ನಮ್ಮೂರ ಸುದ್ದಿ

ಕೆಎಸ್‍ಎಸ್ ಕಾಲೇಜು ಪ್ರಾಂಶುಪಾಲ ಮಂಜುನಾಥ ಭಟ್ ನಿವೃತ್ತಿ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಬ್ರಹ್ಮಣ್ಯ : ಶ್ರೀ ಸುಬ್ರಹ್ಮಣ್ಯೇಶ್ವರ ಮಹಾ ವಿದ್ಯಾಲಯದಲ್ಲಿ ಪ್ರಾಂಶುಪಾಲರಾಗಿರುವ ಸಂಸ್ಕೃತ ವಿಭಾಗದ ಮುಖ್ಯಸ್ಥ ಪ್ರೊ. ಮಂಜುನಾಥ ಎನ್.ಭಟ್ ಅವರು ಸುಮಾರು 35 ವರ್ಷಗಳ ಸುದೀರ್ಘ ಸೇವೆಯಿಂದ ಎ.30ರಂದು ಸೇವಾನಿವೃತ್ತಿ ಹೊಂದಿದರು.  ಕಳೆದ ಎರಡು ತಿಂಗಳ ಹಿಂದೆ ಅಧಿಕಾರ ವಹಿಸಿಕೊಂಡಿದ್ದರು.

Advertisement
Advertisement

ಮೂಲತ: ಉತ್ತರ ಕನ್ನಡ ಜಿಲ್ಲೆಯ ಶಿರಸಿ ಸಮೀಪದ ಕರಸುಳ್ಳಿ ಗ್ರಾಮದ ಇವರು 1984ರಲ್ಲಿ ಶಿರಸಿಯ ಎಂ.ಎಂ ಆಟ್ಸ್ ಸೈನ್ಸ್ ಪದವಿ ಕಾಲೇಜಿನಲ್ಲಿ ಸಂಸ್ಕೃತ ವಿಭಾಗದ ಉಪನ್ಯಾಸಕರಾಗಿ 3 ತಿಂಗಳು ಸೇವೆ ಸಲ್ಲಿಸಿದ ಬಳಿಕ ಅದೇ ವರ್ಷ ಶ್ರೀ ಸುಬ್ರಹ್ಮಣ್ಯೇಶ್ವರ ಕಾಲೇಜಿಗೆ ಉಪನ್ಯಾಸಕರಾಗಿ ಸೇರ್ಪಡೆಗೊಂಡರು.

ರಾಷ್ಟ್ರಮಟ್ಟದ ಕಾರ್ಯಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಹಲವಾರು ಪ್ರಬಂಧಗಳನ್ನು ಮಂಡಿಸಿರುವರು. ಕುಸುಮ ಸಾರಂಗ ರಂಗ ಘಟಕಕ್ಕೆ ಸಹಕರಿಸುತ್ತ ಬಂದಿರುವ ಇವರು ಉತ್ತಮ ಕ್ರೀಡಾಪಟು ಕೂಡ ಆಗಿದ್ದಾರೆ. ಮಂಗಳೂರು ವಿ.ವಿ ಯ ಸಂಸ್ಕೃತ ವಿಭಾಗದ ಬೋರ್ಡ್ ಆಫ್ ಸ್ಟಡೀಸ್ ಮತ್ತು ಬೋರ್ಡ್ ಆಪ್ ಎಕ್ಸಾಮಿನೇಶನ್ ಅಧ್ಯಕ್ಷರಾಗಿ ಸುಬ್ರಹ್ಮಣ್ಯ ಆರೋಗ್ಯಧಾಮ ಸಂಸ್ಥೆಯ ಸದಸ್ಯರಾಗಿ ಗ್ರಾಮೀಣ ಭಾಗದಲ್ಲಿ 15ಕ್ಕೂ ಅಧಿಕ ವೈದ್ಯಕೀಯ ಶಿಬಿರಗಳನ್ನು ನಡೆಸಿರುವರು.  ಕುಕ್ಕೆ ಸುಬ್ರಹ್ಮಣ್ಯ ವಾರ್ಷಿಕ ಜಾತ್ರೋತ್ಸವ ಸಂದರ್ಭ ಸೇರಿದಂತೆ ಅನೇಕ ಕಾರ್ಯಕ್ರಮಗಳಲ್ಲಿ ಉದ್ಘೋಷಕರಾಗಿ ಕಾರ್ಯಕ್ರಮ ಆಯೋಜಕರಾಗಿ ದುಡಿದಿರುವರು. ಉಪನ್ಯಾಸಕ ವೃತ್ತಿ ಜತೆ ಪತ್ರಿಕೆಯ ವರದಿಗಾರರಾಗಿ 12 ವರ್ಷ ಕರ್ತವ್ಯ ನಿರ್ವಹಿಸಿರುವರು. ಬರಹಗಾರರು ಆಗಿರುವ ಇವರು ಬಡ ವಿದ್ಯಾರ್ಥಿಗಳಿಗೆ ಶಿಕ್ಷಣಕ್ಕೆ ಆರ್ಥಿಕ ನೆರವನ್ನು ನೀಡುತ್ತಿದ್ದರು.

ಪತ್ನಿ ಕುಸುಮಾ ಭಟ್ ಹಾಗೂ ಯುಎಸ್ ಎ ನಲ್ಲಿರುವ ಪುತ್ರ ಆದರ್ಶ ಅವರ ಜತೆ ಸುಖ ಸಂಸಾರ ನಡೆಸುತ್ತಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಬ್ಬರ್‌ ಆಮದು | ರಬ್ಬರ್‌ ಬೆಳೆಗಾರರಿಗೆ ತರಲಿದೆ ಧಾರಣೆ ಸಂಕಷ್ಟ

ದೇಶದಲ್ಲಿ ರಬ್ಬರ್‌ ಉತ್ಪಾದನೆ ಹೆಚ್ಚಳದ ನಡುವೆ ಇದೀಗ ರಬ್ಬರ್‌ ಆಮದು ನೀತಿಯು ರಬ್ಬರ್‌…

16 minutes ago

ಅಕ್ರಮವಾಗಿ ಅಡಿಕೆ ಸಾಗಣೆ ಪ್ರಕರಣ | ಪಶ್ಚಿಮ ಬಂಗಾಳದಲ್ಲಿ ಅಡಿಕೆ ವ್ಯಾಪಾರಿಯ ಬಂಧನ

ಅಕ್ರಮವಾಗಿ ಅಡಿಕೆ ಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಜಿಲ್ಲೆಯ ನಕ್ಸಲ್ಬರಿ…

36 minutes ago

ಸುಳ್ಯದಲ್ಲಿ ಏಕೆ ಇದೆಲ್ಲಾ ಬಗೆಹರಿಯದ ಸಮಸ್ಯೆ…? | ರಸ್ತೆ-ವಿದ್ಯುತ್‌-ಸೇತುವೆಗಳು ಮರೀಚಿಕೆಯೇ..? |

ಸುಳ್ಯದ ಬಹುತೇಕ ಪ್ರದೇಶ ಅರಣ್ಯದಿಂದ ಕೂಡಿದೆ. ಮಲೆನಾಡು ತಪ್ಪಲು ಪ್ರದೇಶವಾದ್ದರಿಂದ ಮಳೆಯೂ ಹೆಚ್ಚು,…

1 hour ago

ಹವಾಮಾನ ವರದಿ | 24-06-2025 | ಬದಲಾಯ್ತು ಹವಾಮಾನ ಲಕ್ಷಣಗಳು | ಜೂ.28 ವರೆಗೂ ಉತ್ತಮ ಮಳೆ ನಿರೀಕ್ಷೆ |

ಬಂಗಾಳಕೊಲ್ಲಿಯ ಬಾಂಗ್ಲಾದೇಶ ಕರಾವಳಿಯಲ್ಲಿ ಸಣ್ಣ ಪ್ರಮಾಣದ ತಿರುಗುವಿಕೆಯ ಕಾರಣದಿಂದ ಮುಂಗಾರು ಸ್ವಲ್ಪ ಚುರುಕಾಗಿದ್ದು,…

9 hours ago

ದಾಖಲೆ ಧಾರಣೆಯತ್ತ ಕೊಬ್ಬರಿ | ತಿಪಟೂರಿನಲ್ಲಿ ಕ್ವಿಂಟಾಲ್‌ ಗೆ ಗರಿಷ್ಠ ದರ 26,167 ರೂಪಾಯಿಗೆ ಮಾರಾಟ

ಕೊಬ್ಬರಿ ಬೆಲೆ ಏರಿಕೆಯಾಗುತ್ತಿದ್ದು ಕ್ವಿಂಟಾಲ್‌ಗೆ 26 ಸಾವಿರ ರೂ. ಗೆ ಮಾರಾಟವಾಗುವ ಮೂಲಕ…

10 hours ago

ಒಬ್ಬರಿಂದೊಬ್ಬರು ಕಾಲೆಳೆದುಕೊಂಡರೆ ಹೇಗೆ..?

ಒಬ್ಬರಿಂದೊಬ್ಬರು ಕಾಲೆದುಕೊಂಡರೆ ಹೇಗಾದೀತು..? ಇದರ ಬದಲಾಗಿ ನೆರವಾಗುವ ಸಂದೇಶ ಹರಿಡಿದರೆ ಹೇಗೆ.. ಈ…

10 hours ago