ಸುಬ್ರಹ್ಮಣ್ಯ :ವಿದ್ಯಾರ್ಥಿಗಳು. ಶೈಕ್ಷಣಿಕ ವರ್ಷದಲ್ಲಿ ಸೇವಾ ಚಟುವಟಿಕೆಯಲ್ಲಿ ತೊಡಗಿದರೆ ಅದು ಜೀವಿತ ಅವಧಿಯ ತನಕವೂ ಸಹಾಯಕ್ಕೆ ಬರುತ್ತದೆ ಎಂದು ಕೆಎಸ್ಎಸ್ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೋ ರಂಗಯ್ಯ ಶೆಟ್ಟಿಗಾರ್ ಹೇಳಿದರು.
ಕುಕ್ಕೆ ಶ್ರೀ ಸುಬ್ರಹ್ಮಣೇಶ್ವರ ಮಹಾವಿದ್ಯಾಲಯದಲ್ಲಿ ಕಾಲೇಜಿನ ರೋವರ್ಸ್ ರೇಂಜರ್ಸ್ ಘಟಕದ ವತಿಯಿಂದ ವಿದ್ಯಾರ್ಥಿಗಳಿಗಾಗಿ ನಡೆದ ಎರಡು ದಿನಗಳ ವಿಶೇಷ ತರಬೇತಿ ಶಿಬಿರ ಕಾರ್ಯಕ್ರಮವನ್ನು ಗಿಡ ನೆಡುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳಲ್ಲಿ ಶಿಸ್ತು ಮತ್ತು ಸೇವಾಮನೋಭಾವನೆ ಉಂಟು ಮಾಡುವಲ್ಲಿ ರೋವರ್ಸ್ ರೇಂಜರ್ಸ್ ಕೊಡುಗೆ ಮಹತ್ವದ್ದು ಎಂವರು ಹೇಳಿದರು.
ಕಾಲೇಜಿನ ಉಪಪ್ರಾಂಶುಪಾಲೆ ಡಾ. ಉಷಾ ಅಂಕೋಲ್ಕರ್ ಅಧ್ಯಕ್ಷತೆ ವಹಿಸಿದ್ದರು. ರೇಂಜರ್ಸ್ ರೋವರ್ಸ್ನ ಪಂಜ ಸ್ಥಳಿಯ ಸಂಸ್ಥೆಗಳ ತರಬೇತುದಾರ ದಾಮೋದರ್ ನೇರಳೆ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಶಿಬಿರಾರ್ಥಿಗಳಿಗೆ ಉಪಯುಕ್ತ ಮಾಹಿತಿಯನ್ನು ನೀಡಿದರು. ಕಾಲೇಜು ರೋವರ್ಸ್ನ ಮುಖ್ಯಸ್ಥರಾದ ಮನೋಹರ್,ರಾಮ್ಪ್ರಸಾದ್ ಎಸ್, ಹಾಗೂ ರೇಂಜರ್ಸ್ನ ಮುಖ್ಯಸ್ಥರಾದ ಪ್ರಮೀಳ, ಸುಮಿತ್ರ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಧನ್ಯ ಸ್ವಾಗತಿಸಿ, ಪವಿತ್ರ ವಂದಿಸಿದರು. ಅಕ್ಷತಾ.ಪಿಸಿ ಕಾರ್ಯಕ್ರಮ ನಿರೂಪಿಸಿದರು.
ಅತ್ಯಾಧುನಿಕವಾದ ಪ್ರೋಟಾನ್ ರೇಡಿಯೋ ಥೆರಪಿ ಮೂಲಕ ಕ್ಯಾನ್ಸರ್ ಶುಶ್ರೂಷೆಗೆ ಅಗತ್ಯ ಆರ್ಥಿಕ ನೆರವು…
ರಾಜ್ಯದಲ್ಲಿ ನೈರುತ್ಯ ಮುಂಗಾರು ಉತ್ತರ ಒಳನಾಡಿನಲ್ಲಿ ತೀವ್ರವಾಗಿದ್ದು, ದಕ್ಷಿಣ ಒಳನಾಡಿನಲ್ಲಿ ಸಕ್ರಿಯವಾಗಿದ್ದು, ಕರಾವಳಿಯಲ್ಲಿ…
ಹಾವೇರಿ ಜಿಲ್ಲೆಯಲ್ಲಿರುವ ಅನಕ್ಷರಸ್ಥರನ್ನು ಅಕ್ಷರಸ್ಥರನ್ನಾಗಿ ಮಾಡಲು ನಿರಂತರವಾಗಿ ಪ್ರಯತ್ನಿಸಲಾಗುತ್ತಿದ್ದು, ಸಾಕ್ಷರತಾ ಕಾರ್ಯಕ್ರಮದಡಿ ಜಿಲ್ಲೆಯ…
ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳೀಯು ಪಶ್ಚಿಮಾಭಿಮುಖವಾಗಿ ಚಲಿಸುತ್ತಿದ್ದು, ಇದೇ ಸಂದರ್ಭದಲ್ಲಿ ಬಂಗಾಳಕೊಲ್ಲಿಯಲ್ಲೂ ಸಣ್ಣ…
ಭಾರತದಲ್ಲಿ ಉತ್ಪಾದನೆ ಆಗುತ್ತಿರುವ ಒಟ್ಟು ಅಡಿಕೆಯ ಪ್ರಮಾಣ ಸುಮಾರು ಹದಿನಾರು ಲಕ್ಷ ಟನ್,…
1,486 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಚೆನಾಬ್ ಸೇತುವೆಯನ್ನು ಸರ್ಕಾರವು "ಇತ್ತೀಚಿನ ಇತಿಹಾಸದಲ್ಲಿ…