Advertisement
ಸುದ್ದಿಗಳು

ಕೆಎಸ್‍ಎಸ್ ಕಾಲೇಜಿನಲ್ಲಿ ಯೋಗ ತರಬೇತಿ ಉದ್ಘಾಟನೆ

Share

ಸುಬ್ರಹ್ಮಣ್ಯ: ಪ್ರತಿ ಜೀವಿಗೂ ಬೇಕಿರುವುದು ದೈಹಿಕ ಆರೋಗ್ಯ ಇದಕ್ಕೆ ಯೋಗ ಬಹುಮುಖ್ಯ ಸಾಧನ ಎಂದು ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ಉಪಪ್ರಾಂಶುಪಾಲೆ ಡಾ. ಉಷಾ ಅಂಕೋಲೆಕರ್ ಅಭಿಪ್ರಾಯ ಪಟ್ಟರು.
ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ಮಹಿಳಾ ಸಬಲೀಕರಣ ಘಟಕ, ಅರ್ಥಶಾಸ್ತ್ರ ವಿಭಾಗ, ಪತಂಜಲಿ ಯೋಗ ಸಮಿತಿ ಬೆಳ್ಳಾರೆ ಇವುಗಳ ಅಶ್ರಯದಲ್ಲಿ ಕೆಎಸ್‍ಎಸ್ ಕಾಲೇಜಿನಲ್ಲಿ ನಡೆದ ಯೋಗ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಮನಸ್ಸು ಮತ್ತು ದೇಹವನ್ನು ಸಮತೋಲನದಲ್ಲಿ ಇರಲು ಯೋಗ ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಳ್ಳುವುದು ಅತ್ಯವಶ್ಯ ಎಂದರು. ಮುಖ್ಯ ಅತಿಥಿಯಾಗಿದ್ದ ಇಕೋ ಕ್ಲಬ್ ಮುಖ್ಯಸ್ಥೆ ಉಪನ್ಯಾಸಕಿ ಪ್ರೋ.ತಾರಕೇಶ್ವರಿ ಮಾತನಾಡಿ ಭಾರತೀಯ ಸಂಸ್ಕೃತಿ ವೈಭವತವಾದದ್ದು ಇದರ ಹಿರಿಮೆ ಮತ್ತು ಗರಿಮೆಗಳು ಯೋಗಾನುಬಂಧದಿಂದ ಕೂಡಿದೆ. ಹೀಗಾಗಿ ಗುರಿ ತಲುಪಲು ಯೋಗ ಸಹಕಾರಿ ಎಂದರು.

ಅರ್ಥಶಾಸ್ತ್ರ ಉಪನ್ಯಾಸಕಿ ಶ್ರೀಲತಾ ಕಮಿಲ ಪ್ರಸ್ತಾವನೆಗೈದು ಸ್ವಾಗತಿಸಿದರು. ಮಹಿಳಾ ಸಬಲೀಕರಣ ಘಟಕದ ಪ್ರತಿನಿಧಿ ದಿವ್ಯ ವಂದಿಸಿದರು. ಅಕ್ಷತಾ ಪಿ.ಕೆ ಕಾರ್ಯಕ್ರಮ ನಿರೂಪಿಸಿದರು. ಒಂದು ವಾರಗಳ ಕಾಲ ನಡೆಯುವ ಯೋಗ ಶಿಬಿರದಲ್ಲಿ ಬೆಳ್ಳಾರೆ ಪತಂಜಲಿ ಯೋಗಗುರುಗಳಾದ ಪ್ರಸಾದ್ ಸೇವಿತಾ, ಕವಿತಾ ತರಗತಿ ನಡೆಸಿಕೊಡಲಿರುವರು. ಕಾರ್ಯಕ್ರಮದಲ್ಲಿ ಉಪನ್ಯಾಸಕಿ ಪ್ರೋ ಆರತಿ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರೈತರಿಂದ ಉದ್ಯಮಿಗಳವರೆಗೆ : ಕೃಷಿ ಕ್ಷೇತ್ರಕ್ಕೆ ಸರ್ಕಾರದ ಹೊಸ ದೃಷ್ಟಿಕೋನ

ರೈತರನ್ನು ಉದ್ಯಮಿಗಳನ್ನಾಗಿ ಮಾಡಲು ಬೆಳೆ ಮೌಲ್ಯವರ್ಧನೆ ಮತ್ತು ಮಾರುಕಟ್ಟೆ ಸಂಪರ್ಕ ವ್ಯವಸ್ಥೆಗಳನ್ನು ಸರ್ಕಾರ…

3 hours ago

ಎಲೆಚುಕ್ಕಿ ರೋಗದಿಂದ ಅಡಿಕೆ ರೈತರಿಗೆ ಸಂಕಷ್ಟ | ಸಾಲ ಮರುಪಾವತಿ ಒಂದು ವರ್ಷ ಮುಂದೂಡುವ ಪ್ರಸ್ತಾವನೆ..!

ಉತ್ತರ ಕನ್ನಡದಲ್ಲಿ ಎಲೆಚುಕ್ಕಿ ರೋಗದಿಂದ ಸಂಕಷ್ಟದಲ್ಲಿರುವ ಅಡಿಕೆ ಬೆಳೆಗಾರರಿಗೆ ಸಾಲ ಮರುಪಾವತಿ ಅವಧಿ…

4 hours ago

ಕೃಷಿಯ ನಿಜವಾದ ಶಕ್ತಿ ಮಹಿಳೆಯರು : ಭಾರತದಲ್ಲಿ ಮೌನ ಕ್ರಾಂತಿ ಶುರುವಾಗಿದೆ..!

ಭಾರತದ ಕೃಷಿಯಲ್ಲಿ ಮಹಿಳೆಯರ ಪಾತ್ರ ದಿನೇದಿನೇ ಹೆಚ್ಚುತ್ತಿದೆ. ಸಂಪನ್ಮೂಲ ಹಾಗೂ ನಾಯಕತ್ವ ಅವಕಾಶ…

13 hours ago

ಹೊಸರುಚಿ | ಮನೆಲ್ಲೇ ಸುಲಭವಾಗಿ ಮಾಡುವ “ಉಪ್ಪು ಸೊಳೆ ಬೋಳು ಬೆಂದಿ”

ಸಾಂಪ್ರದಾಯಿಕ ಗ್ರಾಮೀಣ ತಿನಿಸು ಉಪ್ಪು ಸೊಳೆ ಬೋಳು ಬೆಂದಿ. ಸರಳ ಪದಾರ್ಥಗಳಿಂದ ಸುಲಭವಾಗಿ…

1 day ago

ಅಡಿಕೆ ಮಾರುಕಟ್ಟೆ- ಸದ್ಯ ಮಾರುಕಟ್ಟೆ ಸ್ಥಿರ | ರಬ್ಬರ್‌ ಧಾರಣೆ ಇಳಿಕೆಯ ಹಾದಿ

ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…

2 days ago

ಹವಾಮಾನ ವರದಿ | 07-03-2026 | ಕರಾವಳಿಯಲ್ಲಿ ಮೋಡ–ಮಳೆಯ ಸುಳಿವು | ಜೋರು ಮಳೆಯ ಲಕ್ಷಣವಿಲ್ಲ

ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…

2 days ago