ಸುಬ್ರಹ್ಮಣ್ಯ: ಪ್ರತಿ ಜೀವಿಗೂ ಬೇಕಿರುವುದು ದೈಹಿಕ ಆರೋಗ್ಯ ಇದಕ್ಕೆ ಯೋಗ ಬಹುಮುಖ್ಯ ಸಾಧನ ಎಂದು ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ಉಪಪ್ರಾಂಶುಪಾಲೆ ಡಾ. ಉಷಾ ಅಂಕೋಲೆಕರ್ ಅಭಿಪ್ರಾಯ ಪಟ್ಟರು.
ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ಮಹಿಳಾ ಸಬಲೀಕರಣ ಘಟಕ, ಅರ್ಥಶಾಸ್ತ್ರ ವಿಭಾಗ, ಪತಂಜಲಿ ಯೋಗ ಸಮಿತಿ ಬೆಳ್ಳಾರೆ ಇವುಗಳ ಅಶ್ರಯದಲ್ಲಿ ಕೆಎಸ್ಎಸ್ ಕಾಲೇಜಿನಲ್ಲಿ ನಡೆದ ಯೋಗ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಮನಸ್ಸು ಮತ್ತು ದೇಹವನ್ನು ಸಮತೋಲನದಲ್ಲಿ ಇರಲು ಯೋಗ ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಳ್ಳುವುದು ಅತ್ಯವಶ್ಯ ಎಂದರು. ಮುಖ್ಯ ಅತಿಥಿಯಾಗಿದ್ದ ಇಕೋ ಕ್ಲಬ್ ಮುಖ್ಯಸ್ಥೆ ಉಪನ್ಯಾಸಕಿ ಪ್ರೋ.ತಾರಕೇಶ್ವರಿ ಮಾತನಾಡಿ ಭಾರತೀಯ ಸಂಸ್ಕೃತಿ ವೈಭವತವಾದದ್ದು ಇದರ ಹಿರಿಮೆ ಮತ್ತು ಗರಿಮೆಗಳು ಯೋಗಾನುಬಂಧದಿಂದ ಕೂಡಿದೆ. ಹೀಗಾಗಿ ಗುರಿ ತಲುಪಲು ಯೋಗ ಸಹಕಾರಿ ಎಂದರು.
ಅರ್ಥಶಾಸ್ತ್ರ ಉಪನ್ಯಾಸಕಿ ಶ್ರೀಲತಾ ಕಮಿಲ ಪ್ರಸ್ತಾವನೆಗೈದು ಸ್ವಾಗತಿಸಿದರು. ಮಹಿಳಾ ಸಬಲೀಕರಣ ಘಟಕದ ಪ್ರತಿನಿಧಿ ದಿವ್ಯ ವಂದಿಸಿದರು. ಅಕ್ಷತಾ ಪಿ.ಕೆ ಕಾರ್ಯಕ್ರಮ ನಿರೂಪಿಸಿದರು. ಒಂದು ವಾರಗಳ ಕಾಲ ನಡೆಯುವ ಯೋಗ ಶಿಬಿರದಲ್ಲಿ ಬೆಳ್ಳಾರೆ ಪತಂಜಲಿ ಯೋಗಗುರುಗಳಾದ ಪ್ರಸಾದ್ ಸೇವಿತಾ, ಕವಿತಾ ತರಗತಿ ನಡೆಸಿಕೊಡಲಿರುವರು. ಕಾರ್ಯಕ್ರಮದಲ್ಲಿ ಉಪನ್ಯಾಸಕಿ ಪ್ರೋ ಆರತಿ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…