ಸುಬ್ರಹ್ಮಣ್ಯ: ಪ್ರತಿ ಜೀವಿಗೂ ಬೇಕಿರುವುದು ದೈಹಿಕ ಆರೋಗ್ಯ ಇದಕ್ಕೆ ಯೋಗ ಬಹುಮುಖ್ಯ ಸಾಧನ ಎಂದು ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ಉಪಪ್ರಾಂಶುಪಾಲೆ ಡಾ. ಉಷಾ ಅಂಕೋಲೆಕರ್ ಅಭಿಪ್ರಾಯ ಪಟ್ಟರು.
ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ಮಹಿಳಾ ಸಬಲೀಕರಣ ಘಟಕ, ಅರ್ಥಶಾಸ್ತ್ರ ವಿಭಾಗ, ಪತಂಜಲಿ ಯೋಗ ಸಮಿತಿ ಬೆಳ್ಳಾರೆ ಇವುಗಳ ಅಶ್ರಯದಲ್ಲಿ ಕೆಎಸ್ಎಸ್ ಕಾಲೇಜಿನಲ್ಲಿ ನಡೆದ ಯೋಗ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಮನಸ್ಸು ಮತ್ತು ದೇಹವನ್ನು ಸಮತೋಲನದಲ್ಲಿ ಇರಲು ಯೋಗ ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಳ್ಳುವುದು ಅತ್ಯವಶ್ಯ ಎಂದರು. ಮುಖ್ಯ ಅತಿಥಿಯಾಗಿದ್ದ ಇಕೋ ಕ್ಲಬ್ ಮುಖ್ಯಸ್ಥೆ ಉಪನ್ಯಾಸಕಿ ಪ್ರೋ.ತಾರಕೇಶ್ವರಿ ಮಾತನಾಡಿ ಭಾರತೀಯ ಸಂಸ್ಕೃತಿ ವೈಭವತವಾದದ್ದು ಇದರ ಹಿರಿಮೆ ಮತ್ತು ಗರಿಮೆಗಳು ಯೋಗಾನುಬಂಧದಿಂದ ಕೂಡಿದೆ. ಹೀಗಾಗಿ ಗುರಿ ತಲುಪಲು ಯೋಗ ಸಹಕಾರಿ ಎಂದರು.
ಅರ್ಥಶಾಸ್ತ್ರ ಉಪನ್ಯಾಸಕಿ ಶ್ರೀಲತಾ ಕಮಿಲ ಪ್ರಸ್ತಾವನೆಗೈದು ಸ್ವಾಗತಿಸಿದರು. ಮಹಿಳಾ ಸಬಲೀಕರಣ ಘಟಕದ ಪ್ರತಿನಿಧಿ ದಿವ್ಯ ವಂದಿಸಿದರು. ಅಕ್ಷತಾ ಪಿ.ಕೆ ಕಾರ್ಯಕ್ರಮ ನಿರೂಪಿಸಿದರು. ಒಂದು ವಾರಗಳ ಕಾಲ ನಡೆಯುವ ಯೋಗ ಶಿಬಿರದಲ್ಲಿ ಬೆಳ್ಳಾರೆ ಪತಂಜಲಿ ಯೋಗಗುರುಗಳಾದ ಪ್ರಸಾದ್ ಸೇವಿತಾ, ಕವಿತಾ ತರಗತಿ ನಡೆಸಿಕೊಡಲಿರುವರು. ಕಾರ್ಯಕ್ರಮದಲ್ಲಿ ಉಪನ್ಯಾಸಕಿ ಪ್ರೋ ಆರತಿ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…