Advertisement

ಕೆಟ್ಟುಹೋದ ಪರಿವರ್ತಕ ಬದಲಿಸಲು ಪರಪ್ಪು ಪ್ರದೇಶದ ಬಳಕೆದಾರರಿಂದ ಆಗ್ರಹ

Share

ಕಡಬ: ಕಳೆದ ಕೆಲವು ಸಮಯದಿಂದ ಕಡಬದ ಪರಪ್ಪು ಪ್ರದೇಶದಲ್ಲಿನ ವಿದ್ಯುತ್ ಪರಿವರ್ತಕ ಕೆಟ್ಟು ಹೋಗಿ ನಿರಂತರವಾಗಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಕಡಬ ಮೆಸ್ಕಾಂ ಉಪ ವಿಭಾಗದ ಕಚೇರಿಗೆ ತೆರಳಿದ ಬಳಕೆದಾರರು ಸಮಸ್ಯೆ ಬಗೆಹರಿಸುವಂತೆ ಅಧಿಕಾರಿಗಳನ್ನು ಆಗ್ರಹಿಸಿದರು.

Advertisement
Advertisement

ಬಳಕೆದಾರರ ನಿಯೋಗದ ನೇತೃತ್ವ ವಹಿಸಿದ್ದ ಸ್ಥಳೀಯ ಮುಂದಾಳು ವೇಣುಗೋಪಾಲ ರೈ ಕೊಲ್ಲಡ್ಕ ಅವರು ಕಡಬ ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಸಜಿಕುಮಾರ್ ಅವರಿಗೆ ಮನವಿ ಸಲ್ಲಿಸಿ ಮಾತನಾಡಿ ವಿದ್ಯುತ್ ಸಮಸ್ಯೆಯಿಂದಾಗಿ ನಮ್ಮ ಪರಿಸರದಲ್ಲಿ ಅಡಿಕೆ ತೋಟಗಳು ಹಾಗೂ ಇತರ ಕೃಷಿಗಳು ನೀರಿಲ್ಲದೇ ಕರಟಿ ಹೋಗುತ್ತಿವೆ. ನೀರಾವರಿ ಪಂಪ್‍ಗಳು ಚಾಲೂ ಆಗುತ್ತಿಲ್ಲ. ಮೊದಲೇ ಧಾರಣೆ ಕುಸಿತ, ಕಾರ್ಮಿಕರ ಸಮಸ್ಯೆಯಿಂದಾಗಿ ಕಂಗೆಟ್ಟಿರುವ ಕೃಷಿಕರು ವಿದ್ಯುತ್ ಸಮಸ್ಯೆಯ ಹೊಡೆತಕ್ಕೆ ಬಸವಳಿದು ಹೋಗಿದ್ದಾರೆ. ಪರಪ್ಪು, ಕೊಲ್ಲಡ್ಕ, ಕೋಡಿ, ಕಜೆಮಾರು, ಪಲ್ಲತ್ತಾರು ಪ್ರದೇಶಕ್ಕೆ ವಿದ್ಯುತ್ ಪೂರೈಸುವ ಪರಿವರ್ತಕ ಕೆಟ್ಟು ಹೋಗಿರುವ ಕುರಿತು ಮೆಸ್ಕಾಂ ಗೆ ದೂರು ನೀಡಿ 15 ದಿನ ಕಳೆದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಸ್ಥಳೀಯ ಸುಮಾರು 36 ಮನೆಯವರು ಕುಡಿಯಲೂ ನೀರಿಲ್ಲದೆ ಪರದಾಡುತ್ತಿದ್ದಾರೆ ಎಂದು ದೂರಿದರು. ಕೂಡಲೇ ಹೊಸ ಪರಿವರ್ತಕ ಅಳವಡಿಸಲು ಕ್ರಮ ಕೈಗೊಳ್ಳದೇ ಇದ್ದಲ್ಲಿ ಊರಿನ ಎಲ್ಲಾ ವಿದ್ಯುತ್ ಬಳೆಕೆದಾರರನ್ನು ಸೇರಿಸಿಕೊಂಡು ಕಡಬ ಮೆಸ್ಕಾಂ ಕಚೇರಿ ಮುಂದೆ ಧರಣಿ ನಡೆಸುವುದಾಗಿ ಅವರು ಎಚ್ಚರಿಸಿದರು.
ಕೃಷಿಕ ವಾಸುದೇವ ಗೌಡ ಕೋಡಿ ಅವರು ಮಾತನಾಡಿ ನಾವು ಹಲವು ವರ್ಷ ಬೆವರು ಸುರಿಸಿ ಮಾಡಿದ ಕೃಷಿಗೆ ನೀರಿಲ್ಲದೆ ನಮ್ಮ ಕಣ್ಣೆದುರೇ ಕರಟಿ ಹೋಗುತ್ತಿದೆ. ಜನರಿಗೆ ಕುಡಿಯಲೂ ನೀರಿಲ್ಲದಂತಾಗಿದೆ ಎಂದು ಆಕ್ರೋಶವ್ಯಕ್ತಪಡಿಸಿದರು. ಗ್ರಾ.ಪಂ.ಸದಸ್ಯ ಹರ್ಷ ಕೋಡಿ, ಸ್ಥಳೀಯ ಪ್ರಮುಖರಾದ ಜಯರಾಮ ಗೌಡ ಅರ್ತಿಲ, ಮೋಹನ ಗೌಡ ಗೋಡಾಲ್, ಗಿರಿಧರ ರೈ ಪಜಕಳ, ಪುರಂದರ ರೈ ಪಿಜಕಳ, ಉಮೇಶ್ ನಾಯ್ಕ, ಪ್ರಸಾದ ಗೌಡ ಅಲುಂಗೂರು, ಯತೀಂದ್ರ ಗೌಡ ಗೋಡಾಲ್ ಮುಂತಾದವರು ನಿಯೋಗದಲ್ಲಿದ್ದರು.
ಮನವಿಗೆ ಪ್ರತಿಕ್ರಿಯಿಸಿ ಮಾತನಾಡಿದ ಕಡಬ ಮೆಸ್ಕಾಂ ಎಇಇ ಸಜಿಕುಮಾರ್ ಅವರು ಸದ್ಯಕ್ಕೆ ತಾತ್ಕಾಲಿಕ ನೆಲೆಯಲ್ಲಿ 3 ಫೇಸ್ ವಿದ್ಯುತ್ ನೀಡಲು ವ್ಯವಸ್ಥೆ ಕಲ್ಪಿಸಿ 2 ದಿನಗಳೊಳಗೆ ಹೆಚ್ಚು ಸಾಮರ್ಥ್ಯದ ಪರಿವರ್ತಕ ಅಳವಡಿಸಿ ಸಮಸ್ಯೆ ಬಗೆಹರಿಸಿಕೊಡುವುದಾಗಿ ಭರವಸೆ ನೀಡಿದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
Team the rural mirror

Published by
Team the rural mirror

Recent Posts

ನಿಮಗಿದು ಗೊತ್ತೇ? : ಆರೋಗ್ಯಕ್ಕಾಗಿ ಭೂ ವಿದ್ಯುತ್ ಆಯಸ್ಕಾಂತದ ಮಹತ್ವ… : ಅರ್ಥಿಂಗ್/ಗ್ರೌಂಡಿಂಗ್ ಹಾಗೂ ಆರೋಗ್ಯ!

ಪರಿಸರ ಔಷಧ ಶಾಸ್ತ್ರವು(Environmental Medicine) ಸಾಮಾನ್ಯವಾಗಿ ಮಾನವನ ಆರೋಗ್ಯದ(Human health) ಮೇಲೆ ನಕಾರಾತ್ಮಕ…

2 hours ago

ಎರಡನೇ ಹಂತದ ಮತದಾನಕ್ಕೆ ರಾಜ್ಯದಲ್ಲಿ ಭರ್ಜರಿ ತಯಾರಿ : ಭಾರತ ವಿಶ್ವದ ಟಾಪ್ 3 ಸ್ಥಾನಕ್ಕೇರಿಸುವ ಶಕ್ತಿ ನಿಮ್ಮ ಮತಕ್ಕಿದೆ : ಮೋದಿ

ಕರ್ನಾಟಕದಲ್ಲಿ(Karnakta) ಮೊದಲ ಹಂತದ ಚುನಾವಣೆ(Election) ಮುಗಿದಿದ್ದು, ಎರಡನೇ ಹಂತದ ಚುನಾವಣೆಗೆ ಭರ್ಜರಿ ಪ್ರಚಾರ(Campaign)…

2 hours ago

ರೈತರ ಪಾಲಿಗೆ ನೆರವಾದ ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ಯೋಜನೆ : 17ನೇ ಕಂತಿನ ಹಣ ರೈತರ ಖಾತೆಗೆ ಯಾವಗ ಬರುತ್ತೆ..?

ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌(PM Kisan) ಯೋಜನೆ ಆರಂಭವಾದಗಿಂದಲೂ ರೈತರ(Farmer) ಖಾತೆಗೆ ನೇರವಾಗಿ…

2 hours ago

ಇವರು ಎಲ್ಲಾ ಕುಂದುಕೊರತೆಗಳ ನಡುವೆಯೂ ಮತದಾನ ಮಾಡ್ತಾರೆ…! | ಅವರು ಎಲ್ಲಾ ಸೌಕರ್ಯ ಇದ್ದರೂ ಮತದಾನ ಮಾಡಲಾರರು..!

ನಗರದಲ್ಲಿ ಮತದಾನ ಕಡಿಮೆಯಾಗಿರುವ ಬಗ್ಗೆ ಹಾಗೂ ಗ್ರಾಮೀಣ ಭಾಗದ ಸಮಸ್ಯೆಗಳ ಬಗ್ಗೆ ಪ್ರಬಂಧ…

3 hours ago

Karnataka Weather | 29-04-2024 | ರಾಜ್ಯದ ಹಲವು ಕಡೆ ಅಧಿಕ ತಾಪಮಾನ | ಮಲೆನಾಡು ಭಾಗದ ಕೆಲವು ಕಡೆ ಮಳೆ ನಿರೀಕ್ಷೆ |

ಈಗಿನಂತೆ ಅಧಿಕ ತಾಪಮಾನದ ವಾತಾವರಣದ ಇನ್ನೂ 3 ರಿಂದ 4 ದಿನಗಳ ಕಾಲ…

4 hours ago

ಮೈಸೂರು – ಚಾಮರಾಜನಗರ ಭಾಗದ ಪ್ರಭಾವಿ ನಾಯಕ | ಬಿಜೆಪಿ ಸಂಸದ ವಿ. ಶ್ರೀನಿವಾಸ್‌ ಪ್ರಸಾದ್‌ ಇನ್ನಿಲ್ಲ

ಚಾಮರಾಜನಗರ ಕ್ಷೇತ್ರದ ಬಿಜೆಪಿ ಸಂಸದ, ಮೈಸೂರು – ಚಾಮರಾಜನಗರ ಭಾಗದ ಪ್ರಭಾವಿ ದಲಿತ…

5 hours ago