ಸುಬ್ರಹ್ಮಣ್ಯ : ಪಠ್ಯದಲ್ಲಿ ಕಲಿಸಲಾಗದ ಶಿಕ್ಷಣವನ್ನು ಪಾಠವನ್ನು ರಂಗಭೂಮಿ ಕಲಿಸುತ್ತದೆ. ಸಮಾಜದಲ್ಲಿ ಪರಿಪೂರ್ಣ ವ್ಯಕ್ತಿಯಾಗಿ ರೂಪುಗೊಳ್ಳಲು ಪಠ್ಯೇತರ ಚಟುವಟಿಯೇ ಮಾನದಂಡ. ರಂಗಭೂಮಿ ಸದಾ ಜೀವಂತವಾದುದು ಎಂದು ಕೆಎಸ್ಎಸ್ ಕಾಲೇಜು ಪೂರ್ವ ವಿದ್ಯಾರ್ಥಿ ದಿವಾಕರ ಮುಂಡಾಜೆ ಹೇಳಿದರು.
ಅವರು ಸುಬ್ರಹ್ಮಣ್ಯ ಕೆಎಸ್ಎಸ್ ಕಾಲೇಜಿನಲ್ಲಿ ನಡೆದ ಕುಸುಮಸಾರಂಗ-2019 ಮತ್ತು ಐಕ್ಯೂಎಸಿ ಸಹಯೋಗದಲ್ಲಿ 27ನೇ ವರ್ಷದ ರಂಗ ಶಿಕ್ಷಣ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದರು. ಸಮಾಜದ ಗೌರವಕ್ಕೆ ಪಾತ್ರರಾಗಲು ಪಠ್ಯೇತರ ಚಟುವಟಕೆಗಳು ಪ್ರಮುಖ ಪಾತ್ರ ವಹಿಸುತ್ತವೆ ಎಂದರು.
ಕಾಲೇಜು ಪ್ರಾಂಶುಪಾಲ ಪ್ರೋ ಉದಯಕುಮಾರ್ ಕೆ ಅವರು ಪ್ರಸ್ತಾವನೆಗೈದು ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಮತ್ತು ಸ್ಪೂರ್ತಿಯನ್ನು ತುಂಬಲು ನಾಟಕಕ್ಕೆ ಪ್ರೋತ್ಸಾಹ ನೀಡುತ್ತಿದ್ದೇವೆ ಎಂದರು.
ಕಾಲೇಜು ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಮೋಹನದಾಸ್ ರೈ ಅಧ್ಯಕ್ಷತೆ ವಹಿಸಿದ್ದರು. ಐಕ್ಯೂಎಸಿ ಸಂಯೋಜಕ ಬಾಲಕೃಷ್ಣ ಪೈ, ಕುಸುಮಸಾರಂಗದ ಸ್ಥಾಪಕ ನಿರ್ದೇಶಕ ತುಕರಾಮ್ ಯೇನೆಕಲ್ಲು, ಪೂರ್ವ ವಿದ್ಯಾರ್ಥಿ ರಾಮಚಂದ್ರ ಮುಖ್ಯ ಅತಿಥಿಗಳಾಗಿದ್ದರು. ವಾಣಿಜ್ಯ ಶಾಸ್ತ್ರ ಉಪನ್ಯಾಸಕ ವಿನ್ಯಾಸ್ ಎಚ್ ವಂದಿಸಿದರು. ಲೋಹಿತ್ ಎಂ.ಡಿ ವಂದಿಸಿದರು. ಬಳಿಕ ಕುಸುಮಸಾರಂಗ ವಿದ್ಯಾರ್ಥಿಗಳು ನಟಿಸಿದ ಪ್ರೋ ಜಯಪ್ರಕಾಶ್ ಮಾವಿನಕುಳಿ ರಚಿಸಿದ ಅಭಿಯಾನ ನಾಟಕ ಪ್ರದರ್ಶನಗೊಂಡಿತು. ಉಪನ್ಯಾಸಕರು, ಪೋಷಕರು, ಪೂರ್ವ ವಿದ್ಯಾರ್ಥಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಅಕ್ರಮ ಅಡಿಕೆ ಆಮದು, ಜಿಎಸ್ಟಿ ತಾರತಮ್ಯ ಹಾಗೂ ಸಹಕಾರ ಸಂಘಗಳ ಸಮಸ್ಯೆಗಳ ಕುರಿತು…
ಆಗಸ್ಟ್ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್…
ಮ್ಯಾನ್ಮಾರ್ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…
ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…
ಉಪಗ್ರಹ, ಡ್ರೋನ್, GIS, AI ಮತ್ತು ಮಷಿನ್ ಲರ್ನಿಂಗ್ ತಂತ್ರಜ್ಞಾನ ಬಳಸಿ ರಾಜ್ಯ…