Advertisement

ಕೆಟ್ಟುಹೋದ ಪರಿವರ್ತಕ ಬದಲಿಸಲು ಪರಪ್ಪು ಪ್ರದೇಶದ ಬಳಕೆದಾರರಿಂದ ಆಗ್ರಹ

Share

ಕಡಬ: ಕಳೆದ ಕೆಲವು ಸಮಯದಿಂದ ಕಡಬದ ಪರಪ್ಪು ಪ್ರದೇಶದಲ್ಲಿನ ವಿದ್ಯುತ್ ಪರಿವರ್ತಕ ಕೆಟ್ಟು ಹೋಗಿ ನಿರಂತರವಾಗಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಕಡಬ ಮೆಸ್ಕಾಂ ಉಪ ವಿಭಾಗದ ಕಚೇರಿಗೆ ತೆರಳಿದ ಬಳಕೆದಾರರು ಸಮಸ್ಯೆ ಬಗೆಹರಿಸುವಂತೆ ಅಧಿಕಾರಿಗಳನ್ನು ಆಗ್ರಹಿಸಿದರು.

ಬಳಕೆದಾರರ ನಿಯೋಗದ ನೇತೃತ್ವ ವಹಿಸಿದ್ದ ಸ್ಥಳೀಯ ಮುಂದಾಳು ವೇಣುಗೋಪಾಲ ರೈ ಕೊಲ್ಲಡ್ಕ ಅವರು ಕಡಬ ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಸಜಿಕುಮಾರ್ ಅವರಿಗೆ ಮನವಿ ಸಲ್ಲಿಸಿ ಮಾತನಾಡಿ ವಿದ್ಯುತ್ ಸಮಸ್ಯೆಯಿಂದಾಗಿ ನಮ್ಮ ಪರಿಸರದಲ್ಲಿ ಅಡಿಕೆ ತೋಟಗಳು ಹಾಗೂ ಇತರ ಕೃಷಿಗಳು ನೀರಿಲ್ಲದೇ ಕರಟಿ ಹೋಗುತ್ತಿವೆ. ನೀರಾವರಿ ಪಂಪ್‍ಗಳು ಚಾಲೂ ಆಗುತ್ತಿಲ್ಲ. ಮೊದಲೇ ಧಾರಣೆ ಕುಸಿತ, ಕಾರ್ಮಿಕರ ಸಮಸ್ಯೆಯಿಂದಾಗಿ ಕಂಗೆಟ್ಟಿರುವ ಕೃಷಿಕರು ವಿದ್ಯುತ್ ಸಮಸ್ಯೆಯ ಹೊಡೆತಕ್ಕೆ ಬಸವಳಿದು ಹೋಗಿದ್ದಾರೆ. ಪರಪ್ಪು, ಕೊಲ್ಲಡ್ಕ, ಕೋಡಿ, ಕಜೆಮಾರು, ಪಲ್ಲತ್ತಾರು ಪ್ರದೇಶಕ್ಕೆ ವಿದ್ಯುತ್ ಪೂರೈಸುವ ಪರಿವರ್ತಕ ಕೆಟ್ಟು ಹೋಗಿರುವ ಕುರಿತು ಮೆಸ್ಕಾಂ ಗೆ ದೂರು ನೀಡಿ 15 ದಿನ ಕಳೆದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಸ್ಥಳೀಯ ಸುಮಾರು 36 ಮನೆಯವರು ಕುಡಿಯಲೂ ನೀರಿಲ್ಲದೆ ಪರದಾಡುತ್ತಿದ್ದಾರೆ ಎಂದು ದೂರಿದರು. ಕೂಡಲೇ ಹೊಸ ಪರಿವರ್ತಕ ಅಳವಡಿಸಲು ಕ್ರಮ ಕೈಗೊಳ್ಳದೇ ಇದ್ದಲ್ಲಿ ಊರಿನ ಎಲ್ಲಾ ವಿದ್ಯುತ್ ಬಳೆಕೆದಾರರನ್ನು ಸೇರಿಸಿಕೊಂಡು ಕಡಬ ಮೆಸ್ಕಾಂ ಕಚೇರಿ ಮುಂದೆ ಧರಣಿ ನಡೆಸುವುದಾಗಿ ಅವರು ಎಚ್ಚರಿಸಿದರು.
ಕೃಷಿಕ ವಾಸುದೇವ ಗೌಡ ಕೋಡಿ ಅವರು ಮಾತನಾಡಿ ನಾವು ಹಲವು ವರ್ಷ ಬೆವರು ಸುರಿಸಿ ಮಾಡಿದ ಕೃಷಿಗೆ ನೀರಿಲ್ಲದೆ ನಮ್ಮ ಕಣ್ಣೆದುರೇ ಕರಟಿ ಹೋಗುತ್ತಿದೆ. ಜನರಿಗೆ ಕುಡಿಯಲೂ ನೀರಿಲ್ಲದಂತಾಗಿದೆ ಎಂದು ಆಕ್ರೋಶವ್ಯಕ್ತಪಡಿಸಿದರು. ಗ್ರಾ.ಪಂ.ಸದಸ್ಯ ಹರ್ಷ ಕೋಡಿ, ಸ್ಥಳೀಯ ಪ್ರಮುಖರಾದ ಜಯರಾಮ ಗೌಡ ಅರ್ತಿಲ, ಮೋಹನ ಗೌಡ ಗೋಡಾಲ್, ಗಿರಿಧರ ರೈ ಪಜಕಳ, ಪುರಂದರ ರೈ ಪಿಜಕಳ, ಉಮೇಶ್ ನಾಯ್ಕ, ಪ್ರಸಾದ ಗೌಡ ಅಲುಂಗೂರು, ಯತೀಂದ್ರ ಗೌಡ ಗೋಡಾಲ್ ಮುಂತಾದವರು ನಿಯೋಗದಲ್ಲಿದ್ದರು.
ಮನವಿಗೆ ಪ್ರತಿಕ್ರಿಯಿಸಿ ಮಾತನಾಡಿದ ಕಡಬ ಮೆಸ್ಕಾಂ ಎಇಇ ಸಜಿಕುಮಾರ್ ಅವರು ಸದ್ಯಕ್ಕೆ ತಾತ್ಕಾಲಿಕ ನೆಲೆಯಲ್ಲಿ 3 ಫೇಸ್ ವಿದ್ಯುತ್ ನೀಡಲು ವ್ಯವಸ್ಥೆ ಕಲ್ಪಿಸಿ 2 ದಿನಗಳೊಳಗೆ ಹೆಚ್ಚು ಸಾಮರ್ಥ್ಯದ ಪರಿವರ್ತಕ ಅಳವಡಿಸಿ ಸಮಸ್ಯೆ ಬಗೆಹರಿಸಿಕೊಡುವುದಾಗಿ ಭರವಸೆ ನೀಡಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Team the rural mirror

Published by
Team the rural mirror

Recent Posts

ಹವಾಮಾನ ವರದಿ | 19-07-2026 | ಜುಲೈ 20 ರಿಂದ ಮಳೆ ಇಳಿಮುಖ…! ಕರಾವಳಿ–ಮಲೆನಾಡಿನಲ್ಲಿ ಮಾತ್ರ ಅಲ್ಲಲ್ಲಿ ಮಳೆ ಮುಂದುವರಿಕೆ

ಜುಲೈ 20ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಇಳಿಮುಖವಾಗುವ ಲಕ್ಷಣಗಳಿವೆ. ಉತ್ತರ…

7 hours ago

ಹಲಸಿನ ಬೀಜದ ಸಿಪ್ಪೆಯಿಂದ ಕೈಗಾರಿಕಾ ಬಳಕೆಯ ಸೆಲ್ಯುಲೋಸ್..! ರೈತರಿಗೆ ಮೌಲ್ಯವರ್ಧನೆಯ ಹೊಸ ಅವಕಾಶ

ಹಲಸಿನ ಬೀಜದ ಸಿಪ್ಪೆಯಿಂದ ಮೈಕ್ರೋಕ್ರಿಸ್ಟಲೈನ್ ಸೆಲ್ಯುಲೋಸ್ ಉತ್ಪಾದಿಸುವಲ್ಲಿ ವಿಜ್ಞಾನಿಗಳು ಯಶಸ್ವಿಯಾಗಿದ್ದಾರೆ. ಕೃಷಿ ತ್ಯಾಜ್ಯವನ್ನು…

12 hours ago

ಅಪ್ಪ ಯಾಕೆ ವಿಚಿತ್ರವಾಗಿ ಕಾಣುತ್ತಾನೆ?

ಬಾಲ್ಯದಲ್ಲಿ ಕಠೋರನಂತೆ ಕಾಣುವ ಅಪ್ಪನ ನಿಜವಾದ ಪ್ರೀತಿ ಮತ್ತು ತ್ಯಾಗ ನಮ್ಮ ಬದುಕಿನ…

12 hours ago

ಉದ್ಯೋಗಾಕಾಂಕ್ಷಿಗಳಿಗೆ ಅವಕಾಶ | ಜುಲೈ 21ರಂದು ಕ್ರೆಡಿಟ್ ಕಾರ್ಡ್ ಸೇಲ್ಸ್ ಟೀಮ್ ಲೀಡರ್ ಹುದ್ದೆಗೆ ನೇರ ಸಂದರ್ಶನ

ಕ್ಯಾಲಿಬರ್ ಕಂಪೆನಿ ವತಿಯಿಂದ ಕ್ರೆಡಿಟ್ ಕಾರ್ಡ್ ಸೇಲ್ಸ್ ಟೀಮ್ ಲೀಡರ್ ಹುದ್ದೆಗಳಿಗೆ ಜುಲೈ…

23 hours ago

ಜುಲೈ 31 ರೊಳಗೆ ಬೆಳೆವಿಮೆ ನೋಂದಣಿ ಮಾಡಿಸಿಕೊಳ್ಳಿ – ಅಡಿಕೆ, ಕಾಳುಮೆಣಸು ಬೆಳೆಗಾರರಿಗೆ ಅವಕಾಶ

ದಕ್ಷಿಣ ಕನ್ನಡ ಜಿಲ್ಲೆಯ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಾರರಿಗೆ ಹವಾಮಾನ ಆಧಾರಿತ ಬೆಳೆವಿಮೆ…

1 day ago

ಕರಾವಳಿ–ಹವಾಮಾನ ವರದಿ | 18-07-2026 | ಮಲೆನಾಡಿನಲ್ಲಿ ಇನ್ನೂ 10 ದಿನ ಮಳೆ ಮುಂದುವರಿಕೆ…! ಉತ್ತರ ಒಳನಾಡಿನಲ್ಲಿ ಜುಲೈ 19 ರಿಂದ ಮಳೆ ಇಳಿಮುಖ

ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಮಳೆ ಮುಂದುವರಿಯುವ…

1 day ago