Advertisement
ಸಾಂಸ್ಕೃತಿಕ

ಕೆಎಸ್‍ಎಸ್ ಕಾಲೇಜು ಸಂಸ್ಕೃತಿ ಸೌರಭ ತಂಡದಿಂದ ದೆಹಲಿಯಲ್ಲಿ ಸಾಂಸ್ಕೃತಿಕ ಪ್ರದರ್ಶನ

Share

ಸುಬ್ರಹ್ಮಣ್ಯ: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ದೆಹಲಿ ಕರ್ನಾಟಕ ಸಂಘ ನವದೆಹಲಿಯಲ್ಲಿ ಆಯೋಜಿಸಿದ್ದ ಸಾಂಸ್ಕøತಿಕ ಕಾರ್ಯಕ್ರಮದಲ್ಲಿ ಸುಬ್ರಹ್ಮಣ್ಯ ಕೆಎಸ್‍ಎಸ್ ಕಾಲೇಜಿನ ಸಂಸ್ಕøತಿ ಸೌರಭ ಕಲಾವಿದರ ತಂಡ ಭಾಗವಹಿಸಿ ಅತ್ಯುತ್ತಮ ಪ್ರದರ್ಶನ ನೀಡಿ ಜನ ಮೆಚ್ಚುಗೆಗೆ ಪಾತ್ರವಾಗಿದೆ.
ತಂಡವು ದೇಶದ ವಿವಿಧ ರಾಜ್ಯಗಳ ಜಾನಪದ ನೃತ್ಯಗಳನ್ನು ಪ್ರಸ್ತುತ ಪಡಿಸಿತು. ತಂಡದ ಸಂಯೋಜಕರಾದ ಪ್ರೊ.ಬಾಲಕೃಷ್ಣ ಪೈ ಅವರ ಮಾರ್ಗದರ್ಶನದಲ್ಲಿ ನೃತ್ಯಗುರು ಪ್ರಮೋದ್ ಕುಮಾರ್ ರೈ ಬೆಳ್ಳಾರೆ ನಿರ್ದೇಶನದಲ್ಲಿ ಅದಿತಿ ರೈ ಅವರ ನಾಯಕತ್ವದಲ್ಲಿ 45 ಮಂದಿ ಸದಸ್ಯರಿರುವ ಕಲಾವಿದರ ತಂಡವು ವಿವಿಧ ಕಾರ್ಯಕ್ರಮ ನೀಡಿತು.

ಭರತನಾಟ್ಯ, ಕರಾವಳಿಯ ಗಂಡುಕಲೆ ಯಕ್ಷಗಾನ, ಶ್ರೀಲಂಕಾದ ನವಿಲು ನೃತ್ಯ, ಗಣೇಶ ಸ್ತುತಿ, ಕುವೆಂಪು ಗೀತೆಗಳ ನೃತ್ಯ, ಪಾಶ್ಚಾತ್ಯ ನೃತ್ಯಗಳನ್ನು ಪ್ರಸ್ತುತ ಪಡಿಸಿ ಯಶಸ್ವಿ ಕಲಾವಿದರ ತಂಡ ಎಂದೆನಿಸಿಕೊಂಡಿತು. ಕಲಾವಿದ ಸುಜಿತ್ ಅವರು ಕುವೆಂಪು ಹಾಡಿಗೆ ರಚಿಸಿದ ಕುವೆಂಪುರವರ ಚಿತ್ರ ದೆಹಲಿ ಕರ್ನಾಟಕ ಸಂಘಕ್ಕೆ ಕೊಡುಗೆಯಾಗಿ ನೀಡಲಾಯಿತು.
ಸಂಸ್ಕøತಿ ಸೌರಭವ ತಂಡದ ಸಂಯೋಜಕ ಪ್ರೊ ಬಾಲಕೃಷ್ಣ ಪೈ ಅವರನ್ನು ದೆಹಲಿ ಕರ್ನಾಟಕ ಸಂಘದ ಪರವಾಗಿ ಸಮ್ಮಾನಿಸಿ ಗೌರವಿಸಲಾಯಿತು. ಭಾಗವಹಿಸಿದ ಎಲ್ಲ ಕಲಾವಿದರಿಗೆ ಪ್ರಶಸ್ತಿ ಪತ್ರಗಳನ್ನು ನೀಡಿ ಗೌವಿಸಲಾಯಿತು. ದೆಹಲಿ ಕರ್ನಾಟಕ ಸಂಘದ ಅಧ್ಯಕ್ಷ ಡಾ. ವೆಂಕಟಾಚಲ ಹೆಗ್ಡೆ, ಪ್ರಧಾನ ಕಾರ್ಯದರ್ಶಿ ಸಿ.ಎಂ ನಾಗರಾಜ್, ಜತೆ ಕಾರ್ಯದರ್ಶಿ ಪೂಜಾ ಪ್ರದೀಪ್ ರಾವ್, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಮೋಹನದಾಸ್ ರೈ, ಸೌಮ್ಯ ಬಿ ಪೈ ಮೊದಲಾದವರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Team the rural mirror

Published by
Team the rural mirror

Recent Posts

ತೋಟಗಾರಿಕಾ ಬೆಳೆಗಾರರ ಪರ ಲೋಕಸಭೆಯಲ್ಲಿ ಧ್ವನಿ – ಹವಾಮಾನ ಆಧಾರಿತ ಬೆಳೆ ವಿಮೆ ಮರುಪರಿಷ್ಕರಣೆಗೆ ಕ್ಯಾ. ಚೌಟ ಒತ್ತಾಯ

ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…

34 minutes ago

ಅಡಿಕೆ ಅಕ್ರಮ ಆಮದು ಕಡಿವಾಣ – ರೋಸ್ಟೆಡ್ ಅಡಿಕೆಗೆ ₹351 ಕನಿಷ್ಠ ದರ – ಕಸ್ಟಮ್ಸ್‌ ನಿಗಾ ಎಂದ ಕೇಂದ್ರ

ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್‌ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…

9 hours ago

ತೆಂಗು ಬೆಳೆಗೆ ವಿಮೆ : ಕೇಂದ್ರದ ಮಹತ್ವದ ಉತ್ತರ

ತೆಂಗು ಬೆಳೆಯನ್ನು PMFBY ಅಥವಾ RWBCIS ಅಡಿಯಲ್ಲಿ ವಿಮಾ ವ್ಯಾಪ್ತಿಗೆ ತರುವ ಅಧಿಕಾರ…

10 hours ago

ಹವಾಮಾನ ವರದಿ | 11-08-2026 | ಕರ್ನಾಟಕದ ಹವಾಮಾನದಲ್ಲಿ ಮುಂದಿನ ದಿನಗಳಲ್ಲಿ ಏನು ಬದಲಾವಣೆ ?

ಕರಾವಳಿ ಜಿಲ್ಲೆಗಳಲ್ಲಿ ಮಳೆಯ ನಡುವೆ ಹೆಚ್ಚಿನ ಬಿಡುವಿನ ಅವಧಿಯೊಂದಿಗೆ ಬಿಸಿಲು–ಮೋಡದ ವಾತಾವರಣ ಮುಂದುವರಿಯಲಿದ್ದು,…

10 hours ago

ಬಿ.ಎಸ್‌ಸಿ. ಕೃಷಿ ನಂತರ ಏನು ? ಉದ್ಯೋಗ, ಉದ್ಯಮ ಮತ್ತು ಉನ್ನತ ಶಿಕ್ಷಣದ ಅತ್ಯುತ್ತಮ ಅವಕಾಶಗಳು ಇಲ್ಲಿವೆ

ಬಿ.ಎಸ್‌ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…

1 day ago

ಅಡಿಕೆ–ಕಾಳುಮೆಣಸು ಬೆಳೆ ವಿಮೆ: ರೈತರ ನೋಂದಣಿಗೆ ಆ.17 ಅಂತಿಮ ದಿನ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…

1 day ago