Advertisement

ಕೆಟ್ಟುಹೋದ ಪರಿವರ್ತಕ ಬದಲಿಸಲು ಪರಪ್ಪು ಪ್ರದೇಶದ ಬಳಕೆದಾರರಿಂದ ಆಗ್ರಹ

Share

ಕಡಬ: ಕಳೆದ ಕೆಲವು ಸಮಯದಿಂದ ಕಡಬದ ಪರಪ್ಪು ಪ್ರದೇಶದಲ್ಲಿನ ವಿದ್ಯುತ್ ಪರಿವರ್ತಕ ಕೆಟ್ಟು ಹೋಗಿ ನಿರಂತರವಾಗಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಕಡಬ ಮೆಸ್ಕಾಂ ಉಪ ವಿಭಾಗದ ಕಚೇರಿಗೆ ತೆರಳಿದ ಬಳಕೆದಾರರು ಸಮಸ್ಯೆ ಬಗೆಹರಿಸುವಂತೆ ಅಧಿಕಾರಿಗಳನ್ನು ಆಗ್ರಹಿಸಿದರು.

Advertisement
Advertisement
Advertisement
Advertisement

ಬಳಕೆದಾರರ ನಿಯೋಗದ ನೇತೃತ್ವ ವಹಿಸಿದ್ದ ಸ್ಥಳೀಯ ಮುಂದಾಳು ವೇಣುಗೋಪಾಲ ರೈ ಕೊಲ್ಲಡ್ಕ ಅವರು ಕಡಬ ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಸಜಿಕುಮಾರ್ ಅವರಿಗೆ ಮನವಿ ಸಲ್ಲಿಸಿ ಮಾತನಾಡಿ ವಿದ್ಯುತ್ ಸಮಸ್ಯೆಯಿಂದಾಗಿ ನಮ್ಮ ಪರಿಸರದಲ್ಲಿ ಅಡಿಕೆ ತೋಟಗಳು ಹಾಗೂ ಇತರ ಕೃಷಿಗಳು ನೀರಿಲ್ಲದೇ ಕರಟಿ ಹೋಗುತ್ತಿವೆ. ನೀರಾವರಿ ಪಂಪ್‍ಗಳು ಚಾಲೂ ಆಗುತ್ತಿಲ್ಲ. ಮೊದಲೇ ಧಾರಣೆ ಕುಸಿತ, ಕಾರ್ಮಿಕರ ಸಮಸ್ಯೆಯಿಂದಾಗಿ ಕಂಗೆಟ್ಟಿರುವ ಕೃಷಿಕರು ವಿದ್ಯುತ್ ಸಮಸ್ಯೆಯ ಹೊಡೆತಕ್ಕೆ ಬಸವಳಿದು ಹೋಗಿದ್ದಾರೆ. ಪರಪ್ಪು, ಕೊಲ್ಲಡ್ಕ, ಕೋಡಿ, ಕಜೆಮಾರು, ಪಲ್ಲತ್ತಾರು ಪ್ರದೇಶಕ್ಕೆ ವಿದ್ಯುತ್ ಪೂರೈಸುವ ಪರಿವರ್ತಕ ಕೆಟ್ಟು ಹೋಗಿರುವ ಕುರಿತು ಮೆಸ್ಕಾಂ ಗೆ ದೂರು ನೀಡಿ 15 ದಿನ ಕಳೆದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಸ್ಥಳೀಯ ಸುಮಾರು 36 ಮನೆಯವರು ಕುಡಿಯಲೂ ನೀರಿಲ್ಲದೆ ಪರದಾಡುತ್ತಿದ್ದಾರೆ ಎಂದು ದೂರಿದರು. ಕೂಡಲೇ ಹೊಸ ಪರಿವರ್ತಕ ಅಳವಡಿಸಲು ಕ್ರಮ ಕೈಗೊಳ್ಳದೇ ಇದ್ದಲ್ಲಿ ಊರಿನ ಎಲ್ಲಾ ವಿದ್ಯುತ್ ಬಳೆಕೆದಾರರನ್ನು ಸೇರಿಸಿಕೊಂಡು ಕಡಬ ಮೆಸ್ಕಾಂ ಕಚೇರಿ ಮುಂದೆ ಧರಣಿ ನಡೆಸುವುದಾಗಿ ಅವರು ಎಚ್ಚರಿಸಿದರು.
ಕೃಷಿಕ ವಾಸುದೇವ ಗೌಡ ಕೋಡಿ ಅವರು ಮಾತನಾಡಿ ನಾವು ಹಲವು ವರ್ಷ ಬೆವರು ಸುರಿಸಿ ಮಾಡಿದ ಕೃಷಿಗೆ ನೀರಿಲ್ಲದೆ ನಮ್ಮ ಕಣ್ಣೆದುರೇ ಕರಟಿ ಹೋಗುತ್ತಿದೆ. ಜನರಿಗೆ ಕುಡಿಯಲೂ ನೀರಿಲ್ಲದಂತಾಗಿದೆ ಎಂದು ಆಕ್ರೋಶವ್ಯಕ್ತಪಡಿಸಿದರು. ಗ್ರಾ.ಪಂ.ಸದಸ್ಯ ಹರ್ಷ ಕೋಡಿ, ಸ್ಥಳೀಯ ಪ್ರಮುಖರಾದ ಜಯರಾಮ ಗೌಡ ಅರ್ತಿಲ, ಮೋಹನ ಗೌಡ ಗೋಡಾಲ್, ಗಿರಿಧರ ರೈ ಪಜಕಳ, ಪುರಂದರ ರೈ ಪಿಜಕಳ, ಉಮೇಶ್ ನಾಯ್ಕ, ಪ್ರಸಾದ ಗೌಡ ಅಲುಂಗೂರು, ಯತೀಂದ್ರ ಗೌಡ ಗೋಡಾಲ್ ಮುಂತಾದವರು ನಿಯೋಗದಲ್ಲಿದ್ದರು.
ಮನವಿಗೆ ಪ್ರತಿಕ್ರಿಯಿಸಿ ಮಾತನಾಡಿದ ಕಡಬ ಮೆಸ್ಕಾಂ ಎಇಇ ಸಜಿಕುಮಾರ್ ಅವರು ಸದ್ಯಕ್ಕೆ ತಾತ್ಕಾಲಿಕ ನೆಲೆಯಲ್ಲಿ 3 ಫೇಸ್ ವಿದ್ಯುತ್ ನೀಡಲು ವ್ಯವಸ್ಥೆ ಕಲ್ಪಿಸಿ 2 ದಿನಗಳೊಳಗೆ ಹೆಚ್ಚು ಸಾಮರ್ಥ್ಯದ ಪರಿವರ್ತಕ ಅಳವಡಿಸಿ ಸಮಸ್ಯೆ ಬಗೆಹರಿಸಿಕೊಡುವುದಾಗಿ ಭರವಸೆ ನೀಡಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
Team the rural mirror

Published by
Team the rural mirror

Recent Posts

ಎಲ್ಲಾ ಕೃಷಿ ಆದಾಯವನ್ನು ಬ್ಯಾಂಕ್‌ ಉಳಿತಾಯ ಖಾತೆ ಮೂಲಕ ವ್ಯವಹಾರ ಮಾಡಬೇಕು ಏಕೆ..?

ಅಲ್ಪಾವಧಿ ಬೆಳೆ ಸಾಲದ ಬಗ್ಗೆ ಕಳೆದ ವಾರ ತಿಳಿಸಲಾಗಿತ್ತು. ಅದರ ಮುಂದುವರಿದ ಭಾಗವಾಗಿ…

8 hours ago

ತುಮಕೂರು ಜಿಲ್ಲೆ | 10 ಬೆಂಬಲ ಬೆಲೆ ಖರೀದಿ ಕೇಂದ್ರಗಳಲ್ಲಿ ನೋಂದಣಿ ಪ್ರಕ್ರಿಯೆ ಆರಂಭ

ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಈಗಾಗಲೇ ತುಮಕೂರು ಜಿಲ್ಲೆಯಲ್ಲಿ ತೆರೆದಿರುವ 10…

8 hours ago

ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ  ಬೆಳೆಗಳಿಗೆ ರಾಸಾಯನಿಕ ಬಳಸಬೇಡಿ

ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ ರೈತರು ತಮ್ಮ ಬೆಳೆಗಳಲ್ಲಿ ಹೆಚ್ಚಿನ ರಾಸಾಯನಿಕಗಳು…

8 hours ago

ಕಾರವಾರದಲ್ಲಿ ಎ.18-22 ವರೆಗೆ ಕರಾವಳಿ ಉತ್ಸವ

ಕಾರವಾರದ ರವೀಂದ್ರನಾಥ್ ಟಾಗೋರ್ ಕಡಲ ತೀರದ ಮಯೂರ ವರ್ಮ ವೇದಿಕೆಯಲ್ಲಿ ಏಪ್ರಿಲ್ 18…

8 hours ago

ಕೋಲಾರ ಜಿಲ್ಲೆ | ಒತ್ತುವರಿಯಾಗಿರುವ ಕೆರೆಗಳನ್ನು ಆದ್ಯತೆ ಮೇರೆಗೆ ತೆರವುಗಳಿಸಲು ಕ್ರಮ

ಕೋಲಾರ ಜಿಲ್ಲೆಯಲ್ಲಿ ಒತ್ತುವರಿಯಾಗಿರುವ ಕೆರೆಗಳನ್ನು ಆದ್ಯತೆ ಮೇರೆಗೆ ತೆರವುಗಳಿಸಲು ಕ್ರಮ ಕೈಗೊಳ್ಳಬೇಕು ಎಂದು…

8 hours ago

ತೆಂಗು ಉತ್ಪಾದನೆ | ಭಾರತ ವಿಶ್ವದಲ್ಲೇ ಪ್ರಥಮ

ತೆಂಗು ಬೆಳೆ ಉತ್ಪಾದನೆ ಹೆಚ್ಚಿಸಲು ಕೇಂದ್ರ ಸರ್ಕಾರ ಹಲವು ಯೋಜನೆಗಳನ್ನು ಕೈಗೊಂಡಿದ್ದು, ವಿಶ್ವದಲ್ಲೇ…

8 hours ago