ಸುಳ್ಯ:ಮಾವಿನಕಟ್ಟೆ ಶ್ರೀ ಮಹಾವಿಷ್ಣು ಮೂರ್ತಿ ದೈವಸ್ಥಾನ ಕೆರೆಗೆ ಬಿದ್ದಿದ್ದ ಕಾಡುಕೋಣದ ಮರಿ ಶನಿವಾರ ಸಂಜೆಯ ಹೊತ್ತಿಗೆ ಕಾಡು ಸೇರಿತು. ಶನಿವಾರ ಬೆಳಗ್ಗಿನಿಂದಲೇ ಸತತ ಪ್ರಯತ್ನದ ಬಳಿಕ ಕಾಡು ಸೇರಲು ಸಾಧ್ಯವಾಯಿತು.
ಸುಳ್ಯ ತಾಲೂಕಿನ ದೇವಚಳ್ಳ ಗ್ರಾಮದ ಮಾವಿನಕಟ್ಟೆ ಶ್ರೀ ಮಹಾವಿಷ್ಣು ಮೂರ್ತಿ ದೈವಸ್ಥಾನ ಉದಯಗಿರಿ ಇಲ್ಲಿಯ ಕೆರೆಗೆ ಶುಕ್ರವಾರ ರಾತ್ರಿ ಆಯ ತಪ್ಪಿ ಕಾಡುಕೋಣ ಬಿದ್ದಿತ್ತು. ಶನಿವಾರ ಬೆಳಗ್ಗೆ ಸ್ಥಳೀಯರಿಗೆ ತಿಳಿದು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ಬಳಿಕ ಸಂಜೆಯವರೆಗೆ ಕಾರ್ಯಾಚರಣೆ ನಡೆದಿತ್ತು.
ಕಾಡುಕೋಣ ಬಿದ್ದ ವಿಷಯ ತಿಳಿದು ಜನ ಸಾಗರವೇ ಕೆರೆಯ ಕಡೆಗೆ ಬಂದಿತ್ತು. ಬೆಳಗ್ಗಿನಿಂದಲೇ ಕಾಡು ಕೋಣ ರಕ್ಷಣೆ ಕಾರ್ಯ ಪ್ರಾರಂಭವಾಯಿತು. ನೀರಿಗೆ ಬಿದ್ದು ಸುಸ್ತಾಗಿದ್ದ ಕಾಡುಕೋಣವನ್ನು ಕೋಣವನ್ನು ಹೊರ ಹಾಕುವುದು ತ್ರಾಸದಾಯಕವಾಯಿತು. ಅರಣ್ಯ ಇಲಾಖೆಯ ಅಧಿಕಾರಿಗಳ ಮಾರ್ಗದರ್ಶನ ದಲ್ಲಿ ಯುವಕರ ಶ್ರಮದಿಂದ ಸಂಜೆಯ ವರೆಗೂ ಕಾರ್ಯ ಮುಂದುವರೆಯಿತು. ಕಾಡುಕೋಣವನ್ನು ರಕ್ಷಣೆ ಮಾಡುವುದು ಎಲ್ಲರ ಕಾಳಜಿಯಾಗಿತ್ತು. ಬೆಳಗ್ಗೆ ಅಡಿಕೆ ಮರದ ಪಾಲ ಹಾಕಿದ್ದರೆ ನಂತರ ಹಗ್ಗದ ಸಹಾಯದಿಂದ ಮೇಲೆಳೆದು ಓಡುವಂತೆ ಮಾಡಲಾಯಿತು. ಕೊನೆಗೂ ಸಂಜೆಯ ವೇಳೆಗೆ ಕಾಡುಕೋಣ ಕಾಡು ಸೇರಿತು.
ಈ ಕಾರ್ಯದಲ್ಲಿ ಸಹಕರಿಸಿದ ಎಲ್ಲರಿಗೂ ಅರಣ್ಯ ಇಲಾಖೆ ವಂದನೆ ಸಲ್ಲಿಸಿದೆ. ವನ್ಯ ಜೀವಿಗಳ ರಕ್ಷಣೆ ನಮ್ಮದು. ಪರಿಸರ ಉಳಿಸಿ ಎಂಬ ಘೋಷ ವಾಕ್ಯ ಮೊಳಗಿತು.
ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…
ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…
ಮ್ಯಾನ್ಮಾರ್ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…
ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…