Advertisement
ನಮ್ಮೂರ ಸುದ್ದಿ

ಕೆಎಸ್‍ಎಸ್ ಕಾಲೇಜು ಪ್ರಾಂಶುಪಾಲ ಮಂಜುನಾಥ ಭಟ್ ನಿವೃತ್ತಿ

Share

ಸುಬ್ರಹ್ಮಣ್ಯ : ಶ್ರೀ ಸುಬ್ರಹ್ಮಣ್ಯೇಶ್ವರ ಮಹಾ ವಿದ್ಯಾಲಯದಲ್ಲಿ ಪ್ರಾಂಶುಪಾಲರಾಗಿರುವ ಸಂಸ್ಕೃತ ವಿಭಾಗದ ಮುಖ್ಯಸ್ಥ ಪ್ರೊ. ಮಂಜುನಾಥ ಎನ್.ಭಟ್ ಅವರು ಸುಮಾರು 35 ವರ್ಷಗಳ ಸುದೀರ್ಘ ಸೇವೆಯಿಂದ ಎ.30ರಂದು ಸೇವಾನಿವೃತ್ತಿ ಹೊಂದಿದರು.  ಕಳೆದ ಎರಡು ತಿಂಗಳ ಹಿಂದೆ ಅಧಿಕಾರ ವಹಿಸಿಕೊಂಡಿದ್ದರು.

Advertisement
Advertisement

ಮೂಲತ: ಉತ್ತರ ಕನ್ನಡ ಜಿಲ್ಲೆಯ ಶಿರಸಿ ಸಮೀಪದ ಕರಸುಳ್ಳಿ ಗ್ರಾಮದ ಇವರು 1984ರಲ್ಲಿ ಶಿರಸಿಯ ಎಂ.ಎಂ ಆಟ್ಸ್ ಸೈನ್ಸ್ ಪದವಿ ಕಾಲೇಜಿನಲ್ಲಿ ಸಂಸ್ಕೃತ ವಿಭಾಗದ ಉಪನ್ಯಾಸಕರಾಗಿ 3 ತಿಂಗಳು ಸೇವೆ ಸಲ್ಲಿಸಿದ ಬಳಿಕ ಅದೇ ವರ್ಷ ಶ್ರೀ ಸುಬ್ರಹ್ಮಣ್ಯೇಶ್ವರ ಕಾಲೇಜಿಗೆ ಉಪನ್ಯಾಸಕರಾಗಿ ಸೇರ್ಪಡೆಗೊಂಡರು.

Advertisement

ರಾಷ್ಟ್ರಮಟ್ಟದ ಕಾರ್ಯಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಹಲವಾರು ಪ್ರಬಂಧಗಳನ್ನು ಮಂಡಿಸಿರುವರು. ಕುಸುಮ ಸಾರಂಗ ರಂಗ ಘಟಕಕ್ಕೆ ಸಹಕರಿಸುತ್ತ ಬಂದಿರುವ ಇವರು ಉತ್ತಮ ಕ್ರೀಡಾಪಟು ಕೂಡ ಆಗಿದ್ದಾರೆ. ಮಂಗಳೂರು ವಿ.ವಿ ಯ ಸಂಸ್ಕೃತ ವಿಭಾಗದ ಬೋರ್ಡ್ ಆಫ್ ಸ್ಟಡೀಸ್ ಮತ್ತು ಬೋರ್ಡ್ ಆಪ್ ಎಕ್ಸಾಮಿನೇಶನ್ ಅಧ್ಯಕ್ಷರಾಗಿ ಸುಬ್ರಹ್ಮಣ್ಯ ಆರೋಗ್ಯಧಾಮ ಸಂಸ್ಥೆಯ ಸದಸ್ಯರಾಗಿ ಗ್ರಾಮೀಣ ಭಾಗದಲ್ಲಿ 15ಕ್ಕೂ ಅಧಿಕ ವೈದ್ಯಕೀಯ ಶಿಬಿರಗಳನ್ನು ನಡೆಸಿರುವರು.  ಕುಕ್ಕೆ ಸುಬ್ರಹ್ಮಣ್ಯ ವಾರ್ಷಿಕ ಜಾತ್ರೋತ್ಸವ ಸಂದರ್ಭ ಸೇರಿದಂತೆ ಅನೇಕ ಕಾರ್ಯಕ್ರಮಗಳಲ್ಲಿ ಉದ್ಘೋಷಕರಾಗಿ ಕಾರ್ಯಕ್ರಮ ಆಯೋಜಕರಾಗಿ ದುಡಿದಿರುವರು. ಉಪನ್ಯಾಸಕ ವೃತ್ತಿ ಜತೆ ಪತ್ರಿಕೆಯ ವರದಿಗಾರರಾಗಿ 12 ವರ್ಷ ಕರ್ತವ್ಯ ನಿರ್ವಹಿಸಿರುವರು. ಬರಹಗಾರರು ಆಗಿರುವ ಇವರು ಬಡ ವಿದ್ಯಾರ್ಥಿಗಳಿಗೆ ಶಿಕ್ಷಣಕ್ಕೆ ಆರ್ಥಿಕ ನೆರವನ್ನು ನೀಡುತ್ತಿದ್ದರು.

ಪತ್ನಿ ಕುಸುಮಾ ಭಟ್ ಹಾಗೂ ಯುಎಸ್ ಎ ನಲ್ಲಿರುವ ಪುತ್ರ ಆದರ್ಶ ಅವರ ಜತೆ ಸುಖ ಸಂಸಾರ ನಡೆಸುತ್ತಿದ್ದಾರೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತಾಪಮಾನದ ಬರೆ…! ಎಳೆ ಅಡಿಕೆ ಬೀಳುತ್ತಿದೆ…! | ಮಳೆ ಬಾರದಿದ್ದರೆ ಸಂಕಷ್ಟ… ಮಳೆ ಬಂದರೂ ಕಷ್ಟ..! |

ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…

5 hours ago

Karnataka Weather | 05-05-2024 | ಮೋಡ-ಒಣ ಹವೆ | ಮೇ.6 ನಂತರವೇ ಉತ್ತಮ ಮಳೆ |

ಮೇ 6 ಅಥವಾ 7ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ…

6 hours ago

Karnataka Weather | 04-05-2024 | ರಾಜ್ಯದಲ್ಲಿ ಬಿಸಿಲು-ಮೋಡದ ವಾತಾವರಣ | ಮೇ 6 ರಿಂದ ಮುಂಗಾರು ಪೂರ್ವ ಮಳೆ ಆರಂಭ

ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…

1 day ago

ಕೊಕೋ ಧಾರಣೆ ಇಳಿಕೆ | ಒಮ್ಮೆಲೇ ಕುಸಿತ ಕಂಡ ಕೊಕೋ ಧಾರಣೆ |

ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.

1 day ago

ಮಳೆಯ ಜೊತೆಗೆ ಮಲೆನಾಡಲ್ಲಿ ಸಿಡಿಲಬ್ಬರ | ಸುಬ್ರಹ್ಮಣ್ಯದಲ್ಲಿ ಯುವಕ ಬಲಿ | ಮಡಿಕೇರಿಯಲ್ಲಿ ಕಾರ್ಮಿಕ ಗಂಭೀರ |

ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ  ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…

2 days ago

ವೆದರ್‌ ಮಿರರ್‌ | 03.05.2024 |ಮೇ. 4ರಿಂದ ಮೋಡ| ಮೇ.6 ರಿಂದ ಅಲ್ಲಲ್ಲಿ ಮಳೆ ನಿರೀಕ್ಷೆ

04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…

2 days ago