ನಮ್ಮೂರ ಸುದ್ದಿ

ಕೆಎಸ್‍ಎಸ್ ಕಾಲೇಜು ಪ್ರಾಂಶುಪಾಲ ಮಂಜುನಾಥ ಭಟ್ ನಿವೃತ್ತಿ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಬ್ರಹ್ಮಣ್ಯ : ಶ್ರೀ ಸುಬ್ರಹ್ಮಣ್ಯೇಶ್ವರ ಮಹಾ ವಿದ್ಯಾಲಯದಲ್ಲಿ ಪ್ರಾಂಶುಪಾಲರಾಗಿರುವ ಸಂಸ್ಕೃತ ವಿಭಾಗದ ಮುಖ್ಯಸ್ಥ ಪ್ರೊ. ಮಂಜುನಾಥ ಎನ್.ಭಟ್ ಅವರು ಸುಮಾರು 35 ವರ್ಷಗಳ ಸುದೀರ್ಘ ಸೇವೆಯಿಂದ ಎ.30ರಂದು ಸೇವಾನಿವೃತ್ತಿ ಹೊಂದಿದರು.  ಕಳೆದ ಎರಡು ತಿಂಗಳ ಹಿಂದೆ ಅಧಿಕಾರ ವಹಿಸಿಕೊಂಡಿದ್ದರು.

Advertisement
Advertisement

ಮೂಲತ: ಉತ್ತರ ಕನ್ನಡ ಜಿಲ್ಲೆಯ ಶಿರಸಿ ಸಮೀಪದ ಕರಸುಳ್ಳಿ ಗ್ರಾಮದ ಇವರು 1984ರಲ್ಲಿ ಶಿರಸಿಯ ಎಂ.ಎಂ ಆಟ್ಸ್ ಸೈನ್ಸ್ ಪದವಿ ಕಾಲೇಜಿನಲ್ಲಿ ಸಂಸ್ಕೃತ ವಿಭಾಗದ ಉಪನ್ಯಾಸಕರಾಗಿ 3 ತಿಂಗಳು ಸೇವೆ ಸಲ್ಲಿಸಿದ ಬಳಿಕ ಅದೇ ವರ್ಷ ಶ್ರೀ ಸುಬ್ರಹ್ಮಣ್ಯೇಶ್ವರ ಕಾಲೇಜಿಗೆ ಉಪನ್ಯಾಸಕರಾಗಿ ಸೇರ್ಪಡೆಗೊಂಡರು.

ರಾಷ್ಟ್ರಮಟ್ಟದ ಕಾರ್ಯಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಹಲವಾರು ಪ್ರಬಂಧಗಳನ್ನು ಮಂಡಿಸಿರುವರು. ಕುಸುಮ ಸಾರಂಗ ರಂಗ ಘಟಕಕ್ಕೆ ಸಹಕರಿಸುತ್ತ ಬಂದಿರುವ ಇವರು ಉತ್ತಮ ಕ್ರೀಡಾಪಟು ಕೂಡ ಆಗಿದ್ದಾರೆ. ಮಂಗಳೂರು ವಿ.ವಿ ಯ ಸಂಸ್ಕೃತ ವಿಭಾಗದ ಬೋರ್ಡ್ ಆಫ್ ಸ್ಟಡೀಸ್ ಮತ್ತು ಬೋರ್ಡ್ ಆಪ್ ಎಕ್ಸಾಮಿನೇಶನ್ ಅಧ್ಯಕ್ಷರಾಗಿ ಸುಬ್ರಹ್ಮಣ್ಯ ಆರೋಗ್ಯಧಾಮ ಸಂಸ್ಥೆಯ ಸದಸ್ಯರಾಗಿ ಗ್ರಾಮೀಣ ಭಾಗದಲ್ಲಿ 15ಕ್ಕೂ ಅಧಿಕ ವೈದ್ಯಕೀಯ ಶಿಬಿರಗಳನ್ನು ನಡೆಸಿರುವರು.  ಕುಕ್ಕೆ ಸುಬ್ರಹ್ಮಣ್ಯ ವಾರ್ಷಿಕ ಜಾತ್ರೋತ್ಸವ ಸಂದರ್ಭ ಸೇರಿದಂತೆ ಅನೇಕ ಕಾರ್ಯಕ್ರಮಗಳಲ್ಲಿ ಉದ್ಘೋಷಕರಾಗಿ ಕಾರ್ಯಕ್ರಮ ಆಯೋಜಕರಾಗಿ ದುಡಿದಿರುವರು. ಉಪನ್ಯಾಸಕ ವೃತ್ತಿ ಜತೆ ಪತ್ರಿಕೆಯ ವರದಿಗಾರರಾಗಿ 12 ವರ್ಷ ಕರ್ತವ್ಯ ನಿರ್ವಹಿಸಿರುವರು. ಬರಹಗಾರರು ಆಗಿರುವ ಇವರು ಬಡ ವಿದ್ಯಾರ್ಥಿಗಳಿಗೆ ಶಿಕ್ಷಣಕ್ಕೆ ಆರ್ಥಿಕ ನೆರವನ್ನು ನೀಡುತ್ತಿದ್ದರು.

ಪತ್ನಿ ಕುಸುಮಾ ಭಟ್ ಹಾಗೂ ಯುಎಸ್ ಎ ನಲ್ಲಿರುವ ಪುತ್ರ ಆದರ್ಶ ಅವರ ಜತೆ ಸುಖ ಸಂಸಾರ ನಡೆಸುತ್ತಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರೆಂಟ್ ಹೊದ ಕೂಡ್ಲೆ ಬೊಬ್ಬೆ ಹೊಡೆಯೋದು ಯಾಕೆ..!?

ಎಂತ ಮಾರ್ರೇ.... ಈ ಮನುಷ್ಯರಿಗೆ ಒಂದು ಸೊಲ್ಪ ಹೊತ್ತು ಕರೆಂಟ್ ಹೊದ್ರೆ ಕೂಡ್ಲೆ…

13 hours ago

ಮಳೆ Update | ಕರಾವಳಿ ಜಿಲ್ಲೆಯಲ್ಲಿ ವ್ಯಾಪಕ ಮಳೆ | ಹಲವು ಕಡೆ 100 ಮಿಮೀಗಿಂತಲೂ ಅಧಿಕ ಮಳೆ | ಉಡುಪಿಯಲ್ಲಿ 164 ಮಿಮೀ ಮಳೆ |

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಸುಳ್ಯ, ಪುತ್ತೂರು,ಚೆಂಬು ಪ್ರದೇಶದ ಕೆಲವು ಕಡೆ 100…

14 hours ago

ಬಿತ್ತನೆ ಬೀಜ ರಸಗೊಬ್ಬರ ಕಾಳಸಂತೆಯಲ್ಲಿ ಮಾರಾಟ ಮಾಡಿದರೆ ಕಠಿಣ ಕ್ರಮದ ಎಚ್ಚರಿಕೆ

ಬಿತ್ತನೆ ಬೀಜ ಮತ್ತು ರಸಗೊಬ್ಬರವನ್ನು ಕಾಳಸಂತೆಯಲ್ಲಿ ಮಾರಾಟಮಾಡುವವರು ಮತ್ತು ಕೃತಕ ಅಭಾವ ಸೃಷ್ಟಿಸುವವರ…

17 hours ago

ರೈತರು ಉತ್ತಮ ಇಳುವರಿ ಪಡೆಯಲು ಸಂಯುಕ್ತ ರಸಗೊಬ್ಬರ ಬಳಸುವಂತೆ ಕೃಷಿ ಇಲಾಖೆ ಸೂಚನೆ

ರೈತರು ಉತ್ತಮ ಇಳುವರಿ ಪಡೆಯಲು ಡಿಎಪಿ ಗೊಬ್ಬರಕ್ಕೆ ಪರ್ಯಾಯವಾಗಿ ಸಂಯುಕ್ತ ರಸಗೊಬ್ಬರ ಬಳಸಲು…

17 hours ago

ಬದುಕು ಪುರಾಣ | ಎಲ್ಲರೊಳಗೂ ಏಕಲವ್ಯನಿದ್ದಾನೆ!

 ‘ಏಕಲವ್ಯ’ – ಈ ಪದವು ಸಾಧನೆಯ ಐಕಾನ್. ಪರ್ಯಾಯ ಪದ. ಸಾಧನೆಗೆ ಜಾತಿ,…

17 hours ago

ಮನೆಯಲ್ಲಿ ಸಂಪತ್ತು, ಸಂತೋಷ ಹೆಚ್ಚಾಗಲು ಮುಖ್ಯ ದ್ವಾರ ಹೀಗಿರಲಿ…

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

17 hours ago