Advertisement
ನಮ್ಮೂರ ಸುದ್ದಿ

ಕೆಎಸ್‍ಎಸ್ ಕಾಲೇಜು ಪ್ರಾಂಶುಪಾಲ ಮಂಜುನಾಥ ಭಟ್ ನಿವೃತ್ತಿ

Share

ಸುಬ್ರಹ್ಮಣ್ಯ : ಶ್ರೀ ಸುಬ್ರಹ್ಮಣ್ಯೇಶ್ವರ ಮಹಾ ವಿದ್ಯಾಲಯದಲ್ಲಿ ಪ್ರಾಂಶುಪಾಲರಾಗಿರುವ ಸಂಸ್ಕೃತ ವಿಭಾಗದ ಮುಖ್ಯಸ್ಥ ಪ್ರೊ. ಮಂಜುನಾಥ ಎನ್.ಭಟ್ ಅವರು ಸುಮಾರು 35 ವರ್ಷಗಳ ಸುದೀರ್ಘ ಸೇವೆಯಿಂದ ಎ.30ರಂದು ಸೇವಾನಿವೃತ್ತಿ ಹೊಂದಿದರು.  ಕಳೆದ ಎರಡು ತಿಂಗಳ ಹಿಂದೆ ಅಧಿಕಾರ ವಹಿಸಿಕೊಂಡಿದ್ದರು.

ಮೂಲತ: ಉತ್ತರ ಕನ್ನಡ ಜಿಲ್ಲೆಯ ಶಿರಸಿ ಸಮೀಪದ ಕರಸುಳ್ಳಿ ಗ್ರಾಮದ ಇವರು 1984ರಲ್ಲಿ ಶಿರಸಿಯ ಎಂ.ಎಂ ಆಟ್ಸ್ ಸೈನ್ಸ್ ಪದವಿ ಕಾಲೇಜಿನಲ್ಲಿ ಸಂಸ್ಕೃತ ವಿಭಾಗದ ಉಪನ್ಯಾಸಕರಾಗಿ 3 ತಿಂಗಳು ಸೇವೆ ಸಲ್ಲಿಸಿದ ಬಳಿಕ ಅದೇ ವರ್ಷ ಶ್ರೀ ಸುಬ್ರಹ್ಮಣ್ಯೇಶ್ವರ ಕಾಲೇಜಿಗೆ ಉಪನ್ಯಾಸಕರಾಗಿ ಸೇರ್ಪಡೆಗೊಂಡರು.

Advertisement

ರಾಷ್ಟ್ರಮಟ್ಟದ ಕಾರ್ಯಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಹಲವಾರು ಪ್ರಬಂಧಗಳನ್ನು ಮಂಡಿಸಿರುವರು. ಕುಸುಮ ಸಾರಂಗ ರಂಗ ಘಟಕಕ್ಕೆ ಸಹಕರಿಸುತ್ತ ಬಂದಿರುವ ಇವರು ಉತ್ತಮ ಕ್ರೀಡಾಪಟು ಕೂಡ ಆಗಿದ್ದಾರೆ. ಮಂಗಳೂರು ವಿ.ವಿ ಯ ಸಂಸ್ಕೃತ ವಿಭಾಗದ ಬೋರ್ಡ್ ಆಫ್ ಸ್ಟಡೀಸ್ ಮತ್ತು ಬೋರ್ಡ್ ಆಪ್ ಎಕ್ಸಾಮಿನೇಶನ್ ಅಧ್ಯಕ್ಷರಾಗಿ ಸುಬ್ರಹ್ಮಣ್ಯ ಆರೋಗ್ಯಧಾಮ ಸಂಸ್ಥೆಯ ಸದಸ್ಯರಾಗಿ ಗ್ರಾಮೀಣ ಭಾಗದಲ್ಲಿ 15ಕ್ಕೂ ಅಧಿಕ ವೈದ್ಯಕೀಯ ಶಿಬಿರಗಳನ್ನು ನಡೆಸಿರುವರು.  ಕುಕ್ಕೆ ಸುಬ್ರಹ್ಮಣ್ಯ ವಾರ್ಷಿಕ ಜಾತ್ರೋತ್ಸವ ಸಂದರ್ಭ ಸೇರಿದಂತೆ ಅನೇಕ ಕಾರ್ಯಕ್ರಮಗಳಲ್ಲಿ ಉದ್ಘೋಷಕರಾಗಿ ಕಾರ್ಯಕ್ರಮ ಆಯೋಜಕರಾಗಿ ದುಡಿದಿರುವರು. ಉಪನ್ಯಾಸಕ ವೃತ್ತಿ ಜತೆ ಪತ್ರಿಕೆಯ ವರದಿಗಾರರಾಗಿ 12 ವರ್ಷ ಕರ್ತವ್ಯ ನಿರ್ವಹಿಸಿರುವರು. ಬರಹಗಾರರು ಆಗಿರುವ ಇವರು ಬಡ ವಿದ್ಯಾರ್ಥಿಗಳಿಗೆ ಶಿಕ್ಷಣಕ್ಕೆ ಆರ್ಥಿಕ ನೆರವನ್ನು ನೀಡುತ್ತಿದ್ದರು.

ಪತ್ನಿ ಕುಸುಮಾ ಭಟ್ ಹಾಗೂ ಯುಎಸ್ ಎ ನಲ್ಲಿರುವ ಪುತ್ರ ಆದರ್ಶ ಅವರ ಜತೆ ಸುಖ ಸಂಸಾರ ನಡೆಸುತ್ತಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭೂಕುಸಿತ ಎಚ್ಚರಿಕೆ: ಸಾರ್ವಜನಿಕರು ಎಚ್ಚರ ವಹಿಸಲು ಸೂಚನೆ

ರಾಜ್ಯದ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಜುಲೈ 5ರಿಂದ 9ರವರೆಗೆ ಒಂದು ಅಥವಾ ಎರಡು…

16 hours ago

ಪೆಟ್ರೋಲ್-ಡೀಸೆಲ್ ದರ ಇಳಿಕೆಯಾಗುತ್ತಾ? ಕೇಂದ್ರ ಸಚಿವರ ಸುಳಿವಿನಿಂದ ವಾಹನ ಸವಾರರಿಗೆ ಹೊಸ ನಿರೀಕ್ಷೆ

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಕಳೆದ ಕೆಲವು ದಿನಗಳಿಂದ ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ…

2 days ago

ನಿರಂತರ ಮಳೆ ಹಿನ್ನೆಲೆ ಜುಲೈ 3ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ-ಕಾಲೇಜುಗಳಿಗೆ ರಜೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಮಳೆ ಹಾಗೂ ಭಾರತೀಯ ಹವಾಮಾನ ಇಲಾಖೆಯ…

2 days ago

ಗ್ರಾಮಸಭೆಗೆ ಜನ ಯಾಕೆ ಬರುತ್ತಿಲ್ಲ? ಗ್ರಾಮಸಭೆಗಳು ಔಪಚಾರಿಕತೆಗೆ ಸೀಮಿತವೇ?

ಜೀವನೋಪಾಯದ ಒತ್ತಡದಿಂದ ಗ್ರಾಮಸಭೆಗೆ 55.5% ಗ್ರಾಮೀಣರು ಹಾಜರಾಗುತ್ತಿಲ್ಲ ಎಂದು ರಾಷ್ಟ್ರೀಯ ಅಧ್ಯಯನ ತಿಳಿಸಿದೆ.…

2 days ago