ಮಡಿಕೇರಿ : ಕೆಎಸ್ಆರ್ಟಿಸಿ ಬಸ್ಸೊಂದು ಬ್ರೇಕ್ ಫೇಲ್ ಆಗಿ ಬೇರೊಂದು ವಾಹನಕ್ಕೆ ಡಿಕ್ಕಿ ಹೊಡೆದು 50 ಅಡಿ ಆಳದ ಪ್ರಪಾತಕ್ಕೆ ಉರುಳಿದ ಘಟನೆ ಮಡಿಕೇರಿ ಹೊರವಲಯದ ಸ್ಯಾಂಡಲ್ಕಾಡ್ ಬಳಿ ನಡೆದಿದೆ. ಈ ಘಟನೆಯಿಂದ ಬಸ್ನಲ್ಲಿ ಪ್ರಯಾಣಿಸುತ್ತಿದ್ದ 10 ಮಂದಿ ಪ್ರಯಾಣಿಕರಿಗೆ ಯಾವುದೇ ಗಾಯಗಳಾಗದೇ ಅಪಾಯದಿಂದ ಪಾರಾಗಿದ್ದಾರೆ.
ಪ್ರಪಾತದ ಕಾಫಿ ತೋಟದಲ್ಲಿ ಸಂಪೂರ್ಣ ನೀರಿನಿಂದ ಭರ್ತಿಯಾಗಿದ್ದ ದೊಡ್ಡ ಕೆರೆಯೂ ಇದ್ದು, ಬಸ್ ಬ್ರೇಕ್ ಫೇಲ್ ಆದ ಸಮಯದಲ್ಲೂ ಬಸ್ ಅನ್ನು ಕೆರೆಗೆ ಬೀಳದಂತೆ ನಿಯಂತ್ರಿಸಿದ್ದಾರೆ. ಬಸ್ ಚಾಲಕನ ಪ್ರಜ್ಞೆಯಿಂದಾಗಿ ಮುಂದಾಗಬಹುದಾಗಿದ್ದ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ಬಸ್ ಡಿಕ್ಕಿಯಿಂದಾಗಿ ಚವರ್ಲೆಟ್ ವಾಹನದ ಹಿಂಭಾಗ ಜಖಂ ಆಗಿದ್ದು, ಈ ವಾಹನದಲ್ಲಿದ್ದವರೂ ಅಪಾಯದಿಂದ ಪಾರಾಗಿದ್ದಾರೆ. ಈ ಘಟನೆಯ ಕುರಿತು ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…
ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…
ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್ ಪೂರೈಕೆಯ…
2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…
ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…