Advertisement
ನಮ್ಮೂರ ಸುದ್ದಿ

ಕೆಎಸ್‍ಎಸ್ ಕಾಲೇಜು ಪ್ರಾಂಶುಪಾಲ ಮಂಜುನಾಥ ಭಟ್ ನಿವೃತ್ತಿ

Share

ಸುಬ್ರಹ್ಮಣ್ಯ : ಶ್ರೀ ಸುಬ್ರಹ್ಮಣ್ಯೇಶ್ವರ ಮಹಾ ವಿದ್ಯಾಲಯದಲ್ಲಿ ಪ್ರಾಂಶುಪಾಲರಾಗಿರುವ ಸಂಸ್ಕೃತ ವಿಭಾಗದ ಮುಖ್ಯಸ್ಥ ಪ್ರೊ. ಮಂಜುನಾಥ ಎನ್.ಭಟ್ ಅವರು ಸುಮಾರು 35 ವರ್ಷಗಳ ಸುದೀರ್ಘ ಸೇವೆಯಿಂದ ಎ.30ರಂದು ಸೇವಾನಿವೃತ್ತಿ ಹೊಂದಿದರು.  ಕಳೆದ ಎರಡು ತಿಂಗಳ ಹಿಂದೆ ಅಧಿಕಾರ ವಹಿಸಿಕೊಂಡಿದ್ದರು.

Advertisement
Advertisement

ಮೂಲತ: ಉತ್ತರ ಕನ್ನಡ ಜಿಲ್ಲೆಯ ಶಿರಸಿ ಸಮೀಪದ ಕರಸುಳ್ಳಿ ಗ್ರಾಮದ ಇವರು 1984ರಲ್ಲಿ ಶಿರಸಿಯ ಎಂ.ಎಂ ಆಟ್ಸ್ ಸೈನ್ಸ್ ಪದವಿ ಕಾಲೇಜಿನಲ್ಲಿ ಸಂಸ್ಕೃತ ವಿಭಾಗದ ಉಪನ್ಯಾಸಕರಾಗಿ 3 ತಿಂಗಳು ಸೇವೆ ಸಲ್ಲಿಸಿದ ಬಳಿಕ ಅದೇ ವರ್ಷ ಶ್ರೀ ಸುಬ್ರಹ್ಮಣ್ಯೇಶ್ವರ ಕಾಲೇಜಿಗೆ ಉಪನ್ಯಾಸಕರಾಗಿ ಸೇರ್ಪಡೆಗೊಂಡರು.

ರಾಷ್ಟ್ರಮಟ್ಟದ ಕಾರ್ಯಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಹಲವಾರು ಪ್ರಬಂಧಗಳನ್ನು ಮಂಡಿಸಿರುವರು. ಕುಸುಮ ಸಾರಂಗ ರಂಗ ಘಟಕಕ್ಕೆ ಸಹಕರಿಸುತ್ತ ಬಂದಿರುವ ಇವರು ಉತ್ತಮ ಕ್ರೀಡಾಪಟು ಕೂಡ ಆಗಿದ್ದಾರೆ. ಮಂಗಳೂರು ವಿ.ವಿ ಯ ಸಂಸ್ಕೃತ ವಿಭಾಗದ ಬೋರ್ಡ್ ಆಫ್ ಸ್ಟಡೀಸ್ ಮತ್ತು ಬೋರ್ಡ್ ಆಪ್ ಎಕ್ಸಾಮಿನೇಶನ್ ಅಧ್ಯಕ್ಷರಾಗಿ ಸುಬ್ರಹ್ಮಣ್ಯ ಆರೋಗ್ಯಧಾಮ ಸಂಸ್ಥೆಯ ಸದಸ್ಯರಾಗಿ ಗ್ರಾಮೀಣ ಭಾಗದಲ್ಲಿ 15ಕ್ಕೂ ಅಧಿಕ ವೈದ್ಯಕೀಯ ಶಿಬಿರಗಳನ್ನು ನಡೆಸಿರುವರು.  ಕುಕ್ಕೆ ಸುಬ್ರಹ್ಮಣ್ಯ ವಾರ್ಷಿಕ ಜಾತ್ರೋತ್ಸವ ಸಂದರ್ಭ ಸೇರಿದಂತೆ ಅನೇಕ ಕಾರ್ಯಕ್ರಮಗಳಲ್ಲಿ ಉದ್ಘೋಷಕರಾಗಿ ಕಾರ್ಯಕ್ರಮ ಆಯೋಜಕರಾಗಿ ದುಡಿದಿರುವರು. ಉಪನ್ಯಾಸಕ ವೃತ್ತಿ ಜತೆ ಪತ್ರಿಕೆಯ ವರದಿಗಾರರಾಗಿ 12 ವರ್ಷ ಕರ್ತವ್ಯ ನಿರ್ವಹಿಸಿರುವರು. ಬರಹಗಾರರು ಆಗಿರುವ ಇವರು ಬಡ ವಿದ್ಯಾರ್ಥಿಗಳಿಗೆ ಶಿಕ್ಷಣಕ್ಕೆ ಆರ್ಥಿಕ ನೆರವನ್ನು ನೀಡುತ್ತಿದ್ದರು.

ಪತ್ನಿ ಕುಸುಮಾ ಭಟ್ ಹಾಗೂ ಯುಎಸ್ ಎ ನಲ್ಲಿರುವ ಪುತ್ರ ಆದರ್ಶ ಅವರ ಜತೆ ಸುಖ ಸಂಸಾರ ನಡೆಸುತ್ತಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಜೀವನಪ್ರೀತಿ

ಜೀವನವೆಂದರೆ ಕೇವಲ ಉಸಿರಾಟವಲ್ಲ; ಅದು ಅನುಭವಗಳ ಹೂಗುಚ್ಛ, ಭಾವನೆಗಳ ಹಬ್ಬ, ತತ್ತ್ವದ ಹಾದಿ.…

9 minutes ago

ಗೋವಾದಲ್ಲಿ ಗೇರು ಕೃಷಿಗೆ ಕೋತಿಗಳ ಉಪಟಳ | ಕರಾವಳಿ ಕರ್ನಾಟಕದ ಗೇರು ಕೃಷಿಗೆ ಮುನ್ನೆಚ್ಚರಿಕೆಯ ಸಂದೇಶ ?

ಗೋವಾದಲ್ಲಿ ಗೇರು ತೋಟಗಳ ಮೇಲೆ ಕೋತಿಗಳ ದಾಳಿ ಆರಂಭವಾಗಿದೆ. ಇದು ಕರಾವಳಿ ಕರ್ನಾಟಕದ…

17 minutes ago

ಅಂಕದ “ಸುರಕ್ಷತೆ”ಯಾ? ಬದುಕಿನ “ಸುರಕ್ಷತೆ”ಯಾ? – ಗ್ರಾಮೀಣ ಶಿಕ್ಷಣದ ಮಣ್ಣಿನ ಸತ್ವ ಕಳೆದುಕೊಳ್ಳದಿರೋಣ

ಗ್ರಾಮೀಣ ಮಕ್ಕಳಿಗೆ ಮಣ್ಣಿನ ಪಾಠ, ಬದುಕಿನ ಶಿಕ್ಷಣ ಮತ್ತು ಅಂಕದ ಶಿಕ್ಷಣದ ನಡುವಿನ…

36 minutes ago

ಜಾಗತಿಕ ಕೋಕೋ ಬೆಲೆ ಕುಸಿತ | ಘಾನಾದಲ್ಲಿ ಕೋಕೋ ದರ ಭಾರೀ ಇಳಿಕೆ

ಜಾಗತಿಕ ಕೋಕೋ ಬೆಲೆಗಳು ಒಂದು ವರ್ಷದ ಅವಧಿಯಲ್ಲಿ ಅರ್ಧದಷ್ಟು ಕುಸಿದಿರುವ ಹಿನ್ನೆಲೆಯಲ್ಲಿ ಪಶ್ಚಿಮ…

40 minutes ago

ಭಾರತ–ಬಾಂಗ್ಲಾದೇಶ ಗಡಿಯಲ್ಲಿ ನಿಪಾ ಆತಂಕ | ಹರಡುವಿಕೆ ಅಪಾಯ ‘ಕಡಿಮೆ’ ಎಂದ WHO

ಭಾರತ ಮತ್ತು ಬಾಂಗ್ಲಾದೇಶದಲ್ಲಿ ಮೂರು ನಿಪಾ ಪ್ರಕರಣಗಳು ದೃಢಪಟ್ಟಿದ್ದರೂ, ಜಾಗತಿಕ ಹಾಗೂ ಪ್ರಾದೇಶಿಕ…

47 minutes ago

ಕಡಲಾಮೆಗಳ ಸಂತಾನೋತ್ಪತ್ತಿಗೆ ಅರಣ್ಯ ಇಲಾಖೆ ರಕ್ಷಣೆ | ಬಾವಳ ಕಡಲತೀರದಲ್ಲಿ ಸಂತೋಷದ ಕ್ಷಣ

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…

23 hours ago