Advertisement
ನಮ್ಮೂರ ಸುದ್ದಿ

ಕೆಎಸ್‍ಎಸ್ ಕಾಲೇಜು ಪ್ರಾಂಶುಪಾಲ ಮಂಜುನಾಥ ಭಟ್ ನಿವೃತ್ತಿ

Share

ಸುಬ್ರಹ್ಮಣ್ಯ : ಶ್ರೀ ಸುಬ್ರಹ್ಮಣ್ಯೇಶ್ವರ ಮಹಾ ವಿದ್ಯಾಲಯದಲ್ಲಿ ಪ್ರಾಂಶುಪಾಲರಾಗಿರುವ ಸಂಸ್ಕೃತ ವಿಭಾಗದ ಮುಖ್ಯಸ್ಥ ಪ್ರೊ. ಮಂಜುನಾಥ ಎನ್.ಭಟ್ ಅವರು ಸುಮಾರು 35 ವರ್ಷಗಳ ಸುದೀರ್ಘ ಸೇವೆಯಿಂದ ಎ.30ರಂದು ಸೇವಾನಿವೃತ್ತಿ ಹೊಂದಿದರು.  ಕಳೆದ ಎರಡು ತಿಂಗಳ ಹಿಂದೆ ಅಧಿಕಾರ ವಹಿಸಿಕೊಂಡಿದ್ದರು.

ಮೂಲತ: ಉತ್ತರ ಕನ್ನಡ ಜಿಲ್ಲೆಯ ಶಿರಸಿ ಸಮೀಪದ ಕರಸುಳ್ಳಿ ಗ್ರಾಮದ ಇವರು 1984ರಲ್ಲಿ ಶಿರಸಿಯ ಎಂ.ಎಂ ಆಟ್ಸ್ ಸೈನ್ಸ್ ಪದವಿ ಕಾಲೇಜಿನಲ್ಲಿ ಸಂಸ್ಕೃತ ವಿಭಾಗದ ಉಪನ್ಯಾಸಕರಾಗಿ 3 ತಿಂಗಳು ಸೇವೆ ಸಲ್ಲಿಸಿದ ಬಳಿಕ ಅದೇ ವರ್ಷ ಶ್ರೀ ಸುಬ್ರಹ್ಮಣ್ಯೇಶ್ವರ ಕಾಲೇಜಿಗೆ ಉಪನ್ಯಾಸಕರಾಗಿ ಸೇರ್ಪಡೆಗೊಂಡರು.

ರಾಷ್ಟ್ರಮಟ್ಟದ ಕಾರ್ಯಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಹಲವಾರು ಪ್ರಬಂಧಗಳನ್ನು ಮಂಡಿಸಿರುವರು. ಕುಸುಮ ಸಾರಂಗ ರಂಗ ಘಟಕಕ್ಕೆ ಸಹಕರಿಸುತ್ತ ಬಂದಿರುವ ಇವರು ಉತ್ತಮ ಕ್ರೀಡಾಪಟು ಕೂಡ ಆಗಿದ್ದಾರೆ. ಮಂಗಳೂರು ವಿ.ವಿ ಯ ಸಂಸ್ಕೃತ ವಿಭಾಗದ ಬೋರ್ಡ್ ಆಫ್ ಸ್ಟಡೀಸ್ ಮತ್ತು ಬೋರ್ಡ್ ಆಪ್ ಎಕ್ಸಾಮಿನೇಶನ್ ಅಧ್ಯಕ್ಷರಾಗಿ ಸುಬ್ರಹ್ಮಣ್ಯ ಆರೋಗ್ಯಧಾಮ ಸಂಸ್ಥೆಯ ಸದಸ್ಯರಾಗಿ ಗ್ರಾಮೀಣ ಭಾಗದಲ್ಲಿ 15ಕ್ಕೂ ಅಧಿಕ ವೈದ್ಯಕೀಯ ಶಿಬಿರಗಳನ್ನು ನಡೆಸಿರುವರು.  ಕುಕ್ಕೆ ಸುಬ್ರಹ್ಮಣ್ಯ ವಾರ್ಷಿಕ ಜಾತ್ರೋತ್ಸವ ಸಂದರ್ಭ ಸೇರಿದಂತೆ ಅನೇಕ ಕಾರ್ಯಕ್ರಮಗಳಲ್ಲಿ ಉದ್ಘೋಷಕರಾಗಿ ಕಾರ್ಯಕ್ರಮ ಆಯೋಜಕರಾಗಿ ದುಡಿದಿರುವರು. ಉಪನ್ಯಾಸಕ ವೃತ್ತಿ ಜತೆ ಪತ್ರಿಕೆಯ ವರದಿಗಾರರಾಗಿ 12 ವರ್ಷ ಕರ್ತವ್ಯ ನಿರ್ವಹಿಸಿರುವರು. ಬರಹಗಾರರು ಆಗಿರುವ ಇವರು ಬಡ ವಿದ್ಯಾರ್ಥಿಗಳಿಗೆ ಶಿಕ್ಷಣಕ್ಕೆ ಆರ್ಥಿಕ ನೆರವನ್ನು ನೀಡುತ್ತಿದ್ದರು.

ಪತ್ನಿ ಕುಸುಮಾ ಭಟ್ ಹಾಗೂ ಯುಎಸ್ ಎ ನಲ್ಲಿರುವ ಪುತ್ರ ಆದರ್ಶ ಅವರ ಜತೆ ಸುಖ ಸಂಸಾರ ನಡೆಸುತ್ತಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 17-04-2026 | ಕರ್ನಾಟಕದ ಹವಾಮಾನದಲ್ಲಿ ಬದಲಾವಣೆ – ಏಪ್ರಿಲ್ 18 ರಿಂದ ಮಳೆ ಹೆಚ್ಚಳ

ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…

5 hours ago

ಒಡಿಶಾ ಕರಾವಳಿಯಲ್ಲಿ ಅಕ್ರಮ ಅಡಿಕೆ ಸಾಗಣೆ ಪತ್ತೆ – 700 ಕ್ಕೂ ಹೆಚ್ಚು ಗೋಣಿ ಚೀಲ ವಶಕ್ಕೆ

ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…

1 day ago

ರಾಸಾಯನಿಕ ಮುಕ್ತ ಕೃಷಿಗೆ ಪ್ರಧಾನಿ ಮೋದಿ ಕರೆ

ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…

1 day ago

ವಳಲಂಬೆಯಲ್ಲಿ ಎ.19 ರಂದು ‘ಸಂಗೀತ ಸಂಭ್ರಮ’

ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…

2 days ago

ಹವಾಮಾನ ವರದಿ | 15-04-2026 | ಕರ್ನಾಟಕದಲ್ಲಿ ಬಿಸಿಗಾಳಿಯ ನಡುವೆ ಮಳೆಯ ಸುಳಿವು – ಏಪ್ರಿಲ್ 18 ರಿಂದ ಮಳೆ…!

ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…

2 days ago

ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!

ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…

2 days ago