿಸಲಾಗಿದೆ. ಬಂದರು ಮತ್ತು ಮೀನುಗಾರಿಕೆ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಇವರ ಮುಖಾಂತರ ಮನವಿ ಪತ್ರವನ್ನು ನೀಡಲಾಯಿತು.
ಈ ಸಂದರ್ಭದಲ್ಲಿ ಕೆಂಪು ಕಲ್ಲಿನ ಚಾಲಕ ಮತ್ತು ಮಾಲಕರಾದ ವಿಜಯಕುಮಾರ್ ನಿಡ್ಯಮಲೆ , ನವೀನ್ ರೈ ಮೇನಾಲ, ಪ್ರಕಾಶ್ ಗೌಡ ಅಡ್ಕಾರ್ ಮತ್ತು ಕಿಟ್ಟಣ್ಣ ರೈ ಮೇನಾಲ ಉಪಸ್ಥಿತರಿದ್ದರು.
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…