ಸುಬ್ರಹ್ಮಣ್ಯ : ಶ್ರೀ ಸುಬ್ರಹ್ಮಣ್ಯೇಶ್ವರ ಮಹಾ ವಿದ್ಯಾಲಯದಲ್ಲಿ ಪ್ರಾಂಶುಪಾಲರಾಗಿರುವ ಸಂಸ್ಕೃತ ವಿಭಾಗದ ಮುಖ್ಯಸ್ಥ ಪ್ರೊ. ಮಂಜುನಾಥ ಎನ್.ಭಟ್ ಅವರು ಸುಮಾರು 35 ವರ್ಷಗಳ ಸುದೀರ್ಘ ಸೇವೆಯಿಂದ ಎ.30ರಂದು ಸೇವಾನಿವೃತ್ತಿ ಹೊಂದಿದರು. ಕಳೆದ ಎರಡು ತಿಂಗಳ ಹಿಂದೆ ಅಧಿಕಾರ ವಹಿಸಿಕೊಂಡಿದ್ದರು.
ಮೂಲತ: ಉತ್ತರ ಕನ್ನಡ ಜಿಲ್ಲೆಯ ಶಿರಸಿ ಸಮೀಪದ ಕರಸುಳ್ಳಿ ಗ್ರಾಮದ ಇವರು 1984ರಲ್ಲಿ ಶಿರಸಿಯ ಎಂ.ಎಂ ಆಟ್ಸ್ ಸೈನ್ಸ್ ಪದವಿ ಕಾಲೇಜಿನಲ್ಲಿ ಸಂಸ್ಕೃತ ವಿಭಾಗದ ಉಪನ್ಯಾಸಕರಾಗಿ 3 ತಿಂಗಳು ಸೇವೆ ಸಲ್ಲಿಸಿದ ಬಳಿಕ ಅದೇ ವರ್ಷ ಶ್ರೀ ಸುಬ್ರಹ್ಮಣ್ಯೇಶ್ವರ ಕಾಲೇಜಿಗೆ ಉಪನ್ಯಾಸಕರಾಗಿ ಸೇರ್ಪಡೆಗೊಂಡರು.
ರಾಷ್ಟ್ರಮಟ್ಟದ ಕಾರ್ಯಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಹಲವಾರು ಪ್ರಬಂಧಗಳನ್ನು ಮಂಡಿಸಿರುವರು. ಕುಸುಮ ಸಾರಂಗ ರಂಗ ಘಟಕಕ್ಕೆ ಸಹಕರಿಸುತ್ತ ಬಂದಿರುವ ಇವರು ಉತ್ತಮ ಕ್ರೀಡಾಪಟು ಕೂಡ ಆಗಿದ್ದಾರೆ. ಮಂಗಳೂರು ವಿ.ವಿ ಯ ಸಂಸ್ಕೃತ ವಿಭಾಗದ ಬೋರ್ಡ್ ಆಫ್ ಸ್ಟಡೀಸ್ ಮತ್ತು ಬೋರ್ಡ್ ಆಪ್ ಎಕ್ಸಾಮಿನೇಶನ್ ಅಧ್ಯಕ್ಷರಾಗಿ ಸುಬ್ರಹ್ಮಣ್ಯ ಆರೋಗ್ಯಧಾಮ ಸಂಸ್ಥೆಯ ಸದಸ್ಯರಾಗಿ ಗ್ರಾಮೀಣ ಭಾಗದಲ್ಲಿ 15ಕ್ಕೂ ಅಧಿಕ ವೈದ್ಯಕೀಯ ಶಿಬಿರಗಳನ್ನು ನಡೆಸಿರುವರು. ಕುಕ್ಕೆ ಸುಬ್ರಹ್ಮಣ್ಯ ವಾರ್ಷಿಕ ಜಾತ್ರೋತ್ಸವ ಸಂದರ್ಭ ಸೇರಿದಂತೆ ಅನೇಕ ಕಾರ್ಯಕ್ರಮಗಳಲ್ಲಿ ಉದ್ಘೋಷಕರಾಗಿ ಕಾರ್ಯಕ್ರಮ ಆಯೋಜಕರಾಗಿ ದುಡಿದಿರುವರು. ಉಪನ್ಯಾಸಕ ವೃತ್ತಿ ಜತೆ ಪತ್ರಿಕೆಯ ವರದಿಗಾರರಾಗಿ 12 ವರ್ಷ ಕರ್ತವ್ಯ ನಿರ್ವಹಿಸಿರುವರು. ಬರಹಗಾರರು ಆಗಿರುವ ಇವರು ಬಡ ವಿದ್ಯಾರ್ಥಿಗಳಿಗೆ ಶಿಕ್ಷಣಕ್ಕೆ ಆರ್ಥಿಕ ನೆರವನ್ನು ನೀಡುತ್ತಿದ್ದರು.
ಪತ್ನಿ ಕುಸುಮಾ ಭಟ್ ಹಾಗೂ ಯುಎಸ್ ಎ ನಲ್ಲಿರುವ ಪುತ್ರ ಆದರ್ಶ ಅವರ ಜತೆ ಸುಖ ಸಂಸಾರ ನಡೆಸುತ್ತಿದ್ದಾರೆ.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…