Advertisement

ಕೆಟ್ಟುಹೋದ ಪರಿವರ್ತಕ ಬದಲಿಸಲು ಪರಪ್ಪು ಪ್ರದೇಶದ ಬಳಕೆದಾರರಿಂದ ಆಗ್ರಹ

Share

ಕಡಬ: ಕಳೆದ ಕೆಲವು ಸಮಯದಿಂದ ಕಡಬದ ಪರಪ್ಪು ಪ್ರದೇಶದಲ್ಲಿನ ವಿದ್ಯುತ್ ಪರಿವರ್ತಕ ಕೆಟ್ಟು ಹೋಗಿ ನಿರಂತರವಾಗಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಕಡಬ ಮೆಸ್ಕಾಂ ಉಪ ವಿಭಾಗದ ಕಚೇರಿಗೆ ತೆರಳಿದ ಬಳಕೆದಾರರು ಸಮಸ್ಯೆ ಬಗೆಹರಿಸುವಂತೆ ಅಧಿಕಾರಿಗಳನ್ನು ಆಗ್ರಹಿಸಿದರು.

Advertisement

ಬಳಕೆದಾರರ ನಿಯೋಗದ ನೇತೃತ್ವ ವಹಿಸಿದ್ದ ಸ್ಥಳೀಯ ಮುಂದಾಳು ವೇಣುಗೋಪಾಲ ರೈ ಕೊಲ್ಲಡ್ಕ ಅವರು ಕಡಬ ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಸಜಿಕುಮಾರ್ ಅವರಿಗೆ ಮನವಿ ಸಲ್ಲಿಸಿ ಮಾತನಾಡಿ ವಿದ್ಯುತ್ ಸಮಸ್ಯೆಯಿಂದಾಗಿ ನಮ್ಮ ಪರಿಸರದಲ್ಲಿ ಅಡಿಕೆ ತೋಟಗಳು ಹಾಗೂ ಇತರ ಕೃಷಿಗಳು ನೀರಿಲ್ಲದೇ ಕರಟಿ ಹೋಗುತ್ತಿವೆ. ನೀರಾವರಿ ಪಂಪ್‍ಗಳು ಚಾಲೂ ಆಗುತ್ತಿಲ್ಲ. ಮೊದಲೇ ಧಾರಣೆ ಕುಸಿತ, ಕಾರ್ಮಿಕರ ಸಮಸ್ಯೆಯಿಂದಾಗಿ ಕಂಗೆಟ್ಟಿರುವ ಕೃಷಿಕರು ವಿದ್ಯುತ್ ಸಮಸ್ಯೆಯ ಹೊಡೆತಕ್ಕೆ ಬಸವಳಿದು ಹೋಗಿದ್ದಾರೆ. ಪರಪ್ಪು, ಕೊಲ್ಲಡ್ಕ, ಕೋಡಿ, ಕಜೆಮಾರು, ಪಲ್ಲತ್ತಾರು ಪ್ರದೇಶಕ್ಕೆ ವಿದ್ಯುತ್ ಪೂರೈಸುವ ಪರಿವರ್ತಕ ಕೆಟ್ಟು ಹೋಗಿರುವ ಕುರಿತು ಮೆಸ್ಕಾಂ ಗೆ ದೂರು ನೀಡಿ 15 ದಿನ ಕಳೆದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಸ್ಥಳೀಯ ಸುಮಾರು 36 ಮನೆಯವರು ಕುಡಿಯಲೂ ನೀರಿಲ್ಲದೆ ಪರದಾಡುತ್ತಿದ್ದಾರೆ ಎಂದು ದೂರಿದರು. ಕೂಡಲೇ ಹೊಸ ಪರಿವರ್ತಕ ಅಳವಡಿಸಲು ಕ್ರಮ ಕೈಗೊಳ್ಳದೇ ಇದ್ದಲ್ಲಿ ಊರಿನ ಎಲ್ಲಾ ವಿದ್ಯುತ್ ಬಳೆಕೆದಾರರನ್ನು ಸೇರಿಸಿಕೊಂಡು ಕಡಬ ಮೆಸ್ಕಾಂ ಕಚೇರಿ ಮುಂದೆ ಧರಣಿ ನಡೆಸುವುದಾಗಿ ಅವರು ಎಚ್ಚರಿಸಿದರು.
ಕೃಷಿಕ ವಾಸುದೇವ ಗೌಡ ಕೋಡಿ ಅವರು ಮಾತನಾಡಿ ನಾವು ಹಲವು ವರ್ಷ ಬೆವರು ಸುರಿಸಿ ಮಾಡಿದ ಕೃಷಿಗೆ ನೀರಿಲ್ಲದೆ ನಮ್ಮ ಕಣ್ಣೆದುರೇ ಕರಟಿ ಹೋಗುತ್ತಿದೆ. ಜನರಿಗೆ ಕುಡಿಯಲೂ ನೀರಿಲ್ಲದಂತಾಗಿದೆ ಎಂದು ಆಕ್ರೋಶವ್ಯಕ್ತಪಡಿಸಿದರು. ಗ್ರಾ.ಪಂ.ಸದಸ್ಯ ಹರ್ಷ ಕೋಡಿ, ಸ್ಥಳೀಯ ಪ್ರಮುಖರಾದ ಜಯರಾಮ ಗೌಡ ಅರ್ತಿಲ, ಮೋಹನ ಗೌಡ ಗೋಡಾಲ್, ಗಿರಿಧರ ರೈ ಪಜಕಳ, ಪುರಂದರ ರೈ ಪಿಜಕಳ, ಉಮೇಶ್ ನಾಯ್ಕ, ಪ್ರಸಾದ ಗೌಡ ಅಲುಂಗೂರು, ಯತೀಂದ್ರ ಗೌಡ ಗೋಡಾಲ್ ಮುಂತಾದವರು ನಿಯೋಗದಲ್ಲಿದ್ದರು.
ಮನವಿಗೆ ಪ್ರತಿಕ್ರಿಯಿಸಿ ಮಾತನಾಡಿದ ಕಡಬ ಮೆಸ್ಕಾಂ ಎಇಇ ಸಜಿಕುಮಾರ್ ಅವರು ಸದ್ಯಕ್ಕೆ ತಾತ್ಕಾಲಿಕ ನೆಲೆಯಲ್ಲಿ 3 ಫೇಸ್ ವಿದ್ಯುತ್ ನೀಡಲು ವ್ಯವಸ್ಥೆ ಕಲ್ಪಿಸಿ 2 ದಿನಗಳೊಳಗೆ ಹೆಚ್ಚು ಸಾಮರ್ಥ್ಯದ ಪರಿವರ್ತಕ ಅಳವಡಿಸಿ ಸಮಸ್ಯೆ ಬಗೆಹರಿಸಿಕೊಡುವುದಾಗಿ ಭರವಸೆ ನೀಡಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
Team the rural mirror

Published by
Team the rural mirror

Recent Posts

ಕರಾವಳಿಯಲ್ಲಿ ಅಕಾಲಿಕ ಮಳೆ ಅಬ್ಬರ | ಸುಬ್ರಹ್ಮಣ್ಯದ ಬಳಿ 42 ಮಿಮೀ, ಅಡಿಕೆ ಬೆಳೆಗಾರರಿಗೆ ಸಂಕಷ್ಟ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…

10 hours ago

ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?

ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…

16 hours ago

ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ

ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…

20 hours ago

ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ

ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…

20 hours ago

ರೈತರಿಗೆ ಗನ್ ಪರವಾನಗಿ : ಶೀಘ್ರದಲ್ಲೇ ಆನ್ಲೈನ್ ವ್ಯವಸ್ಥೆ ಜಾರಿ – ಜಿಲ್ಲಾಧಿಕಾರಿ ದರ್ಶನ್ ಎಚ್.ವಿ

ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…

20 hours ago

ಮಂಗಳೂರು ಅಡಿಕೆ ಮಾರುಕಟ್ಟೆ ‘ಸೈಕಲಾಜಿಕಲ್ ಬಫರ್’ ಹಂತಕ್ಕೆ…!

ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…

1 day ago