Advertisement

ಕೆಟ್ಟುಹೋದ ಪರಿವರ್ತಕ ಬದಲಿಸಲು ಪರಪ್ಪು ಪ್ರದೇಶದ ಬಳಕೆದಾರರಿಂದ ಆಗ್ರಹ

Share

ಕಡಬ: ಕಳೆದ ಕೆಲವು ಸಮಯದಿಂದ ಕಡಬದ ಪರಪ್ಪು ಪ್ರದೇಶದಲ್ಲಿನ ವಿದ್ಯುತ್ ಪರಿವರ್ತಕ ಕೆಟ್ಟು ಹೋಗಿ ನಿರಂತರವಾಗಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಕಡಬ ಮೆಸ್ಕಾಂ ಉಪ ವಿಭಾಗದ ಕಚೇರಿಗೆ ತೆರಳಿದ ಬಳಕೆದಾರರು ಸಮಸ್ಯೆ ಬಗೆಹರಿಸುವಂತೆ ಅಧಿಕಾರಿಗಳನ್ನು ಆಗ್ರಹಿಸಿದರು.

ಬಳಕೆದಾರರ ನಿಯೋಗದ ನೇತೃತ್ವ ವಹಿಸಿದ್ದ ಸ್ಥಳೀಯ ಮುಂದಾಳು ವೇಣುಗೋಪಾಲ ರೈ ಕೊಲ್ಲಡ್ಕ ಅವರು ಕಡಬ ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಸಜಿಕುಮಾರ್ ಅವರಿಗೆ ಮನವಿ ಸಲ್ಲಿಸಿ ಮಾತನಾಡಿ ವಿದ್ಯುತ್ ಸಮಸ್ಯೆಯಿಂದಾಗಿ ನಮ್ಮ ಪರಿಸರದಲ್ಲಿ ಅಡಿಕೆ ತೋಟಗಳು ಹಾಗೂ ಇತರ ಕೃಷಿಗಳು ನೀರಿಲ್ಲದೇ ಕರಟಿ ಹೋಗುತ್ತಿವೆ. ನೀರಾವರಿ ಪಂಪ್‍ಗಳು ಚಾಲೂ ಆಗುತ್ತಿಲ್ಲ. ಮೊದಲೇ ಧಾರಣೆ ಕುಸಿತ, ಕಾರ್ಮಿಕರ ಸಮಸ್ಯೆಯಿಂದಾಗಿ ಕಂಗೆಟ್ಟಿರುವ ಕೃಷಿಕರು ವಿದ್ಯುತ್ ಸಮಸ್ಯೆಯ ಹೊಡೆತಕ್ಕೆ ಬಸವಳಿದು ಹೋಗಿದ್ದಾರೆ. ಪರಪ್ಪು, ಕೊಲ್ಲಡ್ಕ, ಕೋಡಿ, ಕಜೆಮಾರು, ಪಲ್ಲತ್ತಾರು ಪ್ರದೇಶಕ್ಕೆ ವಿದ್ಯುತ್ ಪೂರೈಸುವ ಪರಿವರ್ತಕ ಕೆಟ್ಟು ಹೋಗಿರುವ ಕುರಿತು ಮೆಸ್ಕಾಂ ಗೆ ದೂರು ನೀಡಿ 15 ದಿನ ಕಳೆದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಸ್ಥಳೀಯ ಸುಮಾರು 36 ಮನೆಯವರು ಕುಡಿಯಲೂ ನೀರಿಲ್ಲದೆ ಪರದಾಡುತ್ತಿದ್ದಾರೆ ಎಂದು ದೂರಿದರು. ಕೂಡಲೇ ಹೊಸ ಪರಿವರ್ತಕ ಅಳವಡಿಸಲು ಕ್ರಮ ಕೈಗೊಳ್ಳದೇ ಇದ್ದಲ್ಲಿ ಊರಿನ ಎಲ್ಲಾ ವಿದ್ಯುತ್ ಬಳೆಕೆದಾರರನ್ನು ಸೇರಿಸಿಕೊಂಡು ಕಡಬ ಮೆಸ್ಕಾಂ ಕಚೇರಿ ಮುಂದೆ ಧರಣಿ ನಡೆಸುವುದಾಗಿ ಅವರು ಎಚ್ಚರಿಸಿದರು.
ಕೃಷಿಕ ವಾಸುದೇವ ಗೌಡ ಕೋಡಿ ಅವರು ಮಾತನಾಡಿ ನಾವು ಹಲವು ವರ್ಷ ಬೆವರು ಸುರಿಸಿ ಮಾಡಿದ ಕೃಷಿಗೆ ನೀರಿಲ್ಲದೆ ನಮ್ಮ ಕಣ್ಣೆದುರೇ ಕರಟಿ ಹೋಗುತ್ತಿದೆ. ಜನರಿಗೆ ಕುಡಿಯಲೂ ನೀರಿಲ್ಲದಂತಾಗಿದೆ ಎಂದು ಆಕ್ರೋಶವ್ಯಕ್ತಪಡಿಸಿದರು. ಗ್ರಾ.ಪಂ.ಸದಸ್ಯ ಹರ್ಷ ಕೋಡಿ, ಸ್ಥಳೀಯ ಪ್ರಮುಖರಾದ ಜಯರಾಮ ಗೌಡ ಅರ್ತಿಲ, ಮೋಹನ ಗೌಡ ಗೋಡಾಲ್, ಗಿರಿಧರ ರೈ ಪಜಕಳ, ಪುರಂದರ ರೈ ಪಿಜಕಳ, ಉಮೇಶ್ ನಾಯ್ಕ, ಪ್ರಸಾದ ಗೌಡ ಅಲುಂಗೂರು, ಯತೀಂದ್ರ ಗೌಡ ಗೋಡಾಲ್ ಮುಂತಾದವರು ನಿಯೋಗದಲ್ಲಿದ್ದರು.
ಮನವಿಗೆ ಪ್ರತಿಕ್ರಿಯಿಸಿ ಮಾತನಾಡಿದ ಕಡಬ ಮೆಸ್ಕಾಂ ಎಇಇ ಸಜಿಕುಮಾರ್ ಅವರು ಸದ್ಯಕ್ಕೆ ತಾತ್ಕಾಲಿಕ ನೆಲೆಯಲ್ಲಿ 3 ಫೇಸ್ ವಿದ್ಯುತ್ ನೀಡಲು ವ್ಯವಸ್ಥೆ ಕಲ್ಪಿಸಿ 2 ದಿನಗಳೊಳಗೆ ಹೆಚ್ಚು ಸಾಮರ್ಥ್ಯದ ಪರಿವರ್ತಕ ಅಳವಡಿಸಿ ಸಮಸ್ಯೆ ಬಗೆಹರಿಸಿಕೊಡುವುದಾಗಿ ಭರವಸೆ ನೀಡಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Team the rural mirror

Published by
Team the rural mirror

Recent Posts

ಹವಾಮಾನ ವರದಿ | 10.08.2026 | ಕರ್ನಾಟಕದಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆ; ಆಗಸ್ಟ್‌ 12ರಂದು ಕರಾವಳಿಯಲ್ಲಿ ಮಳೆ ಹೆಚ್ಚಳ ಸಾಧ್ಯತೆ

ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…

14 hours ago

ಕಡಿಮೆ ನೀರು, ಕಡಿಮೆ ಗೊಬ್ಬರ… ಹೆಚ್ಚು ಇಳುವರಿ – ಕೃಷಿಯಲ್ಲಿ ಹೊಸ ಕ್ರಾಂತಿ

ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…

24 hours ago

ಬರದತ್ತ ಇಂಗ್ಲೆಂಡ್‌ – ಆಹಾರ ಕೊರತೆ, ಕಾಡ್ಗಿಚ್ಚಿನ ಎಚ್ಚರಿಕೆ – ಕೃಷಿಗೆ ಭಾರಿ ಹೊಡೆತ – ರೈತರಿಗೆ ₹4,400 ಕೋಟಿ ನಷ್ಟದ ಅಂದಾಜು

ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್‌ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…

24 hours ago

ಹವಾಮಾನ ವರದಿ | 09.08.2026 | ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ ಕ್ಷೀಣ; ಆಗಸ್ಟ್‌ 11ರಿಂದ ಮಲೆನಾಡಿನಲ್ಲೂ ಮಳೆ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…

2 days ago

ಕೃಷಿ ಉತ್ಪನ್ನಕ್ಕೆ ಮೌಲ್ಯವರ್ಧನೆ – ಒಡಿಶಾದಲ್ಲಿ ₹43,437 ಕೋಟಿ ಹೂಡಿಕೆ ಪ್ರಸ್ತಾವನೆ

ಆಹಾರ ಸಂಸ್ಕರಣಾ ವಲಯದಲ್ಲಿ ಒಡಿಶಾ ₹43,437 ಕೋಟಿ ಮೌಲ್ಯದ ಹೂಡಿಕೆ ಪ್ರಸ್ತಾವನೆಗಳನ್ನು ಆಕರ್ಷಿಸಿದ್ದು,…

2 days ago

ಕರ್ನಾಟಕದ 69.60 ಲಕ್ಷ ಹೆಕ್ಟೇರ್ ಭೂಮಿ ಹಾನಿ – ಕೃಷಿ ಉತ್ಪಾದಕತೆಗೆ ದೊಡ್ಡ ಸವಾಲು

ಕರ್ನಾಟಕದಲ್ಲಿ 69.60 ಲಕ್ಷ ಹೆಕ್ಟೇರ್ ಭೂಮಿ ಭೂಸವಕಳಿ ವ್ಯಾಪ್ತಿಯಲ್ಲಿದೆ ಎಂದು ಕೇಂದ್ರ ಸರ್ಕಾರದ…

2 days ago