ಸುಬ್ರಹ್ಮಣ್ಯ :ವಿದ್ಯಾರ್ಥಿಗಳು. ಶೈಕ್ಷಣಿಕ ವರ್ಷದಲ್ಲಿ ಸೇವಾ ಚಟುವಟಿಕೆಯಲ್ಲಿ ತೊಡಗಿದರೆ ಅದು ಜೀವಿತ ಅವಧಿಯ ತನಕವೂ ಸಹಾಯಕ್ಕೆ ಬರುತ್ತದೆ ಎಂದು ಕೆಎಸ್ಎಸ್ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೋ ರಂಗಯ್ಯ ಶೆಟ್ಟಿಗಾರ್ ಹೇಳಿದರು.
ಕುಕ್ಕೆ ಶ್ರೀ ಸುಬ್ರಹ್ಮಣೇಶ್ವರ ಮಹಾವಿದ್ಯಾಲಯದಲ್ಲಿ ಕಾಲೇಜಿನ ರೋವರ್ಸ್ ರೇಂಜರ್ಸ್ ಘಟಕದ ವತಿಯಿಂದ ವಿದ್ಯಾರ್ಥಿಗಳಿಗಾಗಿ ನಡೆದ ಎರಡು ದಿನಗಳ ವಿಶೇಷ ತರಬೇತಿ ಶಿಬಿರ ಕಾರ್ಯಕ್ರಮವನ್ನು ಗಿಡ ನೆಡುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳಲ್ಲಿ ಶಿಸ್ತು ಮತ್ತು ಸೇವಾಮನೋಭಾವನೆ ಉಂಟು ಮಾಡುವಲ್ಲಿ ರೋವರ್ಸ್ ರೇಂಜರ್ಸ್ ಕೊಡುಗೆ ಮಹತ್ವದ್ದು ಎಂವರು ಹೇಳಿದರು.
ಕಾಲೇಜಿನ ಉಪಪ್ರಾಂಶುಪಾಲೆ ಡಾ. ಉಷಾ ಅಂಕೋಲ್ಕರ್ ಅಧ್ಯಕ್ಷತೆ ವಹಿಸಿದ್ದರು. ರೇಂಜರ್ಸ್ ರೋವರ್ಸ್ನ ಪಂಜ ಸ್ಥಳಿಯ ಸಂಸ್ಥೆಗಳ ತರಬೇತುದಾರ ದಾಮೋದರ್ ನೇರಳೆ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಶಿಬಿರಾರ್ಥಿಗಳಿಗೆ ಉಪಯುಕ್ತ ಮಾಹಿತಿಯನ್ನು ನೀಡಿದರು. ಕಾಲೇಜು ರೋವರ್ಸ್ನ ಮುಖ್ಯಸ್ಥರಾದ ಮನೋಹರ್,ರಾಮ್ಪ್ರಸಾದ್ ಎಸ್, ಹಾಗೂ ರೇಂಜರ್ಸ್ನ ಮುಖ್ಯಸ್ಥರಾದ ಪ್ರಮೀಳ, ಸುಮಿತ್ರ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಧನ್ಯ ಸ್ವಾಗತಿಸಿ, ಪವಿತ್ರ ವಂದಿಸಿದರು. ಅಕ್ಷತಾ.ಪಿಸಿ ಕಾರ್ಯಕ್ರಮ ನಿರೂಪಿಸಿದರು.
ಭಾರತದಲ್ಲಿ ಹೆಚ್ಚುತ್ತಿರುವ ಅತಿವೃಷ್ಟಿ, ಬರ ಮತ್ತು ಉಷ್ಣ ಅಲೆಗಳಂತಹ ತೀವ್ರ ಹವಾಮಾನ ಘಟನೆಗಳಿಗೆ…
ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…
18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…
ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…
ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…
2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…